ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್’ಡೌನ್ ಘೋಷಣೆ ಮಾಡಲಾಗಿದ್ದು, ಎಪ್ರಿಲ್ 21ರವರೆಗೂ ಯಾರೂ ಮನೆಯಿಂದ ಹೊರಕ್ಕೆ ಬಾರದಂತೆ ಸೂಚಿಸಲಾಗಿದೆ.
ಆದರೆ, ನಗರದಲ್ಲಿ ಕಾನೂನು ಉಲ್ಲಂಘಿಸಿ ಅನಾವಶ್ಯಕವಾಗಿ ತಿರುಗಾಡುತ್ತಿರುವವರಿಗೆ ಶಿವಮೊಗ್ಗ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಾರೆ.
ಎಪ್ರಿಲ್ 14ರವರೆಗೂ ಯಾವುದೇ ಕಾರಣಕ್ಕೂ ಮನೆಯಿಂದ ಹೊರಕ್ಕೆ ಬಾರದಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಆದರೆ, ಇದನ್ನು ಲೆಕ್ಕಿಸದೇ ಅನಾವಶ್ಯಕವಾಗಿ ಖಾಲಿ ರಸ್ತೆಗಳಲ್ಲಿ ತಿರುಗಾಡುತ್ತಾ ಆದೇಶ ಉಲ್ಲಂಘಿಸುತ್ತಿರುವ ಘಟನೆಗಳು ಹೆಚ್ಚಾಗುತ್ತಿದೆ.
ಈ ಹಿನ್ನೆಲೆಯಲ್ಲಿ ನಗರದ ಹಲವು ಪ್ರದೇಶಗಳಲ್ಲಿ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದಾರೆ. ಅನಾವಶ್ಯಕವಾಗಿ ಓಡಾಡುತ್ತಿರುವ ವಾಹನ ಸವಾರರನ್ನು ತಡೆದು ಮನೆಯಿಂದ ಹೊರಕ್ಕೆ ಬಾರದಂತೆ ಸೂಚನೆ ನೀಡುತ್ತಿದ್ದು, ಬಹಳಷ್ಟು ಯುವಕರಿಗೆ ಲಾಠಿ ರುಚಿ ತೋರಿಸಿದ್ದಾರೆ.
Get in Touch With Us info@kalpa.news Whatsapp: 9481252093
Discussion about this post