No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಬಂಗಾರೇಶ್ ಬದುಕನ್ನು ಹಸನುಗೊಳಿಸಿದ ಅಡಿಕೆ ಸಂಸ್ಕರಣಾ ಘಟಕ

kalpa News by kalpa News
May 13, 2022
in Special Articles, ಶಿವಮೊಗ್ಗ
0
ಬಂಗಾರೇಶ್ ಬದುಕನ್ನು ಹಸನುಗೊಳಿಸಿದ ಅಡಿಕೆ ಸಂಸ್ಕರಣಾ ಘಟಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  

ಸರ್ಕಾರದ ಯೋಜನೆಗಳ ಬಗ್ಗೆ ಅರಿವಿಲ್ಲದೆ ಆರ್ಥಿಕವಾಗಿ ನಷ್ಟವನ್ನು ಅನುಭವಿಸುತ್ತಿರುವ ಬಹಳಷ್ಟು ರೈತರ ನಡುವೆ ಬಂಗಾರೇಶ್ ತೋಟಗಾರಿಕೆ ಇಲಾಖೆಯಿಂದ ಸೂಕ್ತವಾದ ಮಾಹಿತಿ ಪಡೆದು ಅಡಿಕೆ ಸಂಸ್ಕರಣಾ ಘಟಕ ನಿರ್ಮಿಸಿಕೊಳ್ಳುವ ಮೂಲಕ ತಮ್ಮ ಬದುಕನ್ನು ಹಸನಾಗಿಸಿಕೊಂಡು ಅಡಿಕೆ ಕೃಷಿಯಲ್ಲಿ ಯಶಸ್ಸಿನ ಹೆಜ್ಜೆ ಇಟ್ಟಿದ್ದಾರೆ.

ಕೆ.ವಿ. ಬಂಗಾರೇಶ್ ಅವರು ಶಿವಮೊಗ್ಗ ಜಿಲ್ಲೆಯ, ಸೊರಬ ತಾಲ್ಲೂಕಿನ ಮಾವಲಿ ಗ್ರಾಮದಲ್ಲಿ ನೆಲೆಸಿದ್ದು, 2020-2021ನೇ ಸಾಲಿನಲ್ಲಿ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆಯಡಿಯಲ್ಲಿ ಸಹಾಯಧನ ಪಡೆದುಕೊಂಡು ಅಡಿಕೆ ಸಂಸ್ಕರಣಾ ಘಟಕ ಸ್ಥಾಪಿಸಿದ್ದಾರೆ.

ಅಡಿಕೆ ಸಂಸ್ಕರಣಾ ಘಟಕ ಸ್ಥಾಪಿಸಿ ಹೆಚ್ಚಿನ ಆದಾಯ ಗಳಿಸುತ್ತಿರುವ ಇವರು ಸೊರಬ ತಾಲ್ಲೂಕಿಗೆ ಮಾದರಿ ರೈತರಾಗುವುದರ ಜೊತೆಗೆ ಸ್ಥಳೀಯರಿಗೆ ಉದ್ಯೋಗ ನೀಡಿ ಅವರ ಜೀವನಕ್ಕೂ ಅನುಕೂಲ ಮಾಡಿಕೊಡುತ್ತಿದ್ದಾರೆ. ತೋಟಗಾರಿಕೆ ಇಲಾಖೆಯಿಂದ ನೆರವು ಪಡೆದುಕೊಂಡು ಮಧ್ಯವರ್ತಿಗಳ ಸಹಾಯವಿಲ್ಲದೇ ಸ್ವಾವಲಂಬಿ ಬದುಕು ರೂಪಿಕೊಂಡಿದ್ದು, ಅವರ ಅಡಿಕೆ ಕೃಷಿಯಲ್ಲಿನ ಆದಾಯ ಇಂದು ದ್ವಿಗುಣವಾಗಿದೆ.

