ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದ.ಕ ಜಿಲ್ಲೆಯ ಸುಳ್ಯ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು Praveen Nettaru Murder ಅವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿ ಜಿಲ್ಲಾ ಬಿಜೆಪಿ ಮುಖಂಡರು ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್. ಎನ್. ಚನ್ನಬಸಪ್ಪ ಮಾತನಾಡಿ, ಮುಸಲ್ಮಾನ ಗೂಂಡಾಗಳಿಂದ ಹತ್ಯೆಗೀಡಾದ ಪ್ರವೀಣ್ ಬಗ್ಗೆ ಏನು ಮಾತನಾಡೋದು ಎಂದು ತಿಳಿಯುತ್ತಿಲ್ಲ ಎಂದು ಭಾವುಕರಾದರು.
ಪೊಲೀಸ್ ಇಲಾಖೆಗೆ ಹಿಂದೂಗಳ ರಕ್ಷಣೆ ಮಾಡಲು ಆಗದಿದ್ದರೆ ಬಿಡಲಿ, ಹಿಂದೂಗಳ ರಕ್ಷಣೆ ಮಾಡಲು ನಮಗೆ ಗೊತ್ತಿದೆ. ಸರ್ಕಾರ ಹತ್ಯೆ ಬಗ್ಗೆ ರಿಪೋರ್ಟ್ ಕೇಳುತ್ತದೆ. ಶ್ರದ್ಧಾಂಜಲಿ ಸಲ್ಲ್ಲಿಸಲು ಎಷ್ಟು ಜನ ಸೇರಿದ್ದಾರೆ ಎಂಬ ಮಾಹಿತಿ ಪಡೆಯುತ್ತದೆ ಬಿಟ್ಟರೆ ಏನೂ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಹಿಂದೂ ಯುವಕರ ಕೈಗೆ ತಲವಾರು ಕೊಡಲಿ, ನಮ್ಮ ರಕ್ಷಣೆಯನ್ನು ನಾವು ಮಾಡಿಕೊಳ್ಳುತ್ತೇವೆ ಎಂದು ಭಾಷಣವನ್ನು ಮೊಟಕುಗೊಳಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡ ಭಾನು ಪ್ರಕಾಶ್, ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಮಾಜಿ ಜಿಪಂ ಸದಸ್ಯ ಕೆ.ಈ. ಕಾಂತೇಶ್, ಬಿಜೆಪಿ ನಗರ ಅಧ್ಯಕ್ಷ ಜಗದೀಶ್, ಪ್ರಧಾನ ಕಾರ್ಯದರ್ಶಿ ಮೋಹನ್ ರೆಡ್ಡಿ, ಸಂತೋಷ್ ಬಳ್ಳೇಕೆರೆ, ಎಸ್. ದತ್ತಾತ್ರಿ, ಪಾಲಿಕೆ ಸದಸ್ಯ ಪ್ರಭು, ರಮೇಶ್ (ರಾಮು), ಜಿಲ್ಲಾ ಕಾರ್ಯದರ್ಶಿ ಹೃಶಿಕೇಶ್ ಪೈ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಎಂ.ಬಿ. ಹರಿಕೃಷ್ಣ, ನಗರ ಪ್ರದಾನ ಕಾರ್ಯದರ್ಶಿ ಸಂತೋಷ್ ಬಳ್ಳೆಕೆರೆ, ನಗರ ಯುವ ಮೋರ್ಚಾ ಅಧ್ಯಕ್ಷ ಆರ್.ವಿ. ದರ್ಶನ್, ಪಾಲಿಕೆ ಉಪಮೇಯರ್ ಶಂಕರ್, ಪಾಲಿಕೆ ಸದಸ್ಯರುಗಳು, ಯುವಮೋರ್ಚಾ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
Also read: ವೈಯಕ್ತಿಕ ಅಧಿಕಾರಕ್ಕಿಂತ ಹಿಂದೂ ಕಾರ್ಯಕರ್ತರ ರಕ್ಷಣೆಯೇ ಮುಖ್ಯ: ಶಾಸಕ ರೇಣುಕಾಚಾರ್ಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post