ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಬೆಳೆದ ಮಾತಿಗೆ ಮಾತು, ಓರ್ವನ ಕೊಲೆಯಲ್ಲಿ ಅಂತ್ಯವಾಗಿದ ಘಟನೆ ನಗರದಲ್ಲಿ ನಡೆದಿದೆ.
ಎನ್.ಟಿ. ರಸ್ತೆಯ ಸುಂದರ ಆಶ್ರಯ ಪಕ್ಕದ ವಿಠಲ ದೇವಾಲಯದ ಬಳಿಯೇ ಈ ಘಟನೆ ನಡೆದಿದ್ದು, ಐದಾರು ಯುವಕರ ತಂಡ ನಡೆಸಿದ ಮಾರಾಣಾಂತಿಕ ಹಲ್ಲೆಯಲ್ಲಿ ಓರ್ವ ಯುವಕನ ಹತ್ಯೆಯಾಗಿದೆ. ಕೆ.ಆರ್. ಪುರಂ ರಸ್ತೆಯ ಜೀವನ್ (26) ಹಾಗೂ ಕೇಶವ್ ಶೆಟ್ಟಿ (27) ಎಂಬಿಬ್ಬರ ಮೇಲೆಯೇ ಈ ಹಲ್ಲೆ ನಡೆಸಲಾಗಿದ್ದು, ತೀವ್ರ ಹಲ್ಲೆಗೊಳಗಾದ ಚಾಕುವಿನಿಂದ ಇರಿತಕ್ಕೊಳಗಾದ ಜೀವನ್ ಸಾವು ಕಂಡಿದ್ದಾನೆ.ಇನ್ನು ಕೇಶವ್ ಶೆಟ್ಟಿಗೆ ಗಂಭೀರ ಗಾಯಗಳಾಗಿದ್ದು, ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಂದಹಾಗೆ, ಕುಡಿದಿದ್ದ ಐದಾರು ಯುವಕರ ತಂಡ ಮತ್ತು ಇಬ್ಬರು ಈ ಯುವಕರ ನಡುವೆ, ಮಾತಿಗೆ ಮಾತು ಬೆಳೆದು, ಯುವಕರಿಬ್ಬರ ಮೇಲೆ ಐದಾರು ಯುವಕರಿದ್ದ ತಂಡ ಮಾರಣಾಂತಿಕ ಹಲ್ಲೆ ನಡೆಸಿದೆ. ಜಗಳ ತಾರಕಕ್ಕೇರುತ್ತಿದ್ದಂತೆ, ಜೀವನ್ ಮತ್ತು ಕೇಶವ್ ಶೆಟ್ಟಿ ಓಡಲು ಯತ್ನಿಸಿದ್ದಾರೆ. ಈ ವೇಳೆ ನಡೆಸಿದ ಹಲ್ಲೆಯಲ್ಲಿ ಜೀವನ್ ಸಾವನಪ್ಪಿದ್ದಾನೆ. ನಿನ್ನೆ ರಾತ್ರಿ ಸುಮಾರು 11.30 ರ ವೇಳೆಗೆ ಈ ಘಟನೆ ನಡೆದಿದ್ದು, ಘಟನೆ ನಡೆಯುತ್ತಿದ್ದಂತೆ, ದೊಡ್ಡಪೇಟೆ ಪೊಲೀಸ್ ಠಾಣೆಯ ಸಿಪಿಐ ವಸಂತ್ ಕುಮಾರ್ ಪರಿಶೀಲನೆ ನಡೆಸಿದ್ದಾರೆ.ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಶೋಧದಲ್ಲಿ ಪೊಲೀಸರು ತೊಡಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post