No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Monday, May 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮೋದಿ ಮತ್ತೆ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ನಗರದಲ್ಲಿ 2 ದಿನ ಅತಿರುದ್ರ ಮಹಾಯಾಗ

ಮಾರ್ಚ್ 5 ಮತ್ತು 6 ರಂದು ಶಿವಮೊಗ್ಗ ವಿನೋಬನಗರ ಶಿವಾಲಯದಲ್ಲಿ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 2, 2024
in ಶಿವಮೊಗ್ಗ
0
ನಮೋ ಬಗ್ಗೆ ಹೇಳಲು ರಾಶಿ ರಾಶಿ ಇದೆ.
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಲೋಕಕಲ್ಯಾಣಾರ್ಥವಾಗಿ ಹಾಗೂ ನರೇಂದ್ರ ಮೋದಿ Narendra Modi ಅವರು ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ಮಾರ್ಚ್ 5 ಹಾಗೂ 6ರಂದು ಎರಡು ದಿನಗಳ ಕಾಲ ನಗರದಲ್ಲಿ ಅತಿರುದ್ರ ಮಹಾಯಾಗವನ್ನು ಆಯೋಜಿಸಲಗಿದೆ.

ಅತಿರುದ್ರ ಮಹಾಯಾಗ ಸಂಚಾಲನಾ ಸಮಿತಿ ಹಾಗೂ ಭಕ್ತ ವೃಂದದ ವತಿಯಿಂದ ಅತಿರುದ್ರ ಮಹಾಯಾಗವನ್ನು ವಿನೋಬನಗರ ಶಿವಾಲಯ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದೆ.
ಏನೆಲ್ಲಾ ಕಾರ್ಯಕ್ರಮ ಆಯೋಜಿಸಲಾಗಿದೆ?

ಮಾರ್ಚ್ 5 ರಂದು ಮಂಗಳವಾರ ಬೆಳಗ್ಗೆ 8 ಗಂಟೆಗೆ ಮಹಾಸಂಕಲ್ಪದೊAದಿಗೆ ಗಂಗಾಪೂಜೆ, ಗಣಪತಿ,ನಾಂದಿ,ಪುಣ್ಯಾಹ, ಉಮಾಮಹೇಶ್ವರ, ಪಂಚಬ್ರಹ್ಮ ಕಲಶ, ಏಕದಶ ರುದ್ರ ಕಲಶಾರಾಧನೆ, ನವಗ್ರಹ ಹಾಗೂ ಪೂಜಾದಿಗಳು ಪ್ರಾರಂಭವಾಗಲಿವೆ. ಬೆಳಗ್ಗೆ 10 ಗಂಟೆಗೆ ಶ್ರೀ ಅತಿರುದ್ರ ಮಹಾಯಾಗ, ಶಿವಾಗ್ನಿ ಪ್ರತಿಷ್ಠೆ ನಡೆಯಲಿದ್ದು, ಅಂದು ಸಂಜೆ 4 ಗಂಟೆಗೆ ಉತ್ತರಾರ್ಧ ಪೂಜೆ ಆರಂಭಗೊಳ್ಳಲಿದೆ.

ಶಿವಮೊಗ್ಗ ಜಿಲ್ಲಾ ವೀರಶೈವ ಜಂಗಮ ಅರ್ಚಕ ಪುರೋಹಿತರ ಕ್ಷೇಮಾಭಿವೃದ್ಧಿ ಸಂಘದ ತಂಡವು 121 ಪುರೋಹಿತರೊಂದಿಗೆ ಅತಿರುದ್ರ ಮಹಾಯಾಗವನ್ನು ನಡೆಸಿಕೊಡಲಿದೆ. ಬಿಳಕಿ ಹಿರೇಮಠದ ಶ್ರೀ ಷ.ಬ್ರ.ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ತಾವರೆಕೆರೆ ಶಿಲಾಮಠದ ಶ್ರೀ ಅಭಿನವ ಸಿದ್ದಲಿಂಗೇಶ್ವರ ಶಿವಚಾರ್ಯ ಸ್ವಾಮೀಜಿ, ಕವಲೆದುರ್ಗ ಮಠದ ಶ್ರೀ ರಾಜಗುರು ಮರುಳಸಿದ್ಧ ಶಿವಾಚಾರ್ಯ ಸ್ವಾಮೀಜಿ ಸಮ್ಮುಖದಲ್ಲಿ ಮಹಾಯಾಗವು ನೆರವೇರಲಿದೆ.
6 ರಂದು ಬೆಳಗ್ಗೆ 11.30 ಕ್ಕೆ ನಡೆಯಲಿರುವ ಧರ್ಮಸಭೆಯ ದಿವ್ಯ ಸಾನ್ನಿಧ್ಯವನ್ನು ಶ್ರೀ ಉಜ್ಜಯನಿ ಸದ್ಧರ್ಮ ಸಿಂಹಾಸನ ಮಹಾಸಂಸ್ಥಾನ ಪೀಠದ ಶ್ರೀ 1008 ಜಗದ್ಗುರು ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮೀಜಿ ಹಾಗೂ ಆನಂದಪುರ ಬೆಕ್ಕಿನಕಲ್ಮಠದ ಶ್ರೀ ಮನ್ಮಹಾರಾಜ ನಿರಂಜನ ಜಗ್ದದ್ಗುರು ಡಾ. ಶ್ರೀ ಮಲ್ಲಿಕಾರ್ಜುನ ಮರುಘರಾಜೇಂದ್ರ ಮಹಾ ಸ್ವಾಮಿಗಳು ವಹಿಸುವರು.

Also read: ಮಾರ್ಚ್ 3: ಶಿವಮೊಗ್ಗದಲ್ಲಿ `ಜಲಪಾತ’ ಚಲನಚಿತ್ರ ಉಚಿತ ವೀಕ್ಷಣೆ | ಇಲ್ಲಿದೆ ಮಾಹಿತಿ

ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ B S Yadiyurappa ಅವರ ಗೌರವ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್. ಈಶ್ವರಪ್ಪ ವಹಿಸುವರು. ವಿಶೇಷ ಹ್ವಾನಿತರಾಗಿ ಸುಪ್ರೀಂಕೋರ್ಟ್ ವಕೀಲರು ಹಾಗೂ ಭಾರತದ ವಿದೇಶಾಂಗ ವ್ಯವಹಾರಗಳ ಮತ್ತು ಸಂಸ್ಕೃತಿ ಇಲಾಖೆಯ ರಾಜ್ಯ ಸಚಿವರಾದ ಮೀನಾಕ್ಷಿ ಲೇಖಿ ಭಾಗವಹಿಸುವರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ, B Y Vijayendra ಸಂಸದರಾದ ಬಿ.ವೈ. ರಾಘವೇಂದ್ರ, MP Raghavendra ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ್ರು, ಡಿ.ಎಸ್. ಅರುಣ್, ವಿಧಾನ ಪರಿಷತ್ ಸದಸ್ಯರಾದ ಭಾರತಿಶೆಟ್ಟಿ ಭಾಗವಹಿಸುವರು.

ಧರ್ಮೋ ವಿಶ್ವಸ್ಯ ಜಗತಃ ಪ್ರತಿಷ್ಠಾ ಎಂಬಂತೆ ಧರ್ಮವೇ ವಿಶ್ವದ ಅಸ್ತಿತ್ವಕ್ಕೆ ಕಾರಣವಾಗಿರುವುದರಿಂದ ನಮ್ಮ ಸನಾತನ ಪರಂಪರೆಯಲ್ಲಿ ಧರ್ಮ ರಕ್ಷಣೆಗೆ ಮಹತ್ವವನ್ನು ನೀಡಿದ್ದಾರೆ. ಧರ್ಮವನ್ನು ನಾವು ರಕ್ಷಣೆ ಮಾಡಿದರೆ ಧರ್ಮ ನಮ್ಮನ್ನು ರಕ್ಷಣೆ ಮಾಡುತ್ತದೆ. ಧರ್ಮ ರಕ್ಷಣೆ ಎಂದರೆ ಧರ್ಮಾಚರಣೆ ಮಾಡುವುದು ಎಂದರ್ಥ.

ಲೋಕಕಲ್ಯಾಣಾರ್ಥವಾಗಿ ಭಗವಂತನ ಆರಾಧನೆ ಮಾಡುವುದರಿಂದ ಲೋಕಕ್ಕೆ ಒಳಿತಾಗುತ್ತದೆ. ಆ ಉದ್ದೇಶದಿಂದ ಕ್ಷೇತ್ರಗಳಲ್ಲಿ ಲೋಕಕಲ್ಯಾಣಾರ್ಥವಾಗಿ, ಭಗವಂತನ ಪ್ರೀತ್ಯರ್ಥವಾಗಿ ಧರ್ಮ ಕಾರ್ಯಗಳು ಜರುಗುತ್ತವೆ. ಭಗವಂತನ ಆರಾಧನೆಯಲ್ಲಿ ರುದ್ರಾರಾಧನೆಗೆ ವಿಶೇಷವಾದ ಮಹತ್ವವನ್ನು ನೀಡಿದ್ದಾರೆ. ಏಕೆಂದರೆ ರುಜಂ ದ್ರಾವಯತೀತಿ ರುದ್ರಃ ಎಂಬಂತೆ ಮನುಷ್ಯನ ಕಷ್ಟ ಕಾರ್ಪಣ್ಯಗಳನ್ನು ಹಾಗೂ ಮನುಷ್ಯನ ದೇಹದಲ್ಲಿರುವ ರೋಗವು ರುದ್ರಾರಾಧನೆಯಿಂದ ಶಮನವಾಗುತ್ತದೆ ಎಂಬುದು ನಂಬಿಕೆ. ಅಭಿಷೇಕ ಪ್ರಿಯೋ ಶಿವಃ ಎನ್ನುವಂತೆ ಈಶ್ವರನು ಅಭಿಷೇಕ ಪ್ರಿಯನು. ರುದ್ರನಿಗೆ ಅಭಿಷೇಕ ಮಾಡುವುದರಿಂದ ಈಶ್ವರನು ಸಂತುಷ್ಟನಾಗಿ ಭಕ್ತರ ಸಂಕಷ್ಟಗಳನ್ನು ದೂರ ಮಾಡಿ ಇಷ್ಟಾರ್ಥಗಳನ್ನು ಪೂರೈಸುವಲ್ಲಿ ಸಂಶಯವೇ ಇಲ್ಲ.
Kalahamsa Infotech private limitedವೇದೋಕ್ತವಾದ ನಮಕ(ರುದ್ರ)ದಿಂದ ಅಭಿಷೇಕ ಮಾಡುವುದು ಅತ್ಯಂತ ಶ್ರೇಷ್ಠವಾದದ್ದು. ಭಕ್ತಿ, ಶ್ರದ್ಧೆಯಿಂದ ಒಂದು ಬಾರಿ ರುದ್ರಾಭಿಷೇಕ ಮಾಡಿದರೆ ಸಕೃತಾವರ್ತನ ರುದ್ರಾಭಿಷೇಕ, 11 ಬಾರಿ ಮಾಡಿದರೆ ಏಕಾದಶಾವರ್ತನ ರುದ್ರಾಭಿಷೇಕ, 121 ಬಾರಿ ಮಾಡಿದರೆ ಲಘು(ಶತ) ರುದ್ರಾಭಿಷೇಕ, 1331 ಬಾರಿ ಮಾಡಿದರೆ ಮಹಾರುದ್ರಾಭಿಷೇಕ ಮತ್ತು 14641 ಬಾರಿ ಮಾಡಿದರೆ ಅತಿರುದ್ರಾಭಿಷೇಕವಾಗುವುದು. ಹೀಗೆ ಏಕೋತ್ತರ ವೃದ್ಧಿಯಲ್ಲಿ ಅಭಿಷೇಕ ಮಾಡಿದರೆ ಅಥವಾ ಮಾಡಿಸಿದರೆ ರುದ್ರನು ಪ್ರೀತನಾಗಿ ಸಮಸ್ತ ಲೋಕಕ್ಕೆ ಕಲ್ಯಾಣವನ್ನುಂಟು ಮಾಡುತ್ತಾನೆ. ಅಲ್ಲದೇ ಶ್ರುತಂ ಹರತಿ ಪಾಪಾನಿ ಎನ್ನುವ ಹಾಗೆ ರುದ್ರವನ್ನು ಶ್ರವಣ ಮಾಡುವುದರಿಂದ ನಮ್ಮ ಪಾಪಗಳು ದೂರವಾಗುತ್ತವೆ. ಆ ಉದ್ದೇಶದಿಂದ ಲೋಕಕಲ್ಯಾಣಾರ್ಥವಾಗಿ ಮಹಾಯಾಗವನ್ನು ಹಮ್ಮಿಕೊಳ್ಳಲಾಗಿದೆ.

ಲೋಕ ಕಲ್ಯಾಣಾರ್ಥವಾಗಿ ಹಮ್ಮಿಕೊಂಡಿರುವ ಅತಿರುದ್ರ ಮಹಾಯಾಗವನ್ನು ಎಲ್ಲರೂ ಒಂದಾಗಿ ಯಶಸ್ವಿಯಾಗಿ ನಡೆಸೋಣ, ಹಾಗೆಯೇ ಸಂಸದ ರಾಘಣ್ಣ ಅವರು ಮುಂಬರುವ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವನ್ನು ಸಾಧಿಸಿ, ಕೇಂದ್ರದ ಮಂತ್ರಿಯಾಗಲಿ ಎಂದು ಪ್ರಾರ್ಥಿಸೋಣ ಎಂದಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ಗೌರವಾಧ್ಯಕ್ಷರು ಎನ್.ಜೆ. ರಾಜಶೇಖರ್ (ಸುಭಾಷ್), ಸಮಿತಿಯ ಅಧ್ಯಕ್ಷರಾದ ಎಸ್.ಎಸ್. ಜ್ಯೋತಿಪ್ರಕಾಶ್, ಉಪಾಧ್ಯಕ್ಷರಾದ ಎಚ್.ವಿ. ಮಹೇಶ್ವರಪ್ಪ, ಎಸ್.ದತ್ತಾತ್ರಿ, ಜ್ಞಾನೇಶ್ವರ್, ಜಿಲ್ಲಾ ವೀರಶೈವ ಜಂಗಮ ಅರ್ಚಕ ಪುರೋಹಿತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಎಚ್. ಮಲ್ಲಿಕಾರ್ಜುನ ಸ್ವಾಮಿ, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಡಾ.ಧನಂಜಯ ಸರ್ಜಿ, ಸಹ ಸಂಚಾಲಕರಾದ ಮಹಾಲಿಂಗಯ್ಯ ಶಾಸ್ತಿç, ನಾಗಯ್ಯ ಶಾಸ್ತಿçಗಳು, ಮಹಾನಗರ ಪಾಲಿಕೆ ಸದಸ್ಯ ವಿಶ್ವಾಸ್, ಅನಿತಾ ರವಿಶಂಕರ್, ಮೋಹನ್ ರೆಡ್ಡಿ ಮತ್ತಿತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0026.mp4

 

Tags: B Y VijayendraKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsMP RaghavendraNews in KannadaNews KannadaS YadiyurappaShimogaShivamogga Newsಬಿ.ಎಸ್. ಯಡಿಯೂರಪ್ಪಬಿ.ವೈ. ವಿಜಯೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share221Tweet123Send
Previous Post

