No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಶ್ರೀಗಂಧದ ಕಂಪಿನೊಟ್ಟಿಗೆ ‘ನಿನಾದ’ ಬೀರಿದ ರಾಜಕಾರಣಿ ಮಧುಸೂಧನ್’ಗೆ ಅರಸಿ ಬಂದ ‘ಆರಾಧನಾ’

ಬಿಜೆಪಿ, ಆರ್’ಎಸ್’ಎಸ್ ಗರಡಿಯ ನಗುಮೊಗದ ಶ್ರಮಜೀವಿಯ ಬದುಕಿನಲ್ಲಿ ಮತ್ತೊಂದು ಮೈಲಿಗಲ್ಲು, ತಾಲ್ಲೂಕು ಆರಾಧನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆ

kalpa News by kalpa News
July 23, 2020
in Special Articles, ಶಿವಮೊಗ್ಗ
0
ಶ್ರೀಗಂಧದ ಕಂಪಿನೊಟ್ಟಿಗೆ ‘ನಿನಾದ’ ಬೀರಿದ ರಾಜಕಾರಣಿ ಮಧುಸೂಧನ್’ಗೆ ಅರಸಿ ಬಂದ ‘ಆರಾಧನಾ’
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹೌದು… ಅವರು ಜಿಲ್ಲಾ ಬಿಜೆಪಿಯಲ್ಲಿನ ನಗುಮೊಗದ ವ್ಯಕ್ತಿ. ಎಲ್ಲರನ್ನೂ ಅಣ್ಣಾ ಎಂದು ಆತ್ಮೀಯತೆಯಿಂದ ಸಂಬೋಧಿಸುತ್ತಾ, ಸಮಷ್ಠಿ ಪ್ರಜ್ಞೆ ಸಂಘಟನೆಯ ಚಾಣಾಕ್ಷ ವ್ಯಕ್ತಿತ್ವದ ಬಿ.ಆರ್. ಮಧುಸೂಧನ್. ಬಹುಷಃ ‘ಬಿಜೆಪಿ ಮಧು’ ಎಂದರೆ ತತಕ್ಷಣ ಸ್ಮೃತಿಪಟಲ ಜಾಗೃತವಾಗಬಹುದು.

ಇಂತಹ ವ್ಯಕ್ತಿಯನ್ನು ಈಗ ಶಿವಮೊಗ್ಗದ ಮಟ್ಟಿಗೆ ಒಂದು ಜವಾಬ್ದಾರಿ ತಾನಾಗಿಯೇ ಅರಸಿ ಬಂದಿದೆ. ಅದೇ, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಅಧ್ಯಕ್ಷ ಸ್ಥಾನ.