ಅಡಿಕೆ ಬೆಳೆಯ ಜೊತೆಗೆ ಮಿಶ್ರ ಬೆಳೆಗಳಾದ ಕಾಳುಮೆಣಸು, ಕೋಕೋ ಏಲಕ್ಕಿ ಮುಂತಾದ ಬೆಳೆಗಳನ್ನು ಪ್ರೋತ್ಸಾಹಿಸುವುದಕ್ಕಾಗಿ ರಾಷ್ಟ್ರೀಯ ತೋಟಗಾರಿಕಾ ಮಿಷನ್ ಯೋಜನೆಯ ಅಡಿಯಲ್ಲಿ ಸಹಾಯಧನವನ್ನು ನೀಡಲಾಗುತ್ತದೆ. ಬಂಗಾರೇಶ್ ಅವರಿಗೆ 2020-21 ನೇ ಸಾಲಿನಲ್ಲಿ ಶೇ.40 ಸಹಾಯಧನ ಅಂದರೆ ರೂ.7.24ಲಕ್ಷ ಒದಗಿಸಿರುವುದರಿಂದ ಅವರು ಅಡಿಕೆ ಸಂಸ್ಕರಣಾ ಘಟಕವನ್ನು ನಿರ್ಮಿಸಿಕೊಂಡು ತೋಟಗಾರಿಕೆಯಲ್ಲಿ ಹೆಚ್ಚಿನ ಆದಾಯ ಗಳಿಸಲು ಸಾಧ್ಯವಾಗಿದೆ. ತೋಟಗಾರಿಕೆಯಲ್ಲಿ ಆಸಕ್ತಿ ಇರುವ ರೈತರು ಈ ಯೋಜನೆಯ ಉಪಯೋಗ ಪಡೆಯಬಹುದು.
-ಪ್ರಕಾಶ್, ಉಪನಿರ್ದೇಶಕರು, ತೋಟಗಾರಿಕೆ ಇಲಾಖೆ

ತೋಟಗಾರಿಕೆ ಇಲಾಖೆ ನೆರವಿನಿಂದ ಅಡಿಕೆ ಸಂಸ್ಕರಣಾ ಘಟಕವನ್ನು ನಿರ್ಮಿಸಿಕೊಳ್ಳಲು ಸಾಧ್ಯವಾಯಿತು. ನನ್ನ ಆದಾಯದ ಸ್ಥಿತಿ ಉತ್ತಮವಾಗಿದ್ದು, ಸಾಕಷ್ಟು ರೈತರು ಅಡಿಕೆ ಸಂಸ್ಕರಣಾ ಘಟಕದ ಬಗ್ಗೆ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ನನ್ನ ಬಳಿ ಬರುತ್ತಿದ್ದಾರೆ. ಈ ಯೋಜನೆಯಿಂದ ನನಗೆ ತುಂಬಾ ಉಪಯೋಗವಾಗಿದ್ದು ಸಂತಸ ತಂದಿದೆ. ನನಗೆ ಬದುಕು ಕಟ್ಟಿಕೊಳ್ಳಲು ಸಹಕರಿಸಿದ ತೋಟಗಾರಿಕೆ ಇಲಾಖೆಗೆ ಧನ್ಯವಾದಗಳನ್ನು ತಿಳಿಸುತ್ತೇನೆ.
-ಬಂಗಾರೇಶ್ ಫಲಾನುಭವಿ

ಬೆಳೆದಂತಹ ಅಡಿಕೆ ಫಸಲನ್ನು ಗುತ್ತಿಗೆ ಅಥವಾ ಖೇಣಿ ರೂಪದಲ್ಲಿ ಅಡಿಕೆ ವ್ಯಾಪಾರಸ್ಥರಿಗೆ ಪ್ರತಿ ಎಕರೆಗೆ ರೂ.2.5ಲಕ್ಷಕ್ಕೆ ನೀಡುತ್ತಿದ್ದರು. ಹೀಗೆ ಮಾಡುವುದರಿಂದ ಅವರಿಗೆ ಆದಾಯದಲ್ಲಿ ನಷ್ಟ ಆಗುತ್ತಿತ್ತು. ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಲು ಸೊರಬದಲ್ಲಿರುವ ತೋಟಗಾರಿಕೆ ಇಲಾಖೆಗೆ ಭೇಟಿ ನೀಡಿ ಅಡಿಕೆ ಸಂಸ್ಕರಣಾ ಘಟಕ ಸ್ಥಾಪಿಸುವುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿ ಪಡೆದುಕೊಂಡು ಇಲಾಖೆಯಿಂದ 7.24 ಲಕ್ಷ ರೂ. ಸಹಾಯಧನ ಪಡೆದುಕೊಂಡು ತಮ್ಮ ಸ್ವಂತ ಜಮೀನಿನಲ್ಲೇ ಸಂಸ್ಕರಣಾ ಘಟಕವನ್ನು ಸ್ಥಾಪಿಸಿದರು. ಇದರಿಂದಾಗಿ ಬಂಗಾರೇಶ್ ಅವರು ಪ್ರಸ್ತುತ ಅಡಿಕೆಯ ಪ್ರತಿ ಎಕರೆಗೆ ರೂ.4.5 ಲಕ್ಷದಷ್ಟು ಆದಾಯ ಪಡೆಯುತ್ತಿದ್ದಾರೆ.

