ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರೇ ಉತ್ತರ ನೀಡುತ್ತಾರೆ ಎಂದು ಶಾಸಕ ಚನ್ನಬಸಪ್ಪ MLA Channabasappa ಹೇಳಿದರು.
ಇಲ್ಲಿನ ವಿನೋಬನಗರದಲ್ಲಿ 8ನೇ ವಾರ್ಡ್ ಬಿಜೆಪಿ ಕಾರ್ಯಕರ್ತರ ಮತ್ತು ನಾಗರಿಕರಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಈ ವಾರ್ಡ್ನಲ್ಲಿ ಕೇವಲ ವ್ಯಕ್ತಿ ಅಲ್ಲ. ವಿಚಾರ ಮಾಡುವಂತಹ ಯಾವುದೇ ವ್ಯಕ್ತಿ ಅಭ್ಯರ್ಥಿಯಾಗಿ ನಿಂತರೂ ಕೂಡ ಗೆಲ್ಲುತ್ತಾರೆ. ಅದೇ ಕಾರಣಕ್ಕೆ ಇಲ್ಲಿ ಬಿಜೆಪಿ ಹೊರತು ಪಡಿಸಿ ಬೇರೆ ಪಕ್ಷ ಗೆದ್ದ ಇತಿಹಾಸ ಇಲ್ಲ.

Also read: ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭದ್ರಾವತಿಯ ಪ್ರಾರ್ಥನಾಗೆ ಪ್ರಶಸ್ತಿ
ಬಿಜೆಪಿ ಮುಖಂಡ ಧನಂಜಯ ಸರ್ಜಿ ಮಾತನಾಡಿ, ಪಕ್ಷಕ್ಕೆ ದುಡಿದ ಕಾರ್ಯಕರ್ತರನ್ನು ಗೌರವಿಸುವ ಗುಣ ಈ ವಾರ್ಡ್ನಲ್ಲಿದೆ. ಚನ್ನಬಸಪ್ಪ ಅವರು ಶಾಸಕರಾಗುವ ಮುಂಚೆಯೇ ಕಾರ್ಯಕರ್ತರಾಗಿ ಜನರ ಸೇವೆ ಮಾಡಿಕೊಂಡು ಬಂದಿದ್ದಾರೆ. ಅದೇ ಕಾರಣಕ್ಕೆ ಜನ ಅವರನ್ನು ಶಾಸಕರಾಗಿ ಆಯ್ಕೆ ಮಾಡಿದ್ದಾರೆ ಎಂದರು.











Discussion about this post