ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಪ್ರಧಾನಿ ನರೇಂದ್ರ ಅವರ ನಾಯಕತ್ವಕ್ಕೆ ಸ್ಥಳೀಯ ಮಟ್ಟದಿಂದ ರಾಷ್ಟ್ರಮಟ್ಟದವರೆಗೂ ಮನ್ನಣೆ ದೊರೆಯುತ್ತಿರುವುದು ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಎಂಎಸ್’ಐಎಲ್ ಅಧ್ಯಕ್ಷ, ಶಾಸಕ ಎಚ್. ಹಾಲಪ್ಪ ಬಣ್ಣಿಸಿದರು.
ವಿವಿಧ ಪಕ್ಷಗಳ ಸುಮಾರು 30ಕ್ಕೂ ಅಧಿಕ ಮುಖಂಡರು ಬಿಜೆಪಿ ಸೇರಿದ ವೇಳೆ ಸಾಗರ ಬಿಜೆಪಿ ಕಾರ್ಯಾಲಯದಲ್ಲಿ ಅವರು ಮಾತನಾಡಿದರು.
ಕಸಬಾ ಮಹಾ ಶಕ್ತಿಕೇಂದ್ರ ಅಧ್ಯಕ್ಷರಾದ ಬಂಗಾರಪ್ಪ ಪಡವಗೋಡು ಇವರ ಮುಂದಾಳತ್ವದಲ್ಲಿ ತಾಪಂ ಸದಸ್ಯರಾದ ಕಲಸೆ ಚಂದ್ರಪ್ಪ ಹಾಗೂ ನಾಡಕಲಸೆ ಗ್ರಾಪಂ ಅಧ್ಯಕ್ಷರಾದ ಕೃಷ್ಣಮೂರ್ತಿ ಇವರ ನೇತೃತ್ವದಲ್ಲಿ ವಿವಿಧ ಪಕ್ಷಗಳ 30 ಕ್ಕೂ ಹೆಚ್ಚು ಮುಖಂಡರು, ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು, ಗ್ರಾಮಾಂತರ ಹಾಗೂ ನಗರ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಪಕ್ಷದ ವಿವಿಧ ಹಂತದ ಪ್ರಮುಖರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post