ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಎಪ್ರಿಲ್ 5ರಿಂದ ವಾಹನ ಸಂಚಾರಕ್ಕೆ ಮುಕ್ತವಾಗಬೇಕಿದ್ದ ಬಾಳೆಬರೆ ಘಾಟ್ ಅನಿವಾರ್ಯ ಕಾರಣಗಳಿಂದ ಮತ್ತೆ 15 ದಿನಗಳ ಕಾಲ ಬಂದ್ ಆಗಲಿದ್ದು, ಇದಕ್ಕೆ ಪರ್ಯಾಯ ಮಾರ್ಗ ಸೂಚಿಸಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಬಾಳೇಬರೆ ಘಾಟಿಯಲ್ಲಿ 2570 ಮೀಟರ್ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು ಎಪ್ರಿಲ್ 5 ರ ವರೆಗೆ ಬಾಳೇಬರೆ ಘಾಟಿಯನ್ನು ಬಂದ್ ಮಾಡಿ ಬದಲೀ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ಕಾರಣಾಂತರದಿಂದ ಎಪ್ರಿಲ್ 15ರವರೆಗೆ ಘಾಟಿಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಿ ಕಾಮಗಾರಿ ಮುಂದುವರೆಸಲಾಗುತ್ತಿದೆ ಎಂದಿದ್ದಾರೆ.

ಬದಲಿ ಮಾರ್ಗ ಹೀಗಿದೆ:
ಈ ಮಾರ್ಗ ಮುಕ್ತಾಯವಾಗುವವರೆಗೂ ಹೊಸನಗರ-ಕುಂದಾಪುರ, ಸಾಗರ-ಕುಂದಾಪುರ ಹಾಗೂ ತೀರ್ಥಹಳ್ಳಿ ಕುಂದಾಪುರ ಮಾರ್ಗಕ್ಕೆ ಪರ್ಯಾಯ ರಸ್ತೆಗಳನ್ನು ಸೂಚಿಸಲಾಗಿದೆ.












Discussion about this post