ವಾಸ್ತವವಾಗಿ ಈ ಸಮಿತಿಗೆ ಶಾಸಕರು ಅಧ್ಯಕ್ಷರಾಗಿರಬೇಕು. ಆದರೆ, ಶಿವಮೊಗ್ಗ ಶಾಸಕ ಶ್ರೀ ಕೆ.ಎಸ್. ಈಶ್ವರಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರೂ ಸಹ ಆಗಿರುವುದರಿಂದ ತಮ್ಮ ಈ ಸ್ಥಾನವನ್ನು ಮಧುಸೂಧನ್ ಅವರಿಗೆ ವಹಿಸುವಂತೆ ಶಿಫಾರಸ್ಸು ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮಧು ಅವರನ್ನು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಮಧು ಕುರಿತಾಗಿನ ಪರಿಚಯ:
ಮೂಲತಃ ಹಾಲಿ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ಸ್ವಕ್ಷೇತ್ರ ಶಿಕಾರಿಪುರದ ಮಧುಸೂಧನ್ ಅವರ ತಂದೆ ದಿ.ಬಿ. ರಾಮು. ಇವರು ಓದಿದ್ದು ಎಸ್’ಎಸ್’ಎಲ್’ಸಿ ಆದರೂ ಶಿವಮೊಗ್ಗದ ಬಹಳಷ್ಟು ಕ್ಷೇತ್ರಗಳಲ್ಲಿ ಇವರ ಸಾಧನೆ ಹಾಗೂ ಸೇವೆ ಇವರ ಸಾಮರ್ಥ್ಯವನ್ನು ಬಿಂಬಿಸುತ್ತದೆ.
ಬಾಲ್ಯದಿಂದಲೂ ಬಡತನವನ್ನೇ ಕಂಡ ಇವರ ಮೊಗದಲ್ಲಿ ನಗು ಎಂಬುದು ಮಾತ್ರ ಎಂದಿಗೂ ಬತ್ತಿಲ್ಲ. ತಮ್ಮ ಬಾಲ್ಯದ ಕಷ್ಟದ ದಿನಗಳಲ್ಲಿ ಬೆಂಗಳೂರಿನಲ್ಲಿ ಹೊಟೇಲ್ ಕಾರ್ಮಿಕನಾಗಿ ಜೀವನ ಸಾಗಿಸಿದ ಮಧು, ಲಾಟರಿ ಮಾರಾಟ, ಪುಸ್ತಕ-ಪತ್ರಿಕೆ-ಕ್ಯಾಸೆಟ್ ಮಾರಾಟ ಮಾಡುತ್ತಾ ಬದುಕಿನ ಬಂಡಿ ಸಾಗಿಸುತ್ತಾ ಬದುಕು ಗೆದ್ದ ಶ್ರಮಜೀವಿ.

ಶಿವಮೊಗ್ಗದಲ್ಲಿ ಇವರ ಆರಂಭದ ದಿನಗಳಿಂದಲೂ ಇಂದಿನ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೆ.ಎಸ್. ಈಶ್ವರಪ್ಪ ಅವರ ಕುಟುಂಬದ ಆಪ್ತರು. ಒಂದು ಹಂತದಲ್ಲಿ ಈಶ್ವರಪ್ಪನವರೇ ಇವರ ಕೈ ಹಿಡಿದು ನಡೆಸಿದ ಕಾರಣ, ವಿಶ್ವಂಭರ ಏಜೆನ್ಸೀಸ್ ಎಂಬ ತಂಪು ಪಾನೀಯಗಳ ವಿತರಕರಾದರು.

ಆನಂತರದ ದಿನಗಳಲ್ಲಿ, 1989ರಲ್ಲಿ ದಿವಂಗತ ಶ್ರೀ ಹಿರಿಯೂರು ಕೃಷ್ಣಮೂರ್ತಿಗಳ ಮಾರ್ಗದರ್ಶನದಿಂದ ಸಂಘಟನೆಯ ವಿವಿಧ ಮಜಲುಗಳನ್ನು ಕಂಡರು. ಬಿಜೆಪಿಯಲ್ಲಿ ಬೂತ್ ಅಧ್ಯಕ್ಷರಾಗಿದ್ದ ಮಧುಸೂಧನ್ ಅವರು, ಆನಂತರ ವಾರ್ಡ್ ಅಧ್ಯಕ್ಷರು, ಶಕ್ತಿಕೇಂದ್ರದ ಅಧ್ಯಕ್ಷರು, ನಗರ ಮಾಧ್ಯಮ ಪ್ರಮುಖ 3 ಅವಧಿಗೆ, ಜಿಲ್ಲಾ ಮಾಧ್ಯಮ ಪ್ರಮುಖ 3 ಅವಧಿಗೆ, ಸಾಂಸ್ಕೃತಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕ, ಧ್ಯೇಯ ಕಮಲದ ಜಿಲ್ಲಾ ಸಂಚಾಲಕ, ಅಲ್ಪ ಸಂಖ್ಯಾತ ಮೋರ್ಚಾದ ಜಿಲ್ಲಾ ಪ್ರಭಾರಿ 2 ಅವಧಿಗೆ, ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ಅನುಭವ ಹೊಂದಿದ್ದು, ಸದ್ಯ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಂತ ಹಂತವಾಗಿ ತಮ್ಮ ವ್ಯಕ್ತಿತ್ವವನ್ನು ವೃದ್ಧಿಸಿಕೊಳ್ಳುತ್ತಲೇ, ಪಕ್ಷ ಹಾಗೂ ಸಮಾಜಕ್ಕೆ ತಮ್ಮ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ.

ಮಧು ಅವರು ಪಕ್ಷದಲ್ಲಿ ವಿವಿಧ ಜವಾಬ್ದಾರಿಯಲ್ಲಿದ್ದ ವೇಳೆ ಜಿಲ್ಲೆಯಲ್ಲಿ ನಡೆದ ಲೋಕಸಭೆ, ವಿಧಾನಸಭೆ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ದೊರೆತ ವಿಜಯದಲ್ಲಿ ಇವರ ಕಾರ್ಯಕ್ಷಮತೆಯ ಛಾಪು ಇದೆ.

ಪ್ರಮುಖವಾಗಿ, ಇಂದಿನ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಸಚಿವ ಕೆ.ಎಸ್. ಈಶ್ವರಪ್ಪ, ಡಿ.ಎಚ್. ಶಂಕರಮೂರ್ತಿ ಅವರಂತಹ ಹಿರಿಯರ ಮಾರ್ಗದರ್ಶನದ ಗರಡಿಯಲ್ಲಿ ಪಳಗಿದ ಮಧು ಬಿಜೆಪಿಯ ಒಬ್ಬ ನಿಷ್ಠಾವಂತ ಕಾರ್ಯಕರ್ತರಾಗಿಯೇ ವ್ಯಕ್ತಿತ್ವ ವೃದ್ಧಿಸಿಕೊಂಡವರು ಎಂಬುದು ಪಕ್ಷದಲ್ಲಿ ಮಾತ್ರವಲ್ಲ ಸಾರ್ವಜನಿಕ ವಲಯದಲ್ಲೂ ಜನಜನಿತವಾಗಿದೆ. ಇದರೊಟ್ಟಿಗೆ, ಸಂಘ ಪರಿವಾರದ ಮಾರ್ಗದರ್ಶನವೂ ಸಹ ಇವರ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿದೆ. ಸಂಘಟನೆಯ ಸೂಚನೆಯನ್ನು ಎಂದಿಗೂ ಮೀರದೇ, ಯಾವುದೇ ಜವಾಬ್ದಾರಿ ದೊರೆತರೂ ಅದನ್ನು ಸಮರ್ಥವಾಗಿ ನಿರ್ವಹಿಸಿ, ದೊಡ್ಡವರಿಂದಲೂ ಸೈ ಎನಿಸಿಕೊಂಡವರು ಮಧು.

ಸಾಂಸ್ಕೃತಿಕ ಹಾಗೂ ಸಾಮಾಜಿಕ ಸಾಧನೆಗಳು:


ಮಲೆನಾಡಿನ ಸಾಂಸ್ಕೃತಿಕತೆ ಹೆಬ್ಬಾಗಿಲಾಗಿರುವ ಶಿವಮೊಗ್ಗದ ನೆಲೆಯಲ್ಲಿ ಮಧುಸೂಧನ್ ಬೀರಿದ ಕಂಪು ಹೆಜ್ಜೆ ಹೆಜ್ಜೆಯಲ್ಲಿಯೂ ಇದೆ. ಹವ್ಯಾಸಿ ಪತ್ರಕರ್ತರಾದ ಮಧುಸೂಧನ್, ಸಮಾಜ ಸೇವೆ, ಸಾಂಸ್ಕೃತಿಕ ರಂಗದಲ್ಲಿ ಕ್ರಿಯಾಶೀಲರಾಗಿದ್ದು, ಶಿವಮೊಗ್ಗದ ಪ್ರತಿಷ್ಠಿತ ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆಯ ಸಂಚಾಲಕರಾಗಿದ್ದಾರೆ. ಅಲ್ಲದೇ, ನಿನಾದ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರು, ಸಂಗಮ ಕಲಾಕ್ಷೇತ್ರದ ಸ್ಥಾಪಕ ಸಂಚಾಲಕರೂ ಆಗಿರುವ ಇವರು, ಶಿವಮೊಗ್ಗದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರೂ ಹಾಗೂ ಟಿಎಸಿ ಸದಸ್ಯರೂ ಸಹ ಆಗಿ ಕಾರ್ಯನಿರ್ವಹಿಸಿದ ಅನುಭವವುಳ್ಳವರು.

ನಾಡಿನ ಪ್ರಖ್ಯಾತ ವಿದ್ವಾಂಸರು, ಉಪನ್ಯಾಸಕರು, ಕಲಾರಾಧಕರನ್ನು ಶ್ರೀಗಂಧದ ವೇದಿಕೆಗೆ ಕರೆತಂದು ವಿಭಿನ್ನ ಕಾರ್ಯಕ್ರಮಗಳನ್ನು ಸಿಹಿಮೊಗೆಯ ಕಲಾರಸಿಕರಿಗೆ ಉಣಬಡಿಸಿದ ಕೀರ್ತಿ ಇವರದ್ದು.

ನಾಡಿನ ಪ್ರಸಿದ್ಧ ಗಾಯಕರು, ಸಂಗೀತ ತಜ್ಞರು, ಶ್ರೇಷ್ಠ ಕಲಾವಿದರು, ಖ್ಯಾತ ಸಾಹಿತಿಗಳೊಂದಿಗೆ ಒಡನಾಟ ಹೊಂದಿರುವ ಮಧು, ಹಿನ್ನೆಲೆ ಗಾಯಕ, ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ರಮೇಶ್ ಚಂದ್ರ ಅವರ ಸಾರಥ್ಯದಲ್ಲಿ ಸಂಗಮ ಕಲಾಕ್ಷೇತ್ರವನ್ನು ಜಿಲ್ಲೆಯಲ್ಲಿ ಸ್ಥಾಪಿಸಿ, ಉದಯೋನ್ಮುಖ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ನಿರ್ಮಿಸಿದ್ದಾರೆ.

ನಿನಾದ ಸಾಂಸ್ಕೃತಿಕ ಸಂಸ್ಥೆ


ನಗರದ ಸಾಂಸ್ಕೃತಿಕ ಕಲಾ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸಂಸ್ಥೆ ನಿನಾದ. ಕಳೆದ 12 ವರ್ಷಗಳಿಂದ ಈ ಸಂಸ್ಥೆ ಮುಖೇನ ಬಹಳಷ್ಟು ವೈವಿಧ್ಯಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿ, ಇಡಿಯ ರಾಜ್ಯದಲ್ಲೇ ಹೆಸರುವಾಸಿಯಾಗಿದೆ. ಈ ಸಂಸ್ಥೆ ಮೂಲಕ ನಾಡಿನ ಶ್ರೇಷ್ಠ ವಾಗ್ಮಿಗಳನ್ನು, ಆಧ್ಯಾತ್ಮ ಲೋಕದ ಚಿಂತಕರು, ಉಪನ್ಯಾಸಕರು, ವಿದ್ವಾಂಸರುಗಳನ್ನು ಪರಿಚಯಿಸುವ ಕಾರ್ಯವನ್ನು ಮಾಡುತ್ತಿದೆ. ಮತ್ತೆ ಇದರ ಯಶಸ್ಸಿನ ಹಿಂದಿರುವ ಶಕ್ತಿ ಮಧುಸೂಧನ್ ಅವರೇ.

ಸಾಮಾಜಿಕ ಕಳಕಳಿಗೆ ಮಿಡಿದ ಮನ
ಮಧುಸೂಧನ್ ಅವರ ಕುರಿತಾಗಿ ಹೇಳುವಾಗ ಈ ವಿಚಾರವನ್ನು ಪ್ರಸ್ತಾಪಿಸಲೇಬೇಕು. ತಮ್ಮ ವ್ಯಕ್ತಿಗತ ಸ್ವಭಾವದಲ್ಲಿಯೇ ಇವರಿಗೆ ಸಾಮಾಜಿಕ ಕಳಕಳಿ ಎಂಬುದು ಮಿಳಿತವಾಗಿದೆ. ನಂದ ಗೋಕುಲ ಗೋಶಾಲೆ, ಬಡವಿದ್ಯಾರ್ಥಿ ದತ್ತು ಯೋಜನೆ, ನಿರಾಶ್ರಿತರ ಆರೋಗ್ಯ ತಪಾಸಣಾ ಶಿಬಿರಗಳು, ರಕ್ತದಾನ, ಸ್ವಚ್ಛತಾ ಕಾರ್ಯಕ್ರಮಗಳು ಸೇರಿದಂತೆ ಬಹಳಷ್ಟು ಆಯಾಮದಲ್ಲಿ ಸೇವೆ ಸಲ್ಲಿಸಿದ್ದಾರೆ.

ಇಂತಿಪ್ಪ, ರಾಜಕೀಯ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇಂದು ತಮ್ಮ ಅನಿವಾರ್ಯತೆಯನ್ನು ಸೃಷ್ಠಿಸಿರುವ ಮಧುಸೂಧನ್ ಅವರನ್ನು ಈಗ ಇಂತಹುದ್ದೇ ಗೌರವ ಅರಸಿ ಬಂದಿರುವುದು ಶಿವಮೊಗ್ಗದ ಸುಯೋಗವೇ ಸರಿ. ತಮಗೆ ದೊರೆತ ಈ ಅವಕಾಶವನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿ, ಮಲೆನಾಡಿನ ಸಾಂಸ್ಕೃತಿಕ ನಗರಿಗೆ ಇನ್ನಷ್ಟು ಕೊಡುಗೆ ಸಲ್ಲಿಸಲು ಇವರಿಗೆ ಭಗವಂತ ಹಾಗೂ ಗುರುಗಳ ಅನುಗ್ರಹ ಸದಾ ಇರಲಿ.

ತಮ್ಮ ಶ್ರಮ ಹಾಗೂ ಸಂಘಟನಾತ್ಮಕ ಶಕ್ತಿಯಿಂದಲೇ ಹಂತ ಹಂತವಾಗಿ ಬೆಳೆಯುತ್ತಿರುವ ಮಧುಸೂಧನ್ ಅವರಿಗೆ ದೊರೆತ ಈ ನೂತನ ಗೌರವಕ್ಕಾಗಿ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮನದುಂಬಿ ಅಭಿನಂದಿಸುತ್ತದೆ. ಹಾಗೆಯೇ, ಮುಂದಿನ ನಿಮ್ಮೆಲ್ಲಾ ಹೆಜ್ಜೆಗಳೊಂದಿಗೆ ನಾವೂ ಸಹ ಜೊತೆಗೂಡುತ್ತೇವೆ.

-ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

Get In Touch With Us info@kalpa.news Whatsapp: 9481252093

Tags: Aradhana CommitteeKalpa News Digital MediaKannada News WebsiteLatest News KannadaMalnad NewsNinadaShivamoggaSriGandha Shivamoggaಆರಾಧನಾ ಸಮಿತಿನಿನಾದ ಸಾಂಸ್ಕೃತಿಕ ಸಂಸ್ಥೆಬಿ.ಆರ್. ಮಧುಸೂಧನ್ಬಿಜೆಪಿರಾಜಕೀಯಶಿವಮೊಗ್ಗಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ
Share211Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಳೇ ಶಿವಮೊಗ್ಗ ಭಾಗದ ಸೀಲ್ ಡೌನ್ ತೆಗೆಯುವಂತೆ ಸ್ಥಳೀಯರ ಆಗ್ರಹ

Next Post

D S Arun, President of Arya Vaishya Nigama car met with an accident

kalpa News

kalpa News

Next Post
ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ಕಾರು ಅಪಘಾತ: ಅದೃಷ್ಟವಶಾತ್ ಪಾರು

D S Arun, President of Arya Vaishya Nigama car met with an accident

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL