ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನಾಮ ನಿರ್ದೇಶಿತ ನಿರ್ದೇಶಕನ್ನಾಗಿ ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆ ಅಧೀಕ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾಯ್ದೆಯ ಅಡಿಯಲ್ಲಿ ರುದ್ರೇಶ್ ಅವರನ್ನು ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ವೃತ್ತಿಯಿಂದ ವಕೀಲರಾದ ಮಂಗೋಟೆ ರುದ್ರೇಶ್ ಅವರು ಭದ್ರಾವತಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾಗಿಯೂ ಸಹ ಅನುಭವ ಹೊಂದಿದ್ದಾರೆ. ಸ್ನೇಹ ಜೀವಿ ಎಂದು ಸಾರ್ವಜನಿಕ ವಲಯದಲ್ಲಿ ಹೆಸರು ಗಳಿಸಿರುವ ರುದ್ರೇಶ್ ಅವರ ಸಾಮಾಜಿಕ ಕಳಕಳಿ ಮಾತ್ರವಲ್ಲದೇ ಯುವ ಮುಖಂಡರಾಗಿಯೂ ಸಹ ರಾಜಕೀಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ.
ರುದ್ರೇಶ್ ಅವರ ನಾಮ ನಿರ್ದೇಶನಕ್ಕೆ ಭದ್ರಾವತಿ ಬಿಜೆಪಿ ಮುಖಂಡರಾದ ಸುನಿಲ್ ಗಾಯಕ್ವಾಡ್ ಸೇರಿದಂತೆ ಹಲವರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post