ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಸೀಗೆಹಟ್ಟಿಯ ಬಿಬಿ ರಸ್ತೆಯಲ್ಲಿ ರಾತ್ರೋರಾತ್ರಿ ವಾಹನಕ್ಕೆ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳನ್ನು ಬಂಧಿಸುವಲ್ಲಿ ದೊಡ್ಡ ಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಜುಲೈ 17ರಂದು ಬೆಳಗಿನ ಜಾವ ಬಿಬಿ ರಸ್ತೆಯ ಹಳೇ ಪೋಸ್ಟ್ ಆಫೀಸ್ ಎದುರಿಗೆ ನಿಲ್ಲಿಸಿದ್ದ ಆಟೋಗೆ ಬೆಂಕಿ ಹಚ್ಚಲಾಗಿತ್ತು. ಈ ಘಟನೆ ನಗರದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕುರಿತಂತೆ ದೊಡ್ಡ ಪೇಟೆ ಪ್ರಕರಣ ದಾಖಲಾಗಿತ್ತು. ಇದರ ತನಿಖೆ ಹಾಗೂ ಆರೋಪಿಗಳ ಪತ್ತೆಗಾಗಿ ಶಿವಮೊಗ್ಗ ಉಪ ವಿಭಾಗದ ಡಿಎಸ್’ಪಿ ಉಮೇಶ್ ಈಶ್ವರ್ ನಾಯಕ್ ಅವರ ಮಾರ್ಗದರ್ಶನದಲ್ಲಿ ದೊಡ್ಡಪೇಟೆ ಸಿಪಿಐ ವಸಂತ್ ಕುಮಾರ್ ಅವರ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿತ್ತು.
ಸಿಪಿಐ ವಸಂತ್ ಕುಮಾರ್ ಅವರ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಆರೋಪಿಗಳನ್ನು ಸ್ಟೀಫನ್ ಕುಮಾರ್(22) ಹಾಗೂ ಮೆಹಬೂಬ್(34) ಎಂದು ಗುರುತಿಸಲಾಗಿದ್ದು, ಇವರಿಂದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ನಗರದಲ್ಲಿ ವ್ಯಾಪಕ ಟೀಕೆಗೆ ಕಾರಣವಾಗಿದ್ದ ಈ ಘಟನೆಯ ಆರೋಪಿಗಳನ್ನು ಶೀಘ್ರವೇ ಬಂಧಿಸುವಲ್ಲಿ ಯಶಸ್ವಿಯಾಗಿರುವ ಸಿಪಿಐ ವಸಂತ ಕುಮಾರ್ ಹಾಗೂ ಅವರ ತಂಡಕ್ಕೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಅಭಿನಂದಿಸುತ್ತದೆ.
Get In Touch With Us info@kalpa.news Whatsapp: 9481252093
Discussion about this post