ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಇಲ್ಲಿನ ಹೊಸಮನೆ ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿನ ಮೂರು ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ.
ಬಸ್ ಕಂಡಕ್ಟರ್/ಡ್ರೈವರ್ ಆಗಿರುವ 36 ವರ್ಷದ ವ್ಯಕ್ತಿ ಹೊಸಮನೆ ಹಿಂದೂ ಮಹಾಸಭಾ ಗಣಪತಿ ದೇವಾಲಯದ ಬಳಿಯ ನಿವಾಸಿಯಾಗಿದ್ದಾರೆ. ಈ ವ್ಯಕ್ತಿ ಮಂಗಳೂರಿನಿಂದ ಹಿಂತಿರುಗಿದ್ದಾರೆ ಎಂದು ಹೇಳಲಾಗಿದ್ದು, ಇವರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ನಿನ್ನೆ ರಾತ್ರಿ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಇವರನ್ನು ಮೆಗ್ಗಾನ್ ಆಸ್ಪತ್ರೆಯ ಐಸೋಲೇಶನ್ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ.
ಇನ್ನು, ಹಿಂದೂ ಮಹಾಸಭಾ ಗಣಪತಿ ದೇವಾಲಯದ ಎದುರಿನ ಮೂರು ಅಡ್ಡರಸ್ತೆಗಳನ್ನು, ದೇವಾಲಯ ವ್ಯಾಪ್ತಿಯ ಮುಖ್ಯರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.
14 ದಿನಗಳ ಕಾಲ ಈ ಪ್ರದೇಶದಲ್ಲಿ ಜನರ ಓಡಾಟವನ್ನು ನಿರ್ಬಂಧಿಸಲಾಗಿದ್ದು,ಈ ರಸ್ತೆಯನ್ನು ಸ್ಯಾನಿಟೈಸ್ ಮಾಡಲಾಗಿದೆ.
Get In Touch With Us info@kalpa.news Whatsapp: 9481252093
Discussion about this post