No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Tuesday, July 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಏರ್‌ಪೋರ್ಟ್ ಲೋಕಾರ್ಪಣೆಗೆ ಭರದ ಸಿದ್ಧತೆ: ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಿಯಮಗಳೇನು?

ಜಿಲ್ಲಾಧಿಕಾರಿ, ಜಿಲ್ಲಾವರಿಷ್ಠಾಧಿಕಾರಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಡಿಸಿ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

kalpa News by kalpa News
February 24, 2023
in ಶಿವಮೊಗ್ಗ
0
ಏರ್‌ಪೋರ್ಟ್ ಲೋಕಾರ್ಪಣೆಗೆ ಭರದ ಸಿದ್ಧತೆ: ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಿಯಮಗಳೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು Airport ಫೆ.27ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು PM Narendra Modi ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ತಿಳಿಸಿದರು.

ಇಂದು ಸೋಗಾನೆಯ ವಿಮಾನ ನಿಲ್ದಾಣದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ವಿಮಾನ ನಿಲ್ದಾಣ ಮತ್ತು ಇತರೆ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮದ ಸಿದ್ದತೆ ಕುರಿತು ಮಾಹಿತಿ ನೀಡಿದರು.
ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಜಿಲ್ಲಾಡಳಿತವು ಸಾರ್ವಜನಿಕರನ್ನು ಸ್ವಾಗತಿಸುತ್ತಿದ್ದು, 1 ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 02 ಕಡೆ ಊಟದ ವ್ಯವಸ್ಥೆ ಇದ್ದು ಒಂದೊಂದು ಕಡೆ 100 ಕೌಂಟರ್‍ಗಳನ್ನು ತೆರೆಯಲಾಗುವುದು. ಕಾರ್ಯಕ್ರಮದ ವೀಕ್ಷಣೆಗೆ 04 ಕಡೆ ವಿಶಾಲವಾದ ಪ್ರಾಜೆಕ್ಟರ್‍ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಹಾಗೂ ಕಾರ್ಯಕ್ರಮಕ್ಕೆ ಅಗತ್ಯವಾದ ಎಲ್ಲ ಸಿದ್ದತೆಗಳೊಂದಿಗೆ ಸೂಕ್ತ ಪೊಲೀಸ್ ಬಂಧೋಬಸ್ತ್ ಮಾಡಲಾಗಿದೆ ಎಂದರು.

ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ವಿವರ:
ಒಟ್ಟು 775 ಎಕರೆ ವಿಸ್ತೀರ್ಣದಲ್ಲಿ ರೂ.449.22 ಕೋಟಿ ವೆಚ್ಚದಲ್ಲಿ  ಎಟಿಆರ್ 72 ರಿಂದ ಏರ್‍ಬಸ್ 320 ರವರೆಗೆ ಎಲ್ಲ ರೀತಿಯ ವಿಮಾನಗಳು ಹಗಲು-ರಾತ್ರಿ ಕಾರ್ಯಾಚರಣೆಗೆ ಅನುಕೂಲವಾಗುವಂತೆ  3.2 ಕಿ.ಮೀ ರನ್‍ವೇ ಹಾಗೂ 4320 ಚದರ ಅಡಿ ವಿಸ್ತೀರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್, ಏರ್ ಟ್ರಾಫಿಕಿಂಗ್ ಸೆಂಟರ್ ಇತರೆ ಸೌಲಭ್ಯಗಳೊಂದಿಗೆ ನಿರ್ಮಿಸಿರುವ ವಿಮಾನ ನಿಲ್ದಾಣ ರೂ.995 ಕೋಟಿ ವೆಚ್ಚದಲ್ಲಿ 103 ಕಿ.ಮೀ ಉದ್ದದ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ಶಂಕುಸ್ಥಾಪನೆ, ರೂ.97.18 ಕೋಟಿ ವೆಚ್ಚದಲ್ಲಿ ಕೋಟೆಗಂಗೂರಿನಲ್ಲಿ ರೈಲ್ವೇ ಕೋಚಿಂಗ್ ಡಿಪೋ, ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ರೂ.862 ಕೋಟಿ ಮೊತ್ತದ ಕಾಮಗಾರಿ ಶಂಕುಸ್ಥಾಪನೆ ಮತ್ತು ರೂ.91.50 ಕೋಟಿ ಮೊತ್ತದ ಕಾಮಗಾರಿ ಲೋಕಾರ್ಪಣೆ ರೂ.66.44 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 766ಸಿ ಬೈಂದೂರು-ರಾಣೆಬೆನ್ನೂರು ರಸ್ತೆಯಲ್ಲಿ 14.77 ಕಿಮೀ ಉದ್ದದ ಶಿಕಾರಿಪುರ ಬೈಪಾಸ್ ನಿರ್ಮಾಣ, ರೂ.96.20 ಕೋಟಿ ವೆಚ್ಚದಲ್ಲಿ ರಾ.ಹೆ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಮೇಗರವಳ್ಳಿಯಿಂದ ಆಗುಂಬೆವರೆಗೆ 17.77 ಕಿ.ಮೀ ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ. ರೂ.56.56 ಕೋಟಿ ವೆಚ್ಚದಲ್ಲಿ ರಾ.ಹೆ 169 ಶಿವಮೊಗ್ಗ-ಮಂಗಳೂರು ರಸ್ತೆಯ ತೀರ್ಥಹಳ್ಳಿ ತಾಲ್ಲೂಕಿನ ಭಾರತೀಪುರ ಬಳಿ 1.29 ಕಿ.ಮೀ ರಸ್ತೆ ನಿರ್ಮಾಣ ಮತ್ತು ತಿರುವಿನ ಅಭಿವೃದ್ದಿ.
ಒಟ್ಟು ರೂ.896.16 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ನಿರ್ಮಾಣಗೊಂಡಿರುವ 44 ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ, ಶಿಮುಲ್ ಶಿವಮೊಗ್ಗ ಕೇಂದ್ರ ಡೇರಿ ಆವರಣದಲ್ಲಿ ರೂ.45 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ರೂ.2 ಲಕ್ಷ ಲೀಟರ್ ಸಾಮಥ್ರ್ಯದ ಹಾಲು, ಮೊಸಲು ಮತ್ತು ಮಜ್ಜಿಗೆ ಪ್ಯಾಕಿಂಗ್ ಘಟಕ ಕಟ್ಟಡ ಉದ್ಘಾಟನ ಹಾಗೂ ನಗರದ ಎಪಿಎಂಸಿ ಆವರಣದಲ್ಲಿ ರೂ.8 ಕೋಟಿ ವೆಚ್ಚಲ್ಲಿ ನಿರ್ಮಿಸಿರುವ ಮ್ಯಾಮ್‍ಕೋಸ್‍ನ 4 ಅಂತಸ್ತುಗಳ ಆಡಳಿತ ಕಚೇರಿ ಕಟ್ಟಡದ ಉದ್ಘಾಟನೆಯನ್ನು ಪ್ರಧಾನಮಂತ್ರಿಗಳು ನೆರವೇರಿಸುವರು ಎಂದು ಮಾಹಿತಿ ನೀಡಿದರು.
Also read: ಆಕ್ಷನ್ ಪ್ರಿನ್ಸ್ ಧುವ ಸರ್ಜಾ ‘ಮಾರ್ಟಿನ್’ ಟೀಸರ್ ಪ್ಯಾನ್ ಇಂಡಿಯಾದಲ್ಲಿ ಅಬ್ಬರ: ಹಾಲಿವುಡ್ ಲೆವೆಲ್‌ನಲ್ಲಿ ಮೇಕಿಂಗ್
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ಮಾತನಾಡಿ, ಕಾರ್ಯಕ್ರಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಎಲ್ಲ ಕಡೆ ಸಿಸಿ ಕ್ಯಾಮೆಗಳನ್ನು ಅಳವಡಿಸಲಾಗಿದೆ. ಎಲ್ಲ ಸಾರ್ವಜನಿಕರು ಬೆಳಿಗ್ಗೆ 10 ಗಂಟೆಯ ಒಳಗೆ ಕಾರ್