ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಯಾವ ಸಮೀಕ್ಷೆಗಳು ಬೇಡ, ನರೇಂದ್ರ ಮೋದಿಯವರು #Narendra Modi ಮತ್ತೆ ಪ್ರಧಾನಿಯಾಗುವುದು ಖಚಿತ ಎಂದು ಕೆ.ಎಸ್.ಈಶ್ವರಪ್ಪ #K S Eshwarappa ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಎಂಬುವುದು ನಿಮಿತ್ತ ಮಾತ್ರ. ಮೋದಿಯವರು ಜನರ ಹೃದಯವನ್ನು ಗೆದಿದ್ದಾರೆ. ಅವರು ಪ್ರಧಾನಿಯಾಗುವುದು ಖಚಿತ ಸಮೀಕ್ಷೆ ಇದಕ್ಕೆ ಇಂಬುಕೊಟ್ಟಿದೆ ಅಷ್ಟೇ ಎಂದರು.

Also read: ಪ್ರಾತ್ಯಕ್ಷಿಕೆ ಪ್ರದರ್ಶನ ಮೇಳಗಳಿಂದ ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಚಾಕಚಕ್ಯತೆ ವೃದ್ಧಿ
ರಾಜ್ಯದಲ್ಲಿನ ಸಮೀಕ್ಷೆ ಕುರಿತಂತೆ ಮಾತನಾಡಿದ ಅವರು ರಾಜ್ಯದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಖಂಡಿತಗಳಿಸುತ್ತದೆ. ಕಾಂಗ್ರೆಸ್ ಕೂಡ 7-8 ಸ್ಥಾನ ಗೆಲ್ಲುತ್ತದೆ ಎಂದು ಸಮೀಕ್ಷೆ ಹೇಳಿರುವುದು ಆಶ್ಚರ್ಯ ತಂದಿದೆ. ಅದೇನೇ ಆಗಿರಲಿ ರಾಜ್ಯದ ಬಿಜೆಪಿ ಮಟ್ಟಿಗೆ ಶುದ್ಧೀಕರಣವಂತು ಹಾಗೇ ಹಾಗುತ್ತದೆ ಎಂದರು.

ಶಿವಮೊಗ್ಗ ಸೇರಿದಂತೆ ಇಡೀ ರಾಜ್ಯದಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ. ಕಾಂಗ್ರೆಸ್ ಸರ್ಕಾರ ಮುಸ್ಲಿಂರ ಪರ ಇರುವುದು ಸ್ಪಷ್ಟವಾಗಿದೆ. ಚನ್ನಗಿರಿ ಮತ್ತು ಮಂಗಳೂರಿನಂತಹ ಘಟನೆಗಳು ಇದಕ್ಕೆ ಉದಾಹರಣೆಯಾಗಿದೆ. ಶಿವಮೊಗ್ಗದಲ್ಲಿಯೂ ಸಹ ಮತ್ತೆ ಮತ್ತೆ ಇಂತಹ ಘಟನೆ ಮರುಕಳಿಸುತ್ತಿದೆ. ಲವ್ ಜಿಹಾದ್ನಂತಹ ಘಟನೆಗಳು ನಡೆಯುತ್ತಲೇ ಇವೆ. ಕಾಂಗ್ರೆಸ್ ಸರ್ಕಾರವನ್ನು ನಾವು ನಂಬುವಂತಿಲ್ಲ. ನಮ್ಮ ಹೆಣ್ಣುಮಕ್ಕಳಿಗೆ ನಾವೇ ರಕ್ಷಣೆಯಿಂದ ನೋಡಿಕೊಳ್ಳಬೇಕು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post