ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇತ್ತೀಚೆಗೆ ಕಾಶ್ಮೀರದ ಪಹಲ್ಗಾಮ್ನಲ್ಲಿ #Pehalgam attack ಪ್ರವಾಸಕ್ಕೆ ತೆರಳಿದಾಗ ಉಗ್ರರಿಂದ ಹತ್ಯೆಗೀಡಾಗಿದ್ದ ಶಿವಮೊಗ್ಗದ ಮಂಜುನಾಥ್ ಅವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ಭೇಟಿ ನೀಡಿ, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರರ ಈ ದುಷ್ಕೃತ್ಯವನ್ನು ಇಡೀ ದೇಶವೇ ಒಗ್ಗಟ್ಟಿನಿಂದ ಖಂಡಿಸಿದೆ. ಮತ್ತು ವಿಶ್ವಕೂಡ ಭಾರತಕ್ಕೆ ಉಗ್ರರ ದಮನಕ್ಕೆ ಬೆಂಬಲವಾಗಿ ನಿಂತಿದೆ. ಪ್ರವಾಸಕ್ಕೆ ತೆರಳಿದ ಕುಟುಂಬದ ಮೇಲೆ ಉಗ್ರಗಾಮಿಗಳ ದಾಳಿಯಾದಾಗ ಮಂಜುನಾಥ್ ಪತ್ನಿ ಪಲ್ಲವಿ ಅಂತಹ ಕ್ಲಿಷ್ಟ ಸಂದರ್ಭದಲ್ಲೂ ದಿಟ್ಟವಾಗಿ ಎದುರಿಸಿದ್ದಾರೆ. ದೇಶಪ್ರೇಮವನ್ನು ಮೆರೆದಿದ್ದಾರೆ. ಆ ದಾಳಿಯಲ್ಲಿ ಮಡಿದ 26 ಅಮಾಯಕ ಪ್ರವಾಸಿಗರ ಕುಟುಂಬದೊಂದಿಗೆ ಭಾರತ ದೇಶದ ಪ್ರಜೆಗಳು ಇದ್ದಾರೆ. ಪಾಪಿ ಪಾಕಿಸ್ತಾನಕ್ಕೆ ನಮ್ಮ ದೇಶದ ಸೈನಿಕರು ತಕ್ಕಪಾಠ ಕಲಿಸುವುದರಲ್ಲಿ ಯಾವುದೇ ಸಂಶಯಬೇಡ ಎಂದರು.
ಮಂಜುನಾಥ್ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿನೀಡಲಿ ಎಂದರು.
ಈ ಸಂದರ್ಭದಲ್ಲಿ ಅವರೊಂದಿಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ, ಶಾಸಕರಾದ ಚನ್ನಬಸಪ್ಪ, ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಎಸ್. ದತ್ತಾತ್ರಿ, ಎಸ್. ಜ್ಞಾನೇಶ್ವರ್, ಡಾ. ರವಿಕಿರಣ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post