ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶ್ರೀಗಳು ಅವರ ಯವ್ವನವನ್ನು ತ್ಯಜಿಸಿ ಧರ್ಮ ರಕ್ಷಣೆಗೆ ಮುಂದೆ ಬಂದು ಸಾಕಷ್ಟು ಸಮಾಜದಲ್ಲಿ ಬದಲಾವಣೆ ತರುವ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಶಿಕ್ಷಣದ ಮೂಲಕ ಅನ್ನ ದಾಸೋಹದ ಮೂಲಕ ಮತ್ತು ಧರ್ಮ ಶಿಕ್ಷಣದ ಮೂಲಕ ವಿವಿಧ ಸಮಾಜಮುಖಿ ಕೆಲಸವನ್ನು ನಿರ್ವಹಿಸುತ್ತಿದ್ದಾರೆ ಎಂದು ಸಂಸದ ಬಿ. ವೈ. ರಾಘವೇಂದ್ರ ತಿಳಿಸಿದರು.
ಶಿವಮೊಗ್ಗದ ಆದಿಚುಂಚನಗಿರಿ ಶಾಖಾ ಮಠದ 31ನೇ ವರ್ಷದ ವಾರ್ಷಿಕೋತ್ಸವದ ಧರ್ಮ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಸಮಯ ಅತ್ಯಂತ ಅಮೂಲ್ಯ ಯಾವುದೇ ಕಾರಣಕ್ಕೂ ವ್ಯರ್ಥ ಮಾಡಬಾರದು. ಇರುವ ಸಮಯವನ್ನು ಸಮರ್ಪಕವಾಗಿ ಬಳಸಿದರೆ ಸಾಧನೆ ನಿಮ್ಮದಾಗುತ್ತದೆ. ಜೀವನದಲ್ಲಿ ಸಂತರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದರು.
ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ. ಶ್ರೀ ಪ್ರಸನ್ನನಾಥ ಸ್ವಾಮೀಜಿ. ಗರ್ತಿಕೆರೆ ಮಠದ ರೇಣುಕಾನಂದ ಶ್ರೀಗಳು. ಪ್ರಸನ್ನ ಕುಮಾರ್. ಯುವ ವಾಗ್ಮಿ ಆದರ್ಶ ಗೋಕಲೆ ಮತ್ತಿತರರು ಉಪಸ್ಥಿರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post