ಮಾರ್ಚ್ 3: ಶಿವಮೊಗ್ಗದಲ್ಲಿ `ಜಲಪಾತ’ ಚಲನಚಿತ್ರ ಉಚಿತ ವೀಕ್ಷಣೆ | ಇಲ್ಲಿದೆ ಮಾಹಿತಿ

Next Post

ರಾಮೇಶ್ವರಂ ಕೆಫೆ-ಮಂಗಳೂರು ಕುಕ್ಕರ್ ಬ್ಲಾಸ್ಟ್’ಗೆ ಸಾಮ್ಯತೆ? ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಮೇಶ್ವರಂ ಕೆಫೆ-ಮಂಗಳೂರು ಕುಕ್ಕರ್ ಬ್ಲಾಸ್ಟ್’ಗೆ ಸಾಮ್ಯತೆ? ಸಿದ್ದರಾಮಯ್ಯ ಮಹತ್ವದ ಹೇಳಿಕೆ

ರಾಮೇಶ್ವರಂ ಕೆಫೆ-ಮಂಗಳೂರು ಕುಕ್ಕರ್ ಬ್ಲಾಸ್ಟ್'ಗೆ ಸಾಮ್ಯತೆ? ಸಿದ್ದರಾಮಯ್ಯ ಮಹತ್ವದ ಹೇಳಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
Kotak Mahindra Bank Announces Results

Kotak Mahindra Bank Announces Results

May 4, 2026
ಜಿಪಂ ಸಿಇಒ ಹೇಮಂತ್ ಕುಮಾರ್ ಅವರಿಗೆ ಕುವೆಂಪು ವಿವಿ ರಿಜಿಸ್ಟಾರ್ ಆಗಿ ಪ್ರಭಾರ ಜವಾಬ್ದಾರಿ

ಮೂವರಿಗೆ ಕುವೆಂಪು ವಿವಿ ಗೌರವ ಡಾಕ್ಟರೇಟ್ | ಹೆಸರು ಘೋಷಣೆ | ರಾಜ್ಯಪಾಲರ ಅನುಮೋದನೆ

May 4, 2026
ಶಿವಮೊಗ್ಗ | ಪ್ರತಿಷ್ಠಿತ ಕಟೀಲ್ ಅಶೋಕ್ ಪೈ ಕಾಲೇಜಿಗೆ ಮೂರು ರ‍್ಯಾಂಕ್ | ಹೆಮ್ಮೆಯ ವಿದ್ಯಾರ್ಥಿಗಳಿವರು

ಶಿವಮೊಗ್ಗ | ಪ್ರತಿಷ್ಠಿತ ಕಟೀಲ್ ಅಶೋಕ್ ಪೈ ಕಾಲೇಜಿಗೆ ಮೂರು ರ‍್ಯಾಂಕ್ | ಹೆಮ್ಮೆಯ ವಿದ್ಯಾರ್ಥಿಗಳಿವರು

May 4, 2026
ತಮಿಳುನಾಡು ಚುನಾವಣೆಗೆ | ಡಿಎಂಕೆ ಪಕ್ಷಕ್ಕೆ ಹಿನ್ನಡೆ | ಸನ್ ನೆಟ್ವರ್ಕ್ ಷೇರುಗಳ ಕುಸಿತ

ತಮಿಳುನಾಡು ಚುನಾವಣೆಗೆ | ಡಿಎಂಕೆ ಪಕ್ಷಕ್ಕೆ ಹಿನ್ನಡೆ | ಸನ್ ನೆಟ್ವರ್ಕ್ ಷೇರುಗಳ ಕುಸಿತ

May 4, 2026
ಶ್ಯಾಮಪ್ರಸಾದ್ ಮುಖರ್ಜಿ ಹಾಕಿದ ಭದ್ರ ಬುನಾದಿಯೇ 21 ರಾಜ್ಯಗಳ NDA ಆಡಳಿತ | MLC ಡಾ.ಸರ್ಜಿ

ಶ್ಯಾಮಪ್ರಸಾದ್ ಮುಖರ್ಜಿ ಹಾಕಿದ ಭದ್ರ ಬುನಾದಿಯೇ 21 ರಾಜ್ಯಗಳ NDA ಆಡಳಿತ | MLC ಡಾ.ಸರ್ಜಿ

May 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL