ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರೈತರ #Farmer ಪರವಾಗಿ ಸರ್ಕಾರದ ಖಾಲಿ ಆಶ್ವಾಸನೆಗಳು ಸಾಕು, ಸ್ಪಷ್ಟ ತೀರ್ಮಾನ ಹೊರ ಬರಬೇಕು. ಇಲ್ಲದಿದ್ದರೆ ಚಳವಳಿ ಅನಿವಾರ್ಯ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಹಾಗೂ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯ ಪ್ರಮುಖ ಹೆಚ್.ಆರ್.ಬಸವರಾಜಪ್ಪ ಹೇಳಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಗಳು ರೈತರ ಪರವಾಗಿ ಸ್ಪಂದನೆ ನೀಡುತ್ತಿಲ್ಲ. ಕೇವಲ ಖಾಲಿ ಆಶ್ವಾಸನೆಗಳನ್ನು ನೀಡುತ್ತಾ ಬರುತ್ತಿವೆ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವು ಕೂಡ ಇದಕ್ಕೆ ಹೊರತಾಗಿಲ್ಲ. ಸಿಎಂ ಸಿದ್ಧರಾಮಯ್ಯ ಅವರು ಚುನಾವಣೆಗೂ ಮುಂಚೆ ರೈತರ ಪರವಾಗಿ ಇರುತ್ತೇನೆ ಎಂದು ಮಾತು ಕೊಟ್ಟಿದ್ದರು. ಈಗ ಕೊಟ್ಟ ಮಾತನ್ನು ಅವರು ಉಳಿಸಿಕೊಳ್ಳುತ್ತಿಲ್ಲ ಎಂದರು.
ಸಿಎಂ ಸಿದ್ದರಾಮಯ್ಯ #CM Siddaramaiah ನೇತೃತ್ವದ ಸರ್ಕಾರ ಮಾ.7 ರಂದು ಬಜೆಟ್ ಮಂಡನೆ ಮಾಡಲಿದೆ. ಸಿದ್ದರಾಮಯ್ಯನವರ ಬಜೆಟ್ ಅನ್ನು ಸಮಗ್ರವಾಗಿ ಹಾಗೂ ವಿಮರ್ಶಾತ್ಮಕವಾಗಿ ವಿಶ್ಲೇಷಣೆಗೊಳಪಡಿಸಲು ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಮಾ.12 ಮತ್ತು 13 ರಂದು ‘ಜನಚಳವಳಿಗಳ ಬಜೆಟ್ ಅಧಿವೇಶನ’ವನ್ನು ಬೆಂಗಳೂರಿನ ಗಾಂಧಿ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಹೇಳಿದರು.
Also read: ಗರ್ಭಿಣಿ ಅವಧಿಯಲ್ಲಿ ಒತ್ತಡಕ್ಕೆ ಒಳಗಾಗದಂತೆ ಜಾಗ್ರತೆ ವಹಿಸಿ: ಡಾ. ಯಲ್ಲಾ ರಮೇಶ್ ಬಾಬು
ಈ ಬಜೆಟ್ ಅಧಿವೇಶನ ಕೇವಲ ಆಯ-ವ್ಯಯದ ಬಜೆಟ್ ಮಂಡನೆಗೆ ಮಾತ್ರ ಸೀಮಿತವಾಗದೆ ಜನಪರ ನೀತಿಗಳನ್ನು ರೂಪಿಸುವ ದಿಟ್ಟ ಹೆಜ್ಜೆಯನ್ನಿಡುವಂತಿರಲಿ. ಗ್ಯಾರೆಂಟಿ ಯೋಜನೆಯೊಂದನ್ನು ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ ಎಂದು ಹೇಳುತ್ತಿದ್ದಾರೆ. ರೈತರ ಸಮಸ್ಯೆ ಬಗ್ಗೆ ಚರ್ಚಿಸುತ್ತಿಲ್ಲ. ಹಾಗಾಗಿ ಸರ್ಕಾರ ಬಜೆಟ್ ಕುರಿತು ವಿವಿಧ ಕೋನಗಳಿಂದ ಚರ್ಚೆ ನಡೆಸಿ ಸಮಗ್ರ ನಿಲುವನ್ನು ತೆಗೆದುಕೊಳ್ಳಲಾಗುತ್ತದೆ. ಹಾಗೂ ಮುಂದಿನ ಹೋರಾಟದ ಸ್ವರೂಪದ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದರು.
ಅಧಿಕಾರಕ್ಕೇರುವ ಮುನ್ನ ರೈತರ, ಕಾರ್ಮಿಕರ ಸಮಸ್ಯೆಯನ್ನು ಬಗೆಹರಿಸುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಎರಡು ವರ್ಷವಾದರೂ ಅವ್ಯಾವುದನ್ನೂ ಬಗೆಹರಿಸಿಲ್ಲ. ಈ ಬಾರಿಯ ಬಜೆಟ್ ನಲ್ಲಾದರೂ ಇವುಗಳನ್ನು ಜಾರಿಗೊಳಿಸುವುದಾಗಿ ಘೋಷಿಸಬೇಕೆಂದು ಆಗ್ರಹಿಸಿದರು.
ವಿದ್ಯುತ್ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದು. ಬಗರ್ ಹುಕುಂ ರೈತರ ಭೂಮಿಗಳನ್ನು ಕೂಡಲೇ ಮಂಜೂರು ಮಾಡಬೇಕು. ಕಾನೂನು ತೊಡಕನ್ನು ಕಾರಣವಾಗಿ ನೀಡಿ ಬಡ ರೈತರ ಅರ್ಜಿಗಳನ್ನು ತಿರಸ್ಕರಿಸಬಾರದು ಮತ್ತು ಒಕ್ಕಲೆಬ್ಬಿಸಬಾರದು. ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಕಾರ್ಮಿಕರ ಕುರಿತ 4 ಕೋಡ್ ಗಳನ್ನು ತಿರಸ್ಕರಿಸುವ ತೀರ್ಮಾನ ತೆಗೆದುಕೊಳ್ಳಬೇಕು. ಅಂತರಾಷ್ಟ್ರೀಯ ಶ್ರಮ ಒಡಂಬಡಿಕೆಗೆ ವಿರುದ್ಧವಾಗಿ ದುಡಿಮೆಯ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಸಿರುವ ಕಾರ್ಮಿಕ ವಿರೋಧಿ ತಿದ್ದುಪಡಿಯನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಎಲ್ಲಾ ಬಗೆಯ ಅಸಂಘಟಿತ, ಅನೌಪಚಾರಿಕ, ಸ್ಕೀಂ, ಗುತ್ತಿಗೆ ಮುಂತಾದ ಬಗೆಯ ಕಾರ್ಮಿಕರು ಹಾಗೂ ನೌಕರರ ಉದ್ಯೋಗ ಭದ್ರತೆ, ಸಾಮಾಜಿಕ ಕಲ್ಯಾಣ ಹಾಗೂ ಘನತೆಯ ವೇತನಕ್ಕಾಗಿ ಸಮಗ್ರ ನೀತಿಯನ್ನು ರೂಪಿಸಬೇಕು. ಎಸ್ ಸಿ ಪಿ ಎಸ್ / ಎಸ್ ಟಿ ಪಿ ಎಸ್ ನಿಧಿಯ ದುರಪಯೋಗವನ್ನು ತಡೆಯಬೇಕು. ಗ್ಯಾರಂಟಿ ಯೋಜನೆಗಳಿಗೂ ಒಳಗೊಂಡAತೆ ಬೇರೆ ಉದ್ದೇಶಗಳಿಗೆ ಬಳಕೆಯಾಗಿದ್ದ ಹಣವನ್ನು ಮತ್ತೆ ಈ ನಿಧಿಗೆ ಮರು ಭರ್ತಿ ಮಾಡಬೇಕು. ಮೈಕ್ರೋ ಫೈನಾನ್ಸ್ ಹಾವಳಿಯಿಂದ ಜನರನ್ನು ವಿಶೇಷವಾಗಿ ಮಹಿಳೆಯರನ್ನು ಹಾಗೂ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರ, ಭ್ರೂಣ ಹತ್ಯೆ, ಮಾರ್ಯದೆಗೇಡು ಹತ್ಯೆ ಮುಂತಾದ ಹಿಂಸೆಗಳಿಂದ ಮಹಿಳೆಯರನ್ನು ಪಾರು ಮಾಡಲು ಪಾರುಮಾಡಲು ಸಮಗ್ರ ನೀತಿ ರೂಪಿಸಬೇಕು. ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಯನ್ನು ತಿರಸ್ಕರಿಸಬೇಕು. ಬೆಲೆ ಏರಿಕೆಗೆ ಕಡಿವಾಣ ಹಾಕಲೇಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವೂ ಅಗತ್ಯ ಕ್ರಮ ಕೈಗೊಳ್ಳಬೇಕು. ಕೇಂದ್ರ ಸರ್ಕಾರದ ಮೇಲೂ ಒತ್ತಡ ಹೇರಬೇಕು ಎಂಬುದನ್ನು ಸೇರಿದಂತೆ ಹನ್ನೆರಡು ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಸಿಐಟಿಯು ಜಿಲ್ಲಾ ಸಂಚಾಲಕ ಎಂ.ನಾರಾಯಣ್ ಮಾತನಾಡಿ, ಜನಪರವಾಗಿರುತ್ತೇವೆ ಎಂದು ಆಶ್ವಾಸನೆ ಕೊಡುವುದರ ಮೂಲಕ ರೈತರಿಗೆ ಬೆಂಬಲ ಬೆಲೆ ಕೊಡುತ್ತೇವೆ ಎಂದು ಹೇಳಿ ಇದ್ಯಾವುದನ್ನೂ ಗಣನೆಗೆ ತೆಗೆದುಕೊಳ್ಳದೆ ಸುಳ್ಳು ಭರವಸೆ ಕೊಡುವುದರಲ್ಲಿ ತೇಲುತ್ತಿದೆ. ಗುತ್ತಿಗೆ ಪದ್ಧತಿ ರಾಜ್ಯಾವ್ಯಾಪಿಯಾಗಿ ಹಬ್ಬಿಕೊಂಡಿದೇ. ಗುತ್ತಿಗೆ ಪದ್ಧತಿಗೆ ಕಡಿವಾಣ ಹಾಕಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಬೇಕು. ಗುತ್ತಿಗೆ ಪದ್ಧತಿಯನ್ನು ಸಂಪೂರ್ಣವಾಗಿ ನಿಬರ್ಂಧ ಮಾಡಬೇಕು. ಯಾವುದೇ ಕಾರ್ಮಿಕರಿಗೆ ಅನ್ಯಾಯವಾಗಬಾರದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಿ. ಚಂದ್ರಪ್ಪ, ಕೆ. ರಾಘವೇಂದ್ರ, ಎಂ. ಮಹದೇವಪ್ಪ, ಪಿ. ಶೇಖರಪ್ಪ, ಮಂಜಪ್ಪ, ಹನುಮಂತಪ್ಪ, ಹಿಟ್ಟೂರು ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post