Also read: ಸರಳ ಜೀವನ ಶೈಲಿಯಿಂದ ಸಂತೃಪ್ತ ಬದುಕು ಸಾಧ್ಯ: ಮಧುಕರ್ ಅಭಿಪ್ರಾಯ



ಈ ಸಂಸ್ಕರಣಾ ಘಟಕದಿಂದಾಗಿ ಅಡಿಕೆ ಫಸಲಿಗೆ ಸಂಬಂಧಿಸಿದ ಎಲ್ಲ ಕೆಲಸ ಕಾರ್ಯಗಳು ಒಂದೇ ಸೂರಿನಡಿಯಲ್ಲಿ ನಿರ್ವಹಣೆ ಆಗುತ್ತಿರುವುದರಿಂದ ಬಂಗಾರೇಶ್‍ರಿಗೆ ಅಡಿಕೆ ಬೆಳೆ ಜೊತೆಗೆ ಮಿಶ್ರ ಬೆಳೆಗಳಾದ ಕಾಳುಮೆಣಸು ಮತ್ತು ಕೋಕೋಗಳನ್ನು ಬೆಳೆಯಲು ಸಹಾಯವಾಗಿದೆ. ಇಂದು ಬಂಗಾರೇಶ್ ಹೊರಗಿನಿಂದ ಗೊಬ್ಬರವನ್ನು ಖರೀದಿ ಮಾಡುವ ಬದಲಾಗಿ ತಮ್ಮಲ್ಲೇ ಇರುವ ಅಡಿಕೆ ಸಂಸ್ಕರಣಾ ಘಟಕದಿಂದ ಸಿಗುವ ಅಡಿಕೆ ಸಿಪ್ಪೆಯನ್ನು ಬಳಸಿಕೊಂಡು ಗೊಬ್ಬರವನ್ನು ತಯಾರಿಸುವ ಯೋಜನೆಯನ್ನು ಕೂಡ ಹಾಕಿಕೊಂಡಿದ್ದಾರೆ. ಸರ್ಕಾರದ ಸವಲತ್ತನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಆದಾಯದಲ್ಲಿ ಪ್ರಗತಿ ಸಾಧಿಸುವ ಮೂಲಕ ಅಡಿಕೆ ಕೃಷಿಯಲ್ಲಿ ಯಶಸ್ಸನ್ನು ಸಾಧಿಸಿದ್ದು, ಇತರೆ ರೈತರಿಗೆ ಮಾದರಿಯಾಗಿದ್ದಾರೆ.


ವರದಿ : ಎಂ.ಎಸ್. ಭರತ್‍ ಅಪ್ರೆಂಟಿಸ್ ವಾರ್ತಾ ಇಲಾಖೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸರಳ ಜೀವನ ಶೈಲಿಯಿಂದ ಸಂತೃಪ್ತ ಬದುಕು ಸಾಧ್ಯ: ಮಧುಕರ್ ಅಭಿಪ್ರಾಯ

Next Post

ಮೇ 19ರಂದು ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಬಿ. ಸಿ. ನಾಗೇಶ್

kalpa News

kalpa News

Next Post
ಕೊರೋನಾ 4ನೆಯ ಅಲೆ ಭೀತಿ ನಡುವೆಯೂ ನಿಗದಿಯಂತೆ ಶಾಲೆಗಳು ಆರಂಭ: ಸಚಿವ ನಾಗೇಶ್

ಮೇ 19ರಂದು ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಬಿ. ಸಿ. ನಾಗೇಶ್

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL