ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಸೇವಾ ಸಪ್ತಾಹದ ಅಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಿದ್ದು, ಬಜರಂಗದಳ ಸಂಚಾಲಕ ಅಂಕುಶ್ ನೇತೃತ್ವದಲ್ಲಿ ಗುರುಪುರ ಭಾಗದಲ್ಲಿ ಸುಮಾರು 40 ಗಿಡಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದು ಪರಿಷತ್ನ ಜಿಲ್ಲಾಧ್ಯಕ್ಷ ವಾಸುದೇವ್, ಜಿಲ್ಲಾ ಕಾರ್ಯದರ್ಶಿ ನಾರಾಯಣ್ ಜೀ ವರ್ಣಕಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಹಿಪಾಲ್, ಬಜರಂಗದಳ ಜಿಲ್ಲಾ ಸಂಚಾಲಕ ರಾಜೇಶ್ ಗೌಡ, ನಗರ ಅಧ್ಯಕ್ಷ ಸತೀಶ್, ಮೋಹನ್ ರೆಡ್ಡಿ, ನಂಜುಂಡೇಶ್ವರ, ಕಾರ್ಯಕರ್ತರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















