ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೆ.ಎಸ್. ಈಶ್ವರಪ್ಪನವರ K S Eshwarappa ನಾಲಿಗೆಗೂ, ಮೆದುಳಿಗೂ ಲಿಂಕ್ ಇಲ್ಲ ಎಂಬುವುದನ್ನು ಅವರು ಮತ್ತೆ ಮತ್ತೆ ಸಾಬೀತುಪಡಿಸುತ್ತಿದ್ದಾರೆ ಎಂದು ಆಯನೂರು ಮಂಜುನಾಥ್ Ayanur Manjunath ವ್ಯಂಗ್ಯವಾಡಿದ್ದಾರೆ.
ಈಶ್ವರಪ್ಪನವರು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಹಾಗೂ ಅವರ ಮಗ ಯತೀಂದ್ರ ಮತಾಂತರಗೊಂಡು ಪಾಕಿಸ್ತಾನಕ್ಕೆ ಹೋಗಲಿ ಎಂದು ಹೇಳಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಈಶ್ವರಪ್ಪನವರ ನಾಲಿಗೆಗೆ ಮತ್ತೆ ಮೆದುಳಿಗೆ ಲಿಂಕ್ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಅದು ಮತ್ತೆ ಮತ್ತೆ ನಿಜವಾಗುತ್ತಿದೆ. ಅವರ ಮಾತಿನ ಸ್ಪರ್ಧೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ನಾನು ಕರ ಸೇವಕ ನನ್ನನ್ನು ಬಂಧಿಸಿ ಎಂದು ಬಂಧನಕ್ಕೆ ಒಳಗಾಗಿದ್ದಾರೆ ಎಂಬ ಈಶ್ವರಪ್ಪನವರ ಮಾತಿಗೆ ಪ್ರತಿಕ್ರಿಯಿಸಿದ ಅವರು ಬಂಧಿಸುವುದೇ ಆದರೆ ಇದೇ ವಿಷಯಕ್ಕೆ ಯಾಕೆ ಬಂಧಿಸಬೇಕು. ಈಶ್ವರಪ್ಪ ಸೇರಿದಂತೆ ಬಿಜೆಪಿ ನಾಯಕರನ್ನು ಬಂಧಿಸಲು ಬೇರೆ ಬೇರೆ ಬೇಕಾದಷ್ಟು ವಿಷಯಗಳಿವೆ. ಹಾಗೆಯೇ ಈಶ್ವರಪ್ಪನವರನ್ನು ಬಂಧಿಸಿದ್ದಾರೆಯೇ ಹೊರತು ಕೇಸು ಹಾಕಲಾಗಿದೆಯೇ ಅವರೇ ಕೇಸು ಹಾಕಬೇಡಿ ಎಂದು ಪೊಲೀಸರಿಗೆ ವಿನಂತಿಸುತ್ತಾರೆ. ಇಷ್ಟು ವರ್ಷದ ಅವರ ಹೋರಾಟದಲ್ಲಿ ಅವರ ವಿರುದ್ಧ ಒಂದಾದರೂ ಕೇಸು ಬಿದ್ದಿವೆಯೇ ಎಂದು ವ್ಯಂಗ್ಯವಾಡಿದರು.
Also read: ದೇಶದ ಹಲವು ಕಡೆ ಬಾಂಬ್ ಬೆದರಿಕೆ | ಯಾವೆಲ್ಲಾ ಸ್ಥಳಗಳಲ್ಲಿ ಆತಂಕ?
ಬಿ.ಎಸ್.ಯಡಿಯೂರಪ್ಪನವರನ್ನು B S Yadiyurappa ಜೈಲಿಗೆ ಕಳಿಸಿದ್ದು ಯಾರು ಎಂದು ಗೊತ್ತಿದೆ. ಅವರು ಜೈಲಿನಲ್ಲಿದ್ದಾಗ ಸೌಜನ್ಯಕ್ಕಾಗಿಯಾದರೂ ಇದೇ ಬಿಜೆಪಿ ನಾಯಕರು ಯಾರೂ ಹೋಗಲಿಲ್ಲ. ನಾನು ಹೋಗಿದ್ದೆ. ನನ್ನೊಂದಿಗೆ ರೇಣುಕಾಚಾರ್ಯ ಬಂದಿದ್ದರು. ಅವರು ಜೈಲಿನಲ್ಲಿದದ್ದು, ಈಗಿರುವ ಅನೇಕ ಬಿಜೆಪಿಗರಿಗೆ ಸಂತಸ ತಂದಿತ್ತು. ಇದೇ ಈಶ್ವರಪ್ಪನವರು ನಾನಾಗಿದ್ದರೆ ಪ್ರಾಣ ಕಳೆದುಕೊಳ್ಳುತ್ತಿದ್ದೆ ಎಂದಿದ್ದರು. ಎಲ್ಲಿ ಹೋಗಿದೆ ಅವರ ಮಾತು ಎಂದು ಕುಟುಕಿದರು.
ಈಗಿರುವ ಶಾಸಕ ಎಸ್.ಎನ್.ಚೆನ್ನಬಸಪ್ಪನವರು S N Channabasappa ಸಿದ್ದರಾಮಯ್ಯನವರ ತಲೆಕಡಿಯಬೇಕು ಎಂದಿದ್ದರು. ಈಗ ಸದನದ ಒಳಗೆಯೇ ಇದ್ದಾರೆ. ಅವರ ಹತ್ತಿರವೇ ಸಿದ್ದರಾಮಯ್ಯ ಇರುತ್ತಾರೆ ಕಡಿಯಲಿ ಎಂದ ಅವರು, ಅವರದೇ ಪಕ್ಷದ ಬಸವನಗೌಡ ಪಾಟೀಲ್ ಮಾಡಿರುವ 40 ಸಾವಿರ ಕೋಟಿ ಕೋವಿಡ್ ಹಗರಣದ ಬಗ್ಗೆ ಬಿಜೆಪಿ ನಾಯಕರು ಉತ್ತರಿಸಲಿ, ಅದು ತನಿಖೆಯಾಗಬೇಕು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post