ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಮೀರ್ ಅಹಮ್ದ್ ವೃತ್ತದಲ್ಲಿ ಹಾಕಲಾಗಿದ್ದ ವೀರ ಸಾವರ್ಕರ್ ಫ್ಲೆಕ್ಸನ್ನು ಕಿಡಿಗೇಡಿಗಳು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ಸ್ವಲ್ಪಮಟ್ಟಿಗೆ ಉದ್ವಿಗ್ನಗೊಂಡಿದೆ.
ಸಾವರ್ಕರ್ ಫ್ಲೆಕ್ಸ್ ಹಾಕಲಾಗಿದ್ದ ಸ್ಥಳದಲ್ಲಿ ಟಿಪ್ಪು ಭಾವಚಿತ್ರ ಹಾಕಲು ಮುಂದಾದ ವೇಳೆ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಪರಿಸ್ಥಿತಿ ಉದ್ವಿಗ್ನಗೊಂಡಿದ್ದರೂ ಪೊಲೀಸರ ಮಧ್ಯಪ್ರವೇಶದಿಂದ ಪ್ರಸ್ತುತ ತಹಬಂದಿಯಲ್ಲಿದೆ. ಬಜರಂಗದಳ ಜಿಲ್ಲಾ ಸಂಚಾಲಕ ದೀನದಯಾಳು ನೇತೃತ್ವದಲ್ಲಿ ಹಿಂದೂ ಸಂಘಟನೆಗಳು ಸ್ಥಳದಲ್ಲಿ ಧರಣಿ ನಡೆಸುತ್ತಿದ್ದು, ಅನ್ಯ ಗುಂಪೊಂದು ಘೋಷಣೆ ಕೂಗಿ ಟಿಪ್ಪು ಬಾವುಟ ಪ್ರದರ್ಶಿಸಿದೆ. ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರು ಪರಿಸ್ಥಿತಿಯನ್ನು ತಿಳಿಗೊಳಿಸಲು ಖುದ್ದು ಅಖಾಡಕ್ಕಿಳಿದಿದ್ದು, ಎರಡು ಗುಂಪುಗಳನ್ನು ಸಮಾಧಾನಪಡಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಅಮೀರ್ ಅಹಮದ್ ವೃತ್ತವನ್ನು ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದ್ದು, ಈ ಪ್ರದೇಶದ ಅಂಗಡಿಮುಂಗಟ್ಟುಗಳನ್ನು ಸಹ ಮುಚ್ಚಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post