ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಾಲೂಕು ವೀರಶೈವ ಮಹಾಸಭಾ ಕೃತಜ್ಞತೆ ಸಲ್ಲಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಮಹಾಸಭಾ, ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜದಲ್ಲಿ ಆರ್ಥಿಕ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರಿಗೆ ರಾಜ್ಯ ಸರ್ಕಾರ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮ ಸ್ಥಾಪಿಸಿರುವುದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರವರ ದೂರದೃಷ್ಟಿಯ ಚಿಂತನೆ. ಈ ಮೂಲಕ ಸಮಾಜದ ಹಿಂದುಳಿದವರನ್ನು ಮುಖ್ಯವಾಹಿನಿಗೆ ಕರೆತರುವಅವರ ಪ್ರಯತ್ನ ಸಕಾಲಿಕವಾದದ್ದು ಹಾಗೆಯೇ ಶ್ಲಾಘನೀಯವಾದದ್ದು ಎಂದಿದೆ.
ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಜಿ. ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಸಂಗಮೇಶ್ವರ್ ಮಠದ್, ಬಿ.ಎಂ. ಮಂಜುನಾಥ್ ಹಾಗೂ ಎಲ್ಲಾ ನಿರ್ದೇಶಕರು ಸದಸ್ಯರು ತುಂಬು ಹೃದಯದ ಧನ್ಯವಾದಗಳನ್ನು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post