ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹರ್ಷನ ಕೊಲೆ #Harsha Murder ಹಿನ್ನೆಲೆಯಲ್ಲಿ ನಗರದಲ್ಲಿ ನಡೆದ ವ್ಯಾಪಕ ಹಿಂಸಾಚಾರದಲ್ಲಿ ಪೊಲೀಸರ ನಿಷ್ಕ್ರಿಯತೆಯಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ #PFI ಜಿಲ್ಲಾಧ್ಯಕ್ಷ ಸಯ್ಯದ್ ರಿಝ್ವಾನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ಸಣ್ಣಪುಟ್ಟ ಘಟನೆಗಳು ನಡೆದರೂ ಬಿಜೆಪಿ-ಸಂಘ ಪರಿವಾರವು ಕೋಮು ಲೇಪ ನೀಡಿ ಅದನ್ನು ತನ್ನ ರಾಜಕೀಯ ಸ್ವಾರ್ಥ ಸಾಧನೆಗೆ ಬಳಸಿಕೊಳ್ಳುವುದು ಪ್ರವೃತ್ತಿಯಾಗಿದೆ. ಈ ಹಿಂದೆ ಜಿಲ್ಲೆಯಲ್ಲಿ ಹಿಂದೂ ಯುವಕನೊಬ್ಬನ ಕೊಲೆ ನಡೆದಾಗ ಬಿಜೆಪಿ ಅದನ್ನು ಮುಸ್ಲೀಮರ ತಲೆಗೆ ಕಟ್ಟಿ ವ್ಯಾಪಕ ದ್ವೇಷವನ್ನು ಹರಡಿತು. ಈಗ ನಗರದಲ್ಲಿ ನಡೆದಿರುವ ಕೊಲೆ ಪ್ರಕರಣದ ವಿಚಾರಣೆ ತನಿಖೆಯ ಹಂತದಲ್ಲಿರುವಾಗಲೇ ಸಚಿವ ಈಶ್ವರಪ್ಪನರು ಅದನ್ನು ಮುಸ್ಲಿಮರ ತಲೆಗೆ ಕಟ್ಟಿ ಮುಸ್ಲಿಂ ವಿರೋಧಿ ಭಾವನೆಗಳನ್ನು ಕೆರಳಿಸಿದ್ದಾರೆ. ಈಗಾಗಲೇ ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದು, ಈ ಘಟನೆಗೆ ಕೋಮು ಬಣ್ಣ ಹೆಚ್ಚಿ ಪಾರಾಗುವ ತಂತ್ರ ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ದುಷ್ಕೃತ್ಯಗಳಿಗೆ ಪ್ರಚೋದನೆ ನೀಡಿರುವ ಸಚಿವ ಈಶ್ವರಪ್ಪನವರ #Minister Eshwarappa ವಿರುದ್ಧ ಪ್ರಕರಣ ದಾಖಲಿಸಬೇಕು, ಹಿಂಸಾಚಾರದಲ್ಲಿ ತೊಡಗಿದವರ ವಿರುದ್ಧ ಕಾರ್ಯಾಚರಣೆ ನಡೆಸಿ, ತಪ್ಪಿತಸ್ಥಿರಿಗೆ ಶಿಕ್ಷೆಗೆ ಗುರಿಪಡಿಸಬೇಕು, ಪೊಲೀಸರು ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಯ ಮೂಲಕ ಕೊಲೆ ಪ್ರಕರಣದ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.
Also read: ಖಾಕಿ ಕಣ್ಗಾವಲಿನಲ್ಲಿ ಶಿವಮೊಗ್ಗ, ಆರ್’ಎಎಫ್ ರೂಟ್ ಮಾರ್ಚ್: ಭದ್ರತೆಗೆ ಎಷ್ಟು ಪೊಲೀಸರ ನಿಯೋಜನೆ?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post