ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಾಲಾ ಮಕ್ಕಳ ಪಠ್ಯ ಮಸ್ತಕಗಳನ್ನು ಪರಿಷ್ಕರಣೆ ಮಾಡಿರುವ ಸಂಬಂಧ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Minister B C Nagesh ಇವರ ತಿಪಟೂರು ನಗರದ ಮನೆಗೆ ಎನ್.ಎಸ್.ಯು.ಐ ಕಾರ್ಯಕರ್ತರು ಮುತ್ತಿಗೆ ಹಾಕಿ ಬೆಂಕಿ ಹಚ್ಚುವ ಪ್ರಯತ್ನ ನಡೆಸಿದ್ದು, ಈ ವಿಷಯ ಮಾಧ್ಯಮಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ವರದಿಯಾಗಿರುತ್ತದೆ. ಇಂತಹ ಗೂಂಡಾ ಪ್ರವೃತ್ತಿಯ ವರ್ತನೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಈ ರೀತಿ ಏಕಾಏಕಿಯಾಗಿ ಸಚಿವರ ಮನೆಯ ಮುಂದೆ ಗಲಾಟೆ ಮಾಡುವುದು ಉತ್ತಮ ಬೆಳವಣಿಗೆಯಲ್ಲ ಎಂದು ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ D S Arun ವಿಷಾದ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಸಚಿವ ಬಿ.ಸಿ ನಾಗೇಶ್ರವರು ನಾಡಿನ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಪಠ್ಯ ಪುಸ್ತಕ ರೂಪಿಸಲು ಶ್ರಮಿಸುತ್ತಿದ್ದು, ಹಾಗೂ ಶಿಕ್ಷಣ ಇಲಾಖೆಯಲ್ಲಿ ಹಲವಾರು ಬದಲಾವಣೆಗಳನ್ನು ತಂದಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.
ನಾಡಿನ ಖ್ಯಾತ ಕವಿಗಳು ಮತ್ತು ಲೇಖಕರಿಗೆ ಅವಮಾನಕರ ರೀತಿಯಲ್ಲಿ ಮಾತನಾಡಿರುವುದು, ಅವರುಗಳು ರಚಿಸಿದ ಕವನಗಳು (ಕವಿತೆಗಳು) ಮತ್ತು ಗದ್ಯ ಪಾಠಗಳ ಬಗ್ಗೆ ಆಕ್ಷೇಪಾರ್ಹ ಮತ್ತು ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿರುವುದು ಉತ್ತಮ ಬೆಳವಣಿಗೆ ಆಗುವುದಿಲ್ಲ. ಎಳೆಯ ವಯಸ್ಸಿನ ಶಾಲಾ ಮಕ್ಕಳ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದಿದ್ದಾರೆ.
Also read: ದಿಟ್ಟ ನಿರ್ಧಾರಗಳ ದೂರದೃಷ್ಟಿಯ ಪ್ರತೀಕ ಪ್ರಧಾನಿ ಮೋದಿ: ಸಿಎಂ ಬೊಮ್ಮಾಯಿ
ಪಠ್ಯಮಸ್ತಕದಲ್ಲಿ ಏನಾದರೂ ಲೋಪದೋಷಗಳು ಅಥವಾ ವ್ಯತ್ಯಾಸಗಳು ಕಂಡು ಬಂದರೆ ಆ ಬಗ್ಗೆ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯವರು, ಶಿಕ್ಷಣ ತಜ್ಞರು ಹಾಗೂ ನಾಡಿನ ಸಾಹಿತಿಗಳು ಹಾಗೂ ಲೇಖಕರುಗಳು ಸರ್ಕಾರದ ಜೊತೆಗೆ ಕೈಜೋಡಿಸಿ ಒಂದೆಡೆ ಕುಳಿತು ಚರ್ಚಿಸಿ, ವಿಮರ್ಶೆ ನಡೆಸಿ ಪರಸ್ಪರ ಅಭಿಪ್ರಾಯಗಳನ್ನು ಹಂಚಿಕೊಂಡು ಸರಿಪಡಿಸಬಹುದಾಗಿದೆ. ಈ ವಿಷಯವಾಗಿ ಕೆಲವು ಶಿಕ್ಷಣ ತಜ್ಞರು, ಕವಿಗಳು, ಲೇಖಕರುಗಳು ಮತ್ತು ಕೆಲವು ಜನಪ್ರತಿನಿಧಿಗಳು ಮಾಧ್ಯಮಗಳಿಗೆ ದಿನಕ್ಕೊಂದು ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಾ, ಜನಸಾಮಾನ್ಯರನ್ನು ಗೊಂದಲಕ್ಕೆ ಈಡು ಮಾಡುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post