ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ತ್ಯಾವರೆಕೊಪ್ಪದ ಸರ್ವೇ ನಂಬರ್ 50ರಲ್ಲಿ ಸುಮಾರು 30ಎಕರೆ ಭೂಪ್ರದೇಶದಲ್ಲಿ ರಾಷ್ಟ್ರ ಮತ್ತು ಅಂತರರ್ಟ್ರಾೀಯ ಮಾದರಿಯಲ್ಲಿ ಕ್ರೀಡಾಗ್ರಾಮ ನಿರ್”ುಸಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಅವರು ಇಂದು ಕ್ರೀಡಾ ಗ್ರಾಮ ನಿರ್ಮಾಣ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ “ವರ ನೀಡಿ ಮಾತನಾಡಿದ ಅವರು, ಖೇಲೋ ಇಂಡಿಯಾ ಯೋಜನೆಯಡಿ ಕ್ರೀಡಾ ಗ್ರಾಮ ನಿರ್ಮಾಣ ಕಾರ್ಯ ನಡೆಯಲಿದೆ. “ಂದೆ ಕೆ.ಎಸ್.ಈಶ್ವರಪ್ಪ ಅವರು ಕ್ರೀಡಾ ಸಚಿವರಾಗಿದ್ದ ಅವಧಿಯಲ್ಲಿ ಈ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿತ್ತು. ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜುಜಿ ಅವರನ್ನು ಭೇಟಿ ಮಾಡಿ ಮನ” ಮಾಡಿದಾಗ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಅಲ್ಲದೇ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸಕಾಲದಲ್ಲಿ ಮಾ”ತಿ ನೀಡಿ ಸಹಕರಿಸಿದ್ದರು ಎಂದರು.

ಪ್ರಸ್ತುತ ಭಾರತೀಯ ಕ್ರೀಡಾ ಪ್ರಾಧಿಕಾರದ ಕುರಿಯನ್ ಮ್ಯಾಥ್ಯೂ, ಹರೀಶ್, ಸುರೇಶ್ ಮತ್ತು ಅಸುತೋಷ್ ಘೋಷ್ ಅವರನ್ನೊಳಗೊಂಡ ಕೇಂದ್ರದ ಕ್ರೀಡಾ ತಜ್ಞರ ತಂಡವು ಸ್ಥಳ ಪರಿಶೀಲನೆಗಾಗಿ ಆಗಮಿಸಿದ್ದು, ಅವರ ನಿರೀಕ್ಷೆಯಂತೆ ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ, ಬಸ್ನಿಲ್ದಾಣ, ತರಬೇತಿಗಾಗಿ ಬಳಸಲಾಗುತ್ತಿರುವ ನೆಹರೂ ಕ್ರೀಡಾಂಗಣ, ಪ್ರಸ್ತಾಪಿತ ಕ್ರೀಡಾ ಗ್ರಾಮಕ್ಕಿರುವ ಅಂತರ, ಸೌಲಭ್ಯಗಳು ಮತ್ತಿತರ ವಿವರಗಳನ್ನು ತಂಡಕ್ಕೆ ಒದಗಿಸಲಾಗಿದೆ ಎಂದ ಅವರು, ನಗರದ ಕ್ರೀಡಾಸಕ್ತರ ಬಹುದಿನಗಳ ಕನಸು ಶೀಘ್ರದಲ್ಲಿ ಸಾಕಾರಗೊಳ್ಳುವ ನಿರೀಕ್ಷೆ ಇದೆ ಎಂದರು.
ಕ್ರೀಡಾ ಗ್ರಾಮ ನಿರ್ಮಾಣಕ್ಕೆ ಅಗತ್ಯವಾಗಿರುವ ಅನುದಾನವನ್ನು ಪ್ರಸಕ್ತ ಸಾಲಿನಲ್ಲಿಯೇ ಬಿಡುಗಡೆಗೊಳಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದ ಅವರು, ನಗರದ ಸಹ್ಯಾದ್ರಿ ಕಾಲೇಜಿನ ಅಭಿವೃದ್ಧಿ ಕಾರ್ಯಗಳಿಗೆ ಸಲ್ಲಿಸಲಾದ 8.50ಕೋಟಿ ರೂ.ಗಳಲ್ಲಿ 4ಕೋಟಿ ರೂ.ಗಳು ಬಿಡುಗಡೆಯಾಗಿವೆ. ಅಲ್ಲದೇ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಒಳಾಂಗಣ ಕ್ರೀಡಾಂಗಣಗಳ ನಿರ್ಮಾಣಕ್ಕಾಗಿ 3-4ಕೋಟಿ ರೂ.ಗಳನ್ನು ಬಿಡುಗಡೆಗೊಳಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ. ವಯಸ್ಕರ ಆರೋಗ್ಯ, ಯುವಕರ, ಕ್ರೀಡಾಸಕ್ತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯಯೋಜನೆ ರೂಪಿಸಲಾಗಿದೆ ಎಂದರು.

ಈ ಕ್ರೀಡಾಗ್ರಾಮದಲ್ಲಿ ವಿಶೇಷವಾಗಿ ಅಥ್ಲೆಟಿಕ್, ವಾಲಿಬಾಲ್, ಫುಟ್ಬಾಲ್, ಹಾಕಿ ಜೂಡೋ, ಕುಸ್ತಿ ಸೇರಿದಂತೆ ವಿವಿಧ ಗುಂಪು ಸ್ಪರ್ಧೆಗಳಿಗೆ ಅವಕಾಶ ಕಲ್ಪಿಸಲು ಉದ್ದೇಶಿಸಲಾಗಿದೆ. ಅಲ್ಲದೆ ಜಿಲ್ಲೆಯಲ್ಲಿ ಕ್ರೀಡಾಕ್ಷೇತ್ರದಲ್ಲಿನ ಅಸಾಧಾರಣ ಸಾಧಕರ ಶ್ರಮವನ್ನು ಪರಿಗಣಿಸಲಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೇಂದ್ರ ಭೂಸಾರಿಗೆ ಮಂತ್ರಾಲಯದಿಂದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳು ಮಂಜೂರಾಗಿದ್ದು, ಅವುಗಳ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಡಿಸೆಂಬರ್ 19ರಂದು ಬೆಳಿಗ್ಗೆ 11ಕ್ಕೆ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಏರ್ಪಡಿಸಲಾಗಿದ್ದು, ಕೇಂದ್ರ ಸಚಿವ ನಿತಿನ್ ಘಡ್ಕರಿ ಅವರು ಆನ್ಲೈನ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಅವುಗಳಲ್ಲಿ ಬಹುಮುಖ್ಯವಾಗಿ 517 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶಿವಮೊಗ್ಗ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 13ರ ಬಾಕಿ ಉಳಿದ ರಸ್ತೆ ನಿರ್ಮಾಣ, ವಿದ್ಯಾನಗರದ ಬಳಿ 44 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣ, 96 ಕೋಟಿ ರೂ.ಗಳ ವೆಚ್ಚದಲ್ಲಿ ತೀರ್ಥಹಳ್ಳಿ-ಕೊಪ್ಪ-ಶೃಂಗೇರಿ ದ್ವಿಪಥದ ರಸ್ತೆ ನಿರ್ಮಾಣ, 19 ಕೋಟಿ ರೂ.ಗಳ ವೆಚ್ಚದಲ್ಲಿ ನಿಟ್ಟೂರು-ಹೊಸನಗರ ಭಾಗದ ಶರಾವತಿ ಹಿನ್ನೀರಿನ ಜೊತೆ ಸಂಪರ್ಕವಿರುವ ಶಿಥಿಲಗೊಂಡಿರುವ ಸೇತುವೆಗಳಿಗೆ ಬದಲಾಗಿ 7 ನೂತನ ಸೇತುವೆಗಳ ನಿರ್ಮಾಣ ಹಾಗೂ 8.20ಕೋಟಿ ರೂ. ವೆಚ್ಚದಲ್ಲಿ ಆಗುಂಬೆ ಬಳಿ 03 ಕಿರುಸೇತುವೆಗಳ ನಿರ್ಮಾಣಕ್ಕೆ ಚಾಲನೆ ದೊರೆಯಲಿದೆ ಎಂದವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮೇಯರ್ ಶ್ರೀಮತಿ ಸುವರ್ಣಶಂಕರ್, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ್, ಜ್ಯೋತಿಪ್ರಕಾಶ್, ಜ್ಞಾನೇಶ್ವರ, ಚನ್ನಬಸಪ್ಪ, ದತ್ತಾತ್ರಿ ಶ್ರೀಮತಿ ಸುರೇಖಾ ಮುರುಳೀಧರ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















