Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ರಾಜ್ಯದ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಆನ್ ಲೈನ್ ಸಂವಾದ

ಏಕಕಾಲದಲ್ಲಿ ನಡೆದ ಸಂವಾದ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದೆ: ಬಿ. ವೈ. ವಿಜಯೇಂದ್ರ

April 27, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ರಾಜ್ಯದ ಬಿಜೆಪಿ ಕಾರ್ಯಕರ್ತರೊಂದಿಗೆ ಆನ್ ಲೈನ್ ಮೂಲಕ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ PM Narendra Modi ಪಾಲ್ಗೊಂಡು ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದರು.

ಶಿವಮೊಗ್ಗದ ಹೊನ್ನಳ್ಳಿ ರಸ್ತೆಯಲ್ಲಿರುವ ಗೊಂಧಿ ಚಟ್ನಹಳ್ಳಿಯ ಸಭಾಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆನ್ಲೈನ್ ಮೂಲಕ ಆಯೋಜಿಸಿದ್ದ ಕಾರ್ಯಕ್ರಮವನ್ನು ಗ್ರಾಮದ ಹಲವರು  ವೀಕ್ಷಿಸಿದರು.

ಬಿಜೆಪಿ ಕಾರ್ಯಕರ್ತ ವಿರೂಪಾಕ್ಷಪ್ಪ ಎಂಬುವರು ಕೇಳಿದ ಪ್ರಶ್ನೆ ಒಂದಕ್ಕೆ ಉತ್ತರಿಸಿದ ಪ್ರಧಾನಿ ಮೋದಿ, ಶಿವಮೊಗ್ಗ ಸವಾಲಿನ ಕ್ಷೇತ್ರವಾಗಿದೆ. ಇಂತಹ ಸಂದರ್ಭದಲ್ಲಿ ಬೂತ್ ಮಟ್ಟದಲ್ಲಿ ಹೇಗೆ ಕಾರ್ಯ ನಿರ್ವಹಿಸಬೇಕು? ಸರ್ಕಾರದ ಸಾಧನೆಗಳನ್ನು ಜನರಿಗೆ ಹೇಗೆ ತಲುಪಿಸಬೇಕು ಎಂಬಿತ್ಯಾದಿ ವಿಷಯಗಳ ಕುರಿತು ಉತ್ತರ ನೀಡಿದರು.

ಸರ್ಕಾರದ ಸಾಧನೆಗಳನ್ನು ಬೂತ್ ಮಟ್ಟದಲ್ಲಿ ಮನೆ ಮನೆಗೆ ತಲುಪಬೇಕಿದೆ. ಕೇವಲ ಮನೆ ಹೊರಗೆ ನಿಂತು ಪಾಂಪ್ಲೆಟ್ ಕೊಟ್ಟು ಬರಬೇಡಿ. ನೀವು ಏನು ಹೇಳಲು ಹೊರಟ್ಟಿದ್ದೀರಾ ಅದು ನಿಮ್ಮ ಮೊಬೈಲ್, ಡೈರಿಯಲ್ಲಿ ಬರೆದಿಟ್ಟುಕೊಂಡಿರಬೇಕು. ನಿಮ್ಮ ತಲೆಯಲ್ಲಿ, ಹೃದಯದಲ್ಲಿ ಇರಬೇಕು.‌ ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನೆಯವರೊಂದಿಗೆ ವಿನಯವಾಗಿ ನಡೆದುಕೊಳ್ಳಬೇಕು. ಮನೆಯ ಹಿರಿಯ ಸದಸ್ಯರಿಗೆ ನಮಸ್ಕಾರ ಮಾಡಬೇಕು. ಸಣ್ಣ ಸಣ್ಣ ಮಕ್ಕಳಿಗೆ ಪ್ರೀತಿ ತೋರಿಸಬೇಕು. ಆ ನಂತರ ಬಿಜೆಪಿ ಸರ್ಕಾರದ ಯೋಜನೆಯನ್ನು, ಸಾಧನೆಯ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು. ಬಿಜೆಪಿ ಸರ್ಕಾರದ ಸಾಧನೆ, ಯೋಜನೆಯನ್ನು ಮತದಾರರಿಗೆ ತಿಳಿಸಿ ಹೇಳಬೇಕು ಎಂದರು.

ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವ ಡಬ್ಬಲ್ ಇಂಜಿನ್ ಸರ್ಕಾರ ರಾಜ್ಯ, ದೇಶದ ಅಭಿವೃದ್ಧಿ ಮಾಡುತ್ತಿದೆ. ಈ ಬಗ್ಗೆ ಜನರಿಗೆ ತಿಳಿಸಿ. ಅಭಿವೃದ್ಧಿ ಮಂತ್ರ ಜಪಿಸುತ್ತಿರುವುದು ಜನರಿಗೆ ತಿಳಿಸಿಕೊಡಿ.‌ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಸಾಧಿಸುತ್ತಿರುವ ಬಗ್ಗೆ ಮತದಾರರಿಗೆ ತಲುಪಬೇಕು. ಇವೆಲ್ಲವನ್ನೂ ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

ಡಬ್ಬಲ್ ಇಂಜಿನ್ ಸರ್ಕಾರ ಏನು ಮಾಡುತ್ತಿದೆ ಎಂಬುದು ತಿಳಿಸುವ ಅಗತ್ಯವಿದೆ. ಕೇವಲ ರಾಜಕೀಯ ಮಾಡದೇ, ಅಭಿವೃದ್ಧಿ ನಮ್ಮ ಪಣವಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಅಗ್ರಗಣ್ಯ ಸಾಧನೆ ಮಾಡಲಾಗಿದೆ. ಭ್ರಷ್ಟಾಚಾರದ ಬಗ್ಗೆ ಡಬ್ಬಲ್ ಇಂಜಿನ್ ಸರ್ಕಾರ ಪ್ರಹಾರ ಮಾಡಿದೆ. ಕಪ್ಪುಹಣ ವರ್ಗಾವಣೆ ಬಗ್ಗೆ ನಿಗಾ ಇಟ್ಟಿದೆ. ಕೆಲವರ ಜೇಬು ಸೇರುತ್ತಿದ್ದ ಹಣ ಈಗ ಸರ್ಕಾರದ ಖಜಾನೆ ಸೇರುತ್ತಿದೆ. ಭ್ರಷ್ಟಾಚಾರದ ವಿರುದ್ಧ ನಮ್ಮ ಡಬ್ಬಲ್ ಇಂಜಿನ್ ಸರ್ಕಾರ ಸಮರ ಸಾರಿದೆ. ರಾಜ್ಯವನ್ನು ಭ್ರಷ್ಟಮುಕ್ತವಾಗಿಸಲು ನಮ್ಮ ಸರ್ಕಾರ ಮುಂದಾಗಿದೆ. ಸಾಮಾಜಿಕವಾಗಿ ಜಾಗೃತಗೊಳಿಸಲಾಗುತ್ತಿದೆ ಎಂದು ಹೇಳಿದರು.

ಕರ್ನಾಟಕದ ಜನರು, ಭಕ್ತಿ, ಯುಕ್ತಿ ಮೂಲಕ ರಾಜ್ಯದ ಅಭಿವೃದ್ಧಿಗೆ ಕೈ ಜೋಡಿಸುತ್ತಿದ್ದಾರೆ. ರಾಜ್ಯದ ಜನರು ಸಾಹಿತ್ಯವನ್ನು ತಮ್ಮ ಉಸಿರನ್ನಾಗಿಸಿಕೊಂಡಿದ್ದಾರೆ ಎಂದು ರಾಷ್ಟ್ರಕವಿ ಕುವೆಂಪು ಅವರ ಹೆಸರು ಪ್ರಸ್ತಾಪಿಸಿದರು.

ಕರ್ನಾಟಕದ ಜೊತೆಗೆ ನನ್ನ ಅವಿನಾಭಾವ ಸಂಬಂಧವಿದೆ.‌ಕರ್ನಾಟಕದ ವಿಕಾಸಕ್ಕಾಗಿ ಹಲವಾರು ಜನರು ದುಡಿಯುತ್ತಿದ್ದಾರೆ. ಇವೆಲ್ಲವನ್ನೂ ನಾನು ಮನ್ ಕಿ ಬಾತ್ ನಲ್ಲಿ ಪ್ರಸ್ತಾಪಿಸಿದ್ದೇನೆ. ಕೆಲವೇ ದಿನಗಳಲ್ಲಿ ಮನ್ ಕಿ ಬಾತ್ ನೂರು ಕಾರ್ಯಕ್ರಮವಾಗಿಸುವ ಕಾರ್ಯಕ್ರಮವಾಗಲಿದೆ. ಇವೆಲ್ಲವೂ ನಿಮ್ಮಿಂದ ಸಾಧ್ಯವಾಗಿದೆ ಎಂದರು.

Kalahamsa Infotech private limited
ಸಂಸ್ಕೃತಿ, ಧಾರ್ಮಿಕತೆ ಆಧುನಿಕ ಜೀವನದಲ್ಲಿ ಹಾಸು ಹೊಕ್ಕಾಗಿದೆ. ಇತಿಹಾಸದ ಜೊತೆಗೆ ವರ್ತಾಮಾನದ ಬಗ್ಗೆಯೂ ಯೋಚಿಸಬೇಕಿದೆ.‌ ಇಂದು ಒಂದು ಉತ್ತಮ ಸರ್ಕಾರದ ಕಾರ್ಯವೈಖರಿಯಾಗಿದೆ.‌ ಬಿಜೆಪಿ ಶಾರ್ಟ್ ಕಟ್ ಪಕ್ಷವಲ್ಲ. ದೇಶಕ್ಕಾಗಿ ದುಡಿದಿರುವ, ದುಡಿಯುವ ಪಕ್ಷವಾಗಿದೆ. ಬಿಜೆಪಿ ಸರ್ಕಾರ ಹಲವು ಆಯಾಮಗಳಲ್ಲಿ, ಯೋಚಿಸಿ, ಯೋಜಿಸಿ ಕಾರ್ಯಸಾಧುವಾಗಿಸುತ್ತದೆ ಎಂದರು.

ಗ್ರಾಮಸ್ಥರೊಂದಿಗಿನ ಪ್ರಧಾನಿ ನರೇಂದ್ರ ಮೋದಿ ಅವರ ಸಂವಾದ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಿದ್ದರು

ಏಕಕಾಲದಲ್ಲಿ ನಡೆದ ಸಂವಾದ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದೆ: ಬಿ. ವೈ. ವಿಜಯೇಂದ್ರ
ಚುನಾವಣಾ ಪ್ರವಾಸದ ಮಾರ್ಗಮಧ್ಯೆ ಪಕ್ಷದ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ಸಂವಾದದಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ .ವಿಜಯೇಂದ್ರ ಭಾಗವಹಿಸಿ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದ 50 ಲಕ್ಷ ಕಾರ್ಯಕರ್ತರೊಂದಿಗೆ ಏಕಕಾಲದಲ್ಲಿ ನಡೆದ ಸಂವಾದವು ನಮ್ಮ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸ ಹೆಚ್ಚಿಸಿದೆ. ಕಾರ್ಯಕರ್ತರ ಪಾಲಿಗೆ ಪ್ರೇರಣಾಶಕ್ತಿಯಾಗಿರುವ ಪ್ರಧಾನಿಗಳು ನಮ್ಮ ಡಬಲ್ ಇಂಜಿನ್ ಸರ್ಕಾರದ ಐತಿಹಾಸಿಕ ನಿರ್ಣಯಗಳು, ಜನಪರ ಕಾರ್ಯಕ್ರಮಗಳು ಹಾಗೂ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರ ಹಾಗೂ ಅಭಿವೃದ್ಧಿ ವಿರೋಧಿ ರಾಜಕಾರಣವನ್ನು ಜನರ ಮುಂದಿಟ್ಟು ಪಕ್ಷದ ಪರ ಮತ ಯಾಚಿಸುವಂತೆ ಅತ್ಯಮೂಲ್ಯವಾದ ಸಲಹೆ ನೀಡಿದ್ದಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaPM Narendra ModiShimogaShivamoggaNewsಪ್ರಧಾನಿ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಲಿಫ್ಟ್’ಗೆ ಸಿಲುಕಿ ಬೆಂಗಳೂರಿನಲ್ಲಿ ಯುವಕ ದುರ್ಮರಣ

Next Post

ಹೊನ್ನಿಕೇರಿ, ಚೊಂಡಿ, ಚೌಳಿ, ಅತಿವಾಳ, ಕಪಲಾಪೂರಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಮತಯಾಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೊನ್ನಿಕೇರಿ, ಚೊಂಡಿ, ಚೌಳಿ, ಅತಿವಾಳ, ಕಪಲಾಪೂರಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಮತಯಾಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!