No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿಸಿಲ ತಾಪಕ್ಕೆ ಪಂಚರತ್ನ ಯಾತ್ರೆ ಪಂಚರ್, ಪ್ರಜಾಧ್ವನಿಗೆ ಬ್ರೇಕ್ ಫೇಲ್ಯೂರ್

ಬಿಜೆಪಿ ಪೇಜ್ ಪ್ರಮುಖರ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲ್ ವ್ಯಂಗ್ಯ

kalpa News by kalpa News
February 6, 2023
in ಶಿವಮೊಗ್ಗ, ರಾಜಕೀಯ
0
ಬಿಸಿಲ ತಾಪಕ್ಕೆ ಪಂಚರತ್ನ ಯಾತ್ರೆ ಪಂಚರ್, ಪ್ರಜಾಧ್ವನಿಗೆ ಬ್ರೇಕ್ ಫೇಲ್ಯೂರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕಾಂಗ್ರೆಸ್ ಪಕ್ಷದಲ್ಲಿ ಪೇಜ್ ಪ್ರಮುಖರಿರಲಿ ರಾಜ್ಯಮಟ್ಟದ ಕಾರ್ಯಕಾರಿಣಿಯೇ ಇಲ್ಲ. ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ನಂತರ ರಾಜ್ಯದಲ್ಲಿ ಕಾರ್ಯಕಾರಿಣಿಯೇ ನಡೆದಿಲ್ಲ. ಅದನ್ನು ಮಾಡಲು ಹೋದರೆ ರಾಜ್ಯ ಮಟ್ಟದಲ್ಲಿರಲಿ, ಜಿಲ್ಲಾಮಟ್ಟದಲ್ಲೇ ಪಕ್ಷದಲ್ಲಿ ಒಡಕು ಮೂಡಲಿದೆ ಎಂದು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‌ಕುಮಾರ್ ಕಟೀಲ್ ವ್ಯಂಗ್ಯವಾಡಿದರು.

ಇಲ್ಲಿನ ಎನ್‌ಇಎಸ್ ಮೈದಾನದಲ್ಲಿ ಭಾನುವಾರ ಜಿಲ್ಲಾ ಬಿಜೆಪಿಯಿಂದ ಆಯೋಜಿಸಿದ್ದ ನಗರಮಟ್ಟದ ಪೇಜ್ ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೂ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಧ್ವನಿ ಇಲ್ಲದಂತಾಗಿದೆ. ಹಾಗಾಗಿ ಪ್ರಜಾಧ್ವನಿ ಹಿಡಿದುಕೊಂಡು ಹೊರಟಿದ್ದಾರೆ ಎಂದು ಲೇವಡಿ ಮಾಡಿದರು.

ಬಿಜೆಪಿ ನಾಯಕರಂತೆ ಕಾಂಗ್ರೆಸ್ ನಾಯಕರು ಯಾವುದೇ ಕಾಂಗ್ರೆಸ್ ಕಾರ್ಯಕರ್ತನ ಮನೆಗೆ ಹೋಗಿ ಅವರೊಂದಿಗೆ ಮಾತನಾಡಿದ್ದಾರಾ ಎಂದು ಪ್ರಶ್ನಿಸಿದ ಅವರು, ಬಿಸಿಲ ತಾಪಕ್ಕೆ ಪಂಚರತ್ನ ಯಾತ್ರೆ ಪಂಚರ್ ಆಗಿದೆ, ಪ್ರಜಾಧ್ವನಿ ಯಾತ್ರೆಗೆ ಬ್ರೇಕ್ ಫೇಲ್ಯೂರ್ ಆಗಿದೆ ಎಂದು ಛೇಡಿಸಿದರು.
ಶಿವಮೊಗ್ಗ ರಾಜ್ಯ ಬಿಜೆಪಿಯ ಶಕ್ತಿ ಕೇಂದ್ರ. ಬಿಜೆಪಿಗೆ ಶಕ್ತಿ ತುಂಬುವ ಜಿಲ್ಲೆ. ಪ್ರತಿ ಬೂತ್ ಗಳಲ್ಲಿಯು ಗೆಲ್ಲುವ ಸಂಕಲ್ಪ ನಮ್ಮದಾಗಿರಬೇಕು. ಆಗ ಮಾತ್ರ ನಾವು ನಿಜವಾದ ಗೆಲುವು ಪಡೆದಂತೆ. ಶಿವಮೊಗ್ಗದಲ್ಲಿ ರಾಜ್ಯದ ಮೊದಲ ಪೇಜ್ ಪ್ರಮುಖರ ಸಮಾವೇಶ ಆರಂಭಗೊಂಡಿದೆ. ಇಲ್ಲಿಂದ ವಿಜಯ ಯಾತ್ರೆ ಆರಂಭವಾಗಿದೆ ಎಂದರು.

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಅಭ್ಯರ್ಥಿಗಳ ಗೆಲುವಿನಲ್ಲಿ ಪೇಜ್ ಪ್ರಮುಖರ ಪಾತ್ರ ಮುಖ್ಯವಾಗಿದ್ದು ಎಲ್ಲರೂ ಶ್ರಮ ವಹಿಸಿ ಕೆಲಸ ಮಾಡಬೇಕಿದೆ. ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ 50 ಸಾವಿರ ಮತಗಳಿಗಿಂತ ಅಧಿಕ ಅಂತರದ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಬೇಕು. ಆ ನಿಟ್ಟಿನಲ್ಲಿ ಪಕ್ಷವನ್ನು ಸಂಘಟಿಸಲಾಗುತ್ತಿದೆ ಎಂದು ಹೇಳಿದರು.
ಕಳೆದ ಬಾರಿ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿಗಿಂತ 46,107 ಅಂತರದಿಂದ ಮತಗಳ ಗೆಲುವು ಸಾಧಿಸಿದ್ದೆ. ಪೇಜ್ ಪ್ರಮುಖರು ಪೂರ್ಣ ಪ್ರಮಾಣದಲ್ಲಿರಲಿಲ್ಲ. ಈ ಬಾರಿ ಪೇಜ್ ಪ್ರಮುಖರು ರಚನೆಗೊಂಡಿದ್ದು ಭಾರಿ ಅಂತರದಿಂದ ಗೆಲುವು ಸಾಧಿಸಬೇಕಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಒಂದಲ್ಲ ಒಂದು ಯೋಜನೆಗಳ ಪ್ರಯೋಜನ ಪಡೆದವರಿದ್ದಾರೆ. ಅಭಿವೃದ್ಧಿ ಕೆಲಸಗಳು ಆಗಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉತ್ತಮ ನಾಯಕತ್ವ ಇದೆ. ರಾಜ್ಯಾಧ್ಯಕ್ಷರು ಪ್ರವಾಸ ಮಾಡುತ್ತಿದ್ದಾರೆ. ಇವೆಲ್ಲವೂ ಕೂಡ ಗೆಲವಿಗೆ ಶಕ್ತಿ ತುಂಬಿದೆ ಎಂದು ಹೇಳಿದರು.

Also read: ಭವಾನಿ ರೇವಣ್ಣ ಸ್ಪರ್ಧೆ ಪಕ್ಷದ ವರಿಷ್ಠರಿಂದ ತೀರ್ಮಾನ: ನಿಖಿಲ್ ಕುಮಾರಸ್ವಾಮಿ

ರಾಜ್ಯದ 224 ಕ್ಷೇತ್ರಗಳಲ್ಲಿಯೂ ಪೇಜ್ ಪ್ರಮುಖರು ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಇದರಿಂದ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ನಿರಾಯಾಸವಾಗಿ ತಲುಪಬಹುದು. ಇದುವರೆಗೂ ಬಿಜೆಪಿ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದಿರಲಿಲ್ಲ. ಈ ಬಾರಿ ಅದು ಸಾಕಾರಗೊಳ್ಳಲಿದೆ ಎಂದು ಹೇಳಿದರು.

ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಮಾತನಾಡಿ, ಶರಾವತಿ ಮುಳುಗಡೆ ಸಂತ್ರಸ್ತರಿಗೆ ಇದುವರೆಗೂ ಭೂಮಿ ನೀಡಿಕೆ ಸಾಧ್ಯವಾಗಿರಲಿಲ್ಲ. ಇದಕ್ಕೆ ತಾರ್ಕಿಕ ಅಂತ್ಯ ಹಾಡಲು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಒಂದು ತಿಂಗಳಲ್ಲಿ ಹಕ್ಕುಪತ್ರ ನೀಡಲಾಗುತ್ತದೆ. ಜನರಲ್ಲಿರುವ ತಪ್ಪು ಕಲ್ಪನೆಯನ್ನು ಹೋಗಲಾಡಿಸುವಂತೆ ಹೇಳಿದರು.

ಜಿಲ್ಲೆಯನ್ನು ಎಜುಕೇಷನ್ ಹಬ್ ಆಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗಿದೆ. ವೈದ್ಯಕೀಯ, ಇಂಜಿನಿಯರಿಂಗ್ ಕಾಲೇಜುಗಳು, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಆಯುರ್ವೇದ ವಿಶ್ವವಿದ್ಯಾಲಯ ಸೇರಿದಂತೆ ಜಾರಿಗೊಳಿಸಲಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ನಗರ ಘಟಕದ ಅಧ್ಯಕ್ಷ ಎನ್.ಕೆ. ಜಗದೀಶ್ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯ ಬಿಜೆಪಿ ನೀಡಿದ ಎಲ್ಲ ಚಟುವಟಿಕೆಗಳನ್ನು ಯಶಸ್ವಿಗೊಳಿಸಲಾಗಿದೆ. ಬೂತ್ ಅಭಿಯಾನ, ವಿಜಯ ಸಂಕಲ್ಪ ಅಭಿಯಾನ, ಗೋಡೆ ಬರಹ ಯಶಸ್ವಿಯಾಗಿವೆ. ಮೊದಲ ಬಾರಿಗೆ ಪೇಜ್ ಪ್ರಮುಖರ ಸಮಾವೇಶ ಶಿವಮೊಗ್ಗದಲ್ಲಿ ನಡೆಯಿತು ಎಂಬುದು ಹೆಮ್ಮೆಯ ವಿಚಾರ ಎಂದರು.

ಶಾಸಕ ಕೆ.ಬಿ. ಅಶೋಕ್ ನಾಯ್ಕ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ, ಎಸ್.ರುದ್ರೇಗೌಡ, ಡಿ.ಎಸ್. ಅರುಣ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ, ರಾಜ್ಯ ಪ್ರಕೋಷ್ಟಗಳ ಎಂ.ಬಿ. ಭಾನುಪ್ರಕಾಶ್, ಮಾಜಿ ಸಂಚಾಲಕ ಆರ್. ಕೆ. ಸಿದ್ದರಾಮಣ್ಣ, ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಮೇಯ ಎಸ್.ಶಿವಕುಮಾರ್, ಉಪ ಮೇಯರ್ ಲಕ್ಷ್ಮೀ ಶಂಕರನಾಯ್ಕ, ಪ್ರಮುಖರಾದ ಎ.ಎನ್.ನಟರಾಜ್, ಎಸ್.ಎಸ್. ಜ್ಯೋತಿಪ್ರಕಾಶ್, ಎಸ್. ದತ್ತಾತ್ರಿ, ಎಸ್.ಎನ್. ಚನ್ನಬಸಪ್ಪ, ಕೆ.ಇ. ಕಾಂತೇಶ್, ಎಸ್. ಜ್ಞಾನೇಶ್ವರ್ ಇತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭವಾನಿ ರೇವಣ್ಣ ಸ್ಪರ್ಧೆ ಪಕ್ಷದ ವರಿಷ್ಠರಿಂದ ತೀರ್ಮಾನ: ನಿಖಿಲ್ ಕುಮಾರಸ್ವಾಮಿ

Next Post

ಗದ್ದೆಗೆ ಕಾರು ಪಲ್ಟಿ: ಇಬ್ಬರಿಗೆ ಗಾಯ

kalpa News

kalpa News

Next Post
ಲಾರಿ ಟೈರ್‌ ಸ್ಫೋಟಗೊಂಡು ಚಾಲಕ ಸಾವು

ಗದ್ದೆಗೆ ಕಾರು ಪಲ್ಟಿ: ಇಬ್ಬರಿಗೆ ಗಾಯ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL