No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Saturday, July 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನ.1 ಕನ್ನಡ ರಾಜ್ಯೋತ್ಸವ | ಅದ್ಧೂರಿ ಆಚರಣೆಗೆ ಅಗತ್ಯ ಕ್ರಮ | ಡಿಸಿ ಗುರುದತ್ತ ಹೆಗಡೆ

kalpa News by kalpa News
October 17, 2025
in ಶಿವಮೊಗ್ಗ
0
ಗಣಪತಿ ವಿಸರ್ಜನೆಗೆ ತೆಪ್ಪ ಬಳಕೆ ಮಾಡಿದಲ್ಲಿ ಈ ವಸ್ತು ಕಡ್ಡಾಯವಾಗಿ ಇರಬೇಕು: ಡಿಸಿ ಆದೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಈ ನೆಲದ ಭವ್ಯ ಪರಂಪರೆ ಮತ್ತು ಶ್ರೀಮಂತ ಸಂಸ್ಕೃತಿಯ ಪ್ರತೀಕವಾಗಿರುವ, ಕನ್ನಡಿಗರ ಅಸ್ಮಿತತೆಯ ಪ್ರತಿಬಿಂಬವಾಗಿರುವ ಕನ್ನಡ ರಾಜ್ಯೋತ್ಸವವನ್ನು #Kannada Rajyothsava ನ.1ರಂದು ನಾಡಿನ ಎಲ್ಲರೂ ಪಾಲ್ಗೊಂಡು ಸಂಭ್ರಮ-ಸಡಗರಗಳಿಂದ ಅದ್ಧೂರಿಯಾಗಿ ಆಚರಿಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ  ಹೇಳಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ರಾಜ್ಯೋತ್ಸವವನ್ನು ನ. 1ರಂದು ಬೆಳಿಗ್ಗೆ 9ಗಂಟೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಆಚರಿಸಲು ಹಾಗೂ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದ ಅವರು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಲಾಗಿದೆ ಎಂದರು.

ಅಂದು ಬೆಳಿಗ್ಗೆ 8ಗಂಟೆಗೆ ನಗರದ ಸೈನ್ಸ್ ಮೈದಾನದಿಂದ ಕಲಾ ತಂಡಗಳೊಂದಿಗೆ ಹೊರಡುವ ಭುವನೇಶ್ವರಿಯ ಭವ್ಯ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಅಂತಿಮವಾಗಿ ನೆಹರೂ ಕ್ರೀಡಾಂಗಣದಲ್ಲಿ ಸಂಪನ್ನಗೊಳ್ಳಲಿದೆ ಎಂದರು.

ರಾಜ್ಯೋತ್ಸವ ದಿನದಂದು ನಗರದ ಪ್ರಮುಖ ರಸ್ತೆ, ವರ್ತುಲಗಳು, ಸರ್ಕಾರಿ ಮತ್ತು ಖಾಸಗಿ ಕಚೇರಿ-ಕಟ್ಟಡಗಳಿಗೆ ವಿದ್ಯುತ್ ಅಲಂಕಾರಗೊಳಿಸಿ, ತಳಿರು- ತೋರಣಗಳಿಂದ ಶೃಂಗರಿಸುವ ಮೂಲಕ ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಿದರು.

ನಗರದ ಪ್ರಮುಖ ಬೀದಿಗಳಲ್ಲಿರುವ ಅಂಗಡಿಗಳಿಗೆ ಅಳವಡಿಸಿರುವ ನಾಮಫಲಕ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಕನ್ನಡದಲ್ಲಿರುವಂತೆ ಸಾರ್ವಜನಿಕರು ಕ್ರಮಕೈಗೊಳ್ಳಬೇಕು. ತಪ್ಪಿದಲ್ಲಿ ಸ್ಥಳೀಯ ಸಂಸ್ಥೆಯಿಂದ ನೀಡಲಾಗಿರುವ ವಾಣಿಜ್ಯ ಪರವಾನಿಗೆಯನ್ನು ನಿರ್ದಾಕ್ಷಿಣ್ಯವಾಗಿ ವಜಾಗೊಳಿಸಲಾಗುವುದು ಎಂದರು.
ನಿಯಮಾನುಸಾರ ಅಂದು ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ, ಧ್ವಜವಂದನೆ ಸ್ವೀಕಾರ, ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಜ್ಯೋತ್ಸವ ಸಂದೇಶ, ಕವಾಯತು, ನಂತರ ಸ್ಥಳೀಯ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಲ್ಲದೇ ವಿವಿಧ ಇಲಾಖೆಗಳ ಯೋಜನೆಗಳನ್ನು ಪ್ರಚುರಪಡಿಸುವ ಸ್ಥಬ್ಧಚಿತ್ರಗಳನ್ನು ಪ್ರದರ್ಶಿಸಲಾಗುವುದು. ಆಕರ್ಷಕ ಸ್ಥಬ್ಧಚಿತ್ರಗಳಿಗೆ, ಪಥಸಂಚಲನದಲ್ಲಿ ಭಾಗವಹಿಸಿ ವಿಶೇಷ ತಂಡಗಳಿಗೆ ಪುರಸ್ಕಾರ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದರು.

ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸ್ಥಳೀಯ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಎಲ್ಲಾ ಮಕ್ಕಳನ್ನು ಅಂದು ಸಕಾಲದಲ್ಲಿ ಹಾಜರಿರುವಂತೆ ನೋಡಿಕೊಳ್ಳಬೇಕು. ಮಕ್ಕಳನ್ನು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಕರೆದುಕೊಂಡು ಹೋಗಿ ಬರಲು ವಾಹನ ವ್ಯವಸ್ಥೆ ಹಾಗೂ ಲಘು ಉಪಹಾರದ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು.

ಅಂದು ಸಂಜೆ ಕುವೆಂಪು ರಂಗಮಂದಿರದಲ್ಲಿ ಸ್ಥಳೀಯ ಶಾಲಾ ವಿದ್ಯಾರ್ಥಿಗಳು ಹಾಗೂ ಪ್ರತಿಭಾವಂತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಉದ್ದೇಶಿಸಲಾಗಿದೆ ಎಂದರು.
ಕನ್ನಡ ಕೇವಲ ಒಂದು ಭಾಷೆಯಾಗಿರದೆ, ಅದು ಕನ್ನಡದ ಜನರು, ಅವರ ಸಂಸ್ಕೃತಿ, ಸಾಹಿತ್ಯ, ಕಲೆ, ಸಂಗೀತ, ನೃತ್ಯ, ಭೂಮಿ ಮತ್ತು ನದಿಗಳ ಸಮಗ್ರತೆಯನ್ನು ಪ್ರತಿನಿಧಿಸುವಂತದ್ದಾಗಿದೆ ಎಂದು ಕನ್ನಡಪರ ಸಂಘಟನೆಯ ಸದಸ್ಯ ಮಧುಸೂದನ್ ಹೇಳಿದರು.

ನಗರದ ಪ್ರಮುಖ ರಸ್ತೆಗಳ ಅಂಗಡಿ ಮುಂಗಟ್ಟುಗಳಿಗೆ ಅಳವಡಿಸಿರುವ ನಾಮಫಲಕಗಳು ಕನ್ನಡದಲ್ಲಿರುವಂತೆ ಜಿಲ್ಲಾಡಳಿತದ ವತಿಯಿಂದ ಸೂಚನೆ ನೀಡಬೇಕು. ರಾಜ್ಯೋತ್ಸವ ಆಚರಿಸುವ ಮಾಸದಲ್ಲಿ ನಗರದ ಪ್ರಮುಖ ವರ್ತುಲಗಳಿಗೆ ವಿದ್ಯುದ್ದೀಪಗಳಿಂದ ಅಲಂಕೃತಗೊಳಿಸಲು ಕ್ರಮ ವಹಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ವಿ., ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಎ.ಜಿ.ಕಾರಿಯಪ್ಪ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ  ಸುಜಾತಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ಕನ್ನಡಪರ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada RajyothsavaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಕನ್ನಡ ರಾಜ್ಯೋತ್ಸವಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜ್ಯೋತಿ ನಗರಕ್ಕೆ ಶಾಸಕ ಚನ್ನಬಸಪ್ಪ ಭೇಟಿ | ಮೂಲಭೂತ ಸಮಸ್ಯೆಗಳ ಪರಿಶೀಲನೆ

Next Post

“Amrit Samvaad” Conducted at Sakleshpur, Haveri and Shivamogga Railway Stations

kalpa News

kalpa News

Next Post
“Amrit Samvaad” Conducted at Sakleshpur, Haveri and Shivamogga Railway Stations

“Amrit Samvaad” Conducted at Sakleshpur, Haveri and Shivamogga Railway Stations

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL