Tuesday, October 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕಾಂಗ್ರೆಸ್‌ನವರಿಂದ ಅರ್ಥಹೀನ ರಾಜಕಾರಣ: ಕೆ.ಎಸ್. ಈಶ್ವರಪ್ಪ ವಾಗ್ಧಾಳಿ

September 2, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಂಗ್ರೆಸ್ ನವರು ಅರ್ಥಹೀನ ರಾಜಕಾರಣ ಮಾಡುತ್ತಿದ್ದು, ಅಸಹ್ಯ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ರಾಷ್ಟ್ರ ಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ #K S Eshwarappa ಆರೋಪಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯಪಾಲರ ಹುದ್ದೆಗೆ ತನ್ನದೇ ಆದ ಘನತೆ ಇದೆ. ರಾಜ್ಯಪಾಲರನ್ನು ಅವಮಾನ ಮಾಡುವುದು ಎಷ್ಟರಮಟ್ಟಿಗೆ ಸರಿ. ಸಿದ್ಧರಾಮಯ್ಯ ಅವರಿಗೆ ತನಿಖೆಗೆ ಆದೇಶ ನೀಡಿದ್ದಾರೆ ಎಂಬ ವಿಷಯವನ್ನು ಇಟ್ಟುಕೊಂಡು ರಾಜಭವನ ಚಲೋ ಮಾಡುವುದು ಎಷ್ಟರಮಟ್ಟಿಗೆ ಸರಿ? ಅಲ್ಲದೇ ರಾಜ್ಯಪಾಲರ ಭಾವಚಿತ್ರವನ್ನು ಸುಟ್ಟು ಹಾಕುವುದು ಅವಹೇಳನಕಾರಿಯಾಗಿ ಮಾತನಾಡುವುದು ಸಂವಿಧಾನ ವಿರೋಧಿಯಲ್ಲವೇ? ಇದು ಕಾಂಗ್ರೆಸ್‍ನ ಅಸಹ್ಯಕರ ಮತ್ತು ಅರ್ಥಹೀನ ರಾಜಕಾರಣ ಮಾಡುತ್ತಿದ್ದಾರೆ ಎಂದು ದೂರಿದರು.
ಈಗಾಗಲೇ ಕಾಂಗ್ರೆಸ್ ನವರು ಆರೋಪಿಸುತ್ತಿರುವಂತೆ ರಾಜ್ಯಪಾಲರ ಬಳಿ ಯಾವುದೇ ದೂರುಗಳ ಬಗ್ಗೆ ಕಡತಗಳು ಇಲ್ಲ. ಹೆಚ್.ಡಿ. ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ ಅವರಿಗೆ ಸಂಬಂಧಿಸಿದಂತೆ ಲೋಕಾಯುಕ್ತದಿಂದ ದೂರುಗಳು ಇಲ್ಲ. ಯಾವುದೇ ಕಡತ ಇಲ್ಲದಿದ್ದರೂ ರಾಜ್ಯಪಾಲರು ಇವುಗಳನ್ನು ಇಟ್ಟುಕೊಂಡಿದ್ದಾರೆ ಎಂದು ಕಾಂಗ್ರೆಸ್ ನವರು ಬೊಬ್ಬೆ ಬಿಡುತ್ತಿದ್ದಾರೆ ಅಷ್ಟೇ. ಈಗಾಗಲೇ ಗೃಹಮಂತ್ರಿ ಡಾ.ಜಿ. ಪರಮೇಶ್ವರ್ ಕೂಡ ಈ ಬಗ್ಗೆ ಸ್ಪಷ್ಟನೆ ಕೂಡ ನೀಡಿದ್ದಾರೆ. ರಾಜ್ಯಪಾಲರ ಬಳಿ ಯಾವುದೇ ಕಡತಗಳಿಲ್ಲ. ಹೆಚ್.ಡಿ. ಕುಮಾರಸ್ವಾಮಿ ಅವರ ಫೈಲ್ ವೊಂದಿತ್ತು. ಅದು ಕೂಡ ರಾಜ್ಯಪಾಲರು ಲೋಕಾಯುಕ್ತಕ್ಕೆ ವಾಪಸ್ ಕಳಿಸಿದ್ದಾರೆ ಎಂದು ಹೇಳಿದ್ದಾರೆ. ಹೀಗಿರುವಾಗ ಕಾಂಗ್ರೆಸ್‍ನವರು ರಾಜ್ಯಪಾಲರ ಬಗ್ಗೆ ಸಲ್ಲದ ಮಾತನಾಡುತ್ತಿರುವುದು ಸರಿಯಲ್ಲ ಎಂದರು.

Also read: ಶಿವಮೊಗ್ಗ | ಸೋಗಾನೆ ಜೈಲಿನಲ್ಲಿ ಕೈದಿಗಳ ಪ್ರತಿಭಟನೆ

ರಾಜ್ಯಪಾಲರ #Governer ಬಳಿ ಕಾಂಗ್ರೆಸ್ ನಾಯಕರು ಹೋದಾಗ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ ಅವರ ಕುರಿತು ನೀವು ಒಳಗೆ ಬರುವ ಹಾಗಿಲ್ಲ ಎಂದು ಹೇಳಿರುವುದು ಸರಿಯಾಗಿಯೇ ಇದೆ. ಅವರು ರಾಷ್ಟ್ರದ್ರೋಹದ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಮುಖಂಡರಿಗೆ ಯಾವ ಅಂಜಿಕೆಯೂ ಇಲ್ಲವಾಗಿದೆ. ಐವಾನ್ ಡಿಸೋಜ ಅವರನ್ನು ಕೂಡಲೇ ರಾಷ್ಟ್ರದ್ರೋಹದ ಆರೋಪದ ಹಿನ್ನಲೆಯಲ್ಲಿ ಬಂಧಿಸಬೇಕು. ಅಲ್ಲದೇ, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ನಾಯಕರು ಈ ಎಲ್ಲಾ ಘಟನೆಗಳಿಗೆ ಸಂಬಂಧಿಸಿದಂತೆ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದರು.

ಮಹಿಳೆಯೊಬ್ಬರು ರಾಜಕಾರಣಕ್ಕೆ ಬರುವುದು ಬಹುಕಷ್ಟವಾಗಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕಿ ಸಿಮಿ ಎಂಬುವವರು ಈ ಬಗ್ಗೆ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜಕಾರಣದಲ್ಲಿ ಮಹಿಳೆಯೊಬ್ಬರು ಅವಕಾಶ ಪಡೆಯಬೇಕಾದರೆ ಸಿನಿಮಾ ಕ್ಷೇತ್ರದಲ್ಲಿ ಇರುವಂತೆ ಅಲ್ಲಿನ ನಾಯಕರ ಜೊತೆ ಸಂಬಂಧವಿಟ್ಟುಕೊಳ್ಳಬೇಕು. ಇಂತಹ ಪರಿಸ್ಥಿತಿ ಮಹಿಳೆಯರಿಗೆ ಬಂದಿದೆ. ಇದು ಕಾಂಗ್ರೆಸ್ ಪಕ್ಷದಲ್ಲೂ ಇದೆ ಎಂದು ಧೈರ್ಯವಾಗಿ ಹೇಳಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಅವರ ಹೇಳಿಕೆಯನ್ನು ವಿಮರ್ಶೆ ಮಾಡುವುದನ್ನು ಬಿಟ್ಟು ಪಕ್ಷದಿಂದಲೇ ಉಚ್ಚಾಟನೆ ಮಾಡಿರುವುದು ಸರಿಯಲ್ಲ ಎಂದರು.

ರಾಷ್ಟ್ರ ಭಕ್ತರ ಬಳಗವು ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಹೋರಾಡ ನಡೆಸಿತ್ತು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಇಡೀ ರಾಜ್ಯಾದ್ಯಂತ ವಿದ್ಯಾರ್ಥಿವೇತನ ಬಿಡುಗಡೆ ಮಾಡಿದ್ದಾರೆ. ಅವರಿಗೆ ಅಭಿನಂದನೆಗಳು ಎಂದರು. ಹಾಗೆಯೇ ಆಶ್ರಯ ಮನೆಗಳ ವಿತರಣೆಯಾಗಬೇಕು. ಮತ್ತು ಸರ್ಕಾರ ಮಾತು ಕೊಟ್ಟಂತೆ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಕುಟುಂಬಕ್ಕೆ 25 ಲಕ್ಷ ರೂ. ತಕ್ಷಣವೇ ನೀಡಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಮಹಾಲಿಂಗ ಶಾಸ್ತ್ರಿ, ವಿಶ್ವಾಸ್, ಶ್ರೀಕಾಂತ್, ಬಾಲು, ವಾಗೀಶ್, ಶಿವಕುಮಾರ್, ಜಾಧವ್, ಚನ್ನಬಸಪ್ಪ, ಚಿದಾನಂದ, ಮುತ್ತು ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: GovernerK S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿರಾಜ್ಯಪಾಲಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗ | ಸೋಗಾನೆ ಜೈಲಿನಲ್ಲಿ ಕೈದಿಗಳ ಪ್ರತಿಭಟನೆ

Next Post

ಸಂಸ್ಕೃತ ಸರಳ, ಸುಂದರ ಸುಲಭವಾದ ಭಾಷೆ: ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಂಸ್ಕೃತ ಸರಳ, ಸುಂದರ ಸುಲಭವಾದ ಭಾಷೆ: ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಮನಿಸಿ ! ಬೆಳಗಾವಿ, ತಿರುಪತಿ, ಕೊಲ್ಲಾಪುರ ಸೇರಿ ಹಲವು ರೈಲು ಸಂಚಾರ ರದ್ದು

October 14, 2025

ದೇಶಕ್ಕಾಗಿ ಅರ್ಪಿಸಿಕೊಳ್ಳುವ ಮನಃಸ್ಥಿತಿ ಬೆಳೆಸಿ: ಸುರೇಶ್ ಋಗ್ವೇದಿ ಅಭಿಮತ

October 13, 2025

ಅಖಿಲ ಭಾರತ ಸ್ಟೇಷನ್ ಮಾಸ್ಟರ್ ಅಸೋಸಿಯೇಷನ್ ಸಾಮಾನ್ಯ ಸಭೆ ಯಶಸ್ವಿ | ಯಾರೆಲ್ಲಾ ಆಯ್ಕೆಯಾದರು?

October 13, 2025

ಗಮನಿಸಿ! ಶಿವಮೊಗ್ಗದ ಗ್ರಾಮಾಂತರದ ಈ ಎಲ್ಲ ಕಡೆ ಅ.14 ನಾಳೆ ಕರೆಂಟ್ ಇರಲ್ಲ

October 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಮನಿಸಿ ! ಬೆಳಗಾವಿ, ತಿರುಪತಿ, ಕೊಲ್ಲಾಪುರ ಸೇರಿ ಹಲವು ರೈಲು ಸಂಚಾರ ರದ್ದು

October 14, 2025

ದೇಶಕ್ಕಾಗಿ ಅರ್ಪಿಸಿಕೊಳ್ಳುವ ಮನಃಸ್ಥಿತಿ ಬೆಳೆಸಿ: ಸುರೇಶ್ ಋಗ್ವೇದಿ ಅಭಿಮತ

October 13, 2025

ಅಖಿಲ ಭಾರತ ಸ್ಟೇಷನ್ ಮಾಸ್ಟರ್ ಅಸೋಸಿಯೇಷನ್ ಸಾಮಾನ್ಯ ಸಭೆ ಯಶಸ್ವಿ | ಯಾರೆಲ್ಲಾ ಆಯ್ಕೆಯಾದರು?

October 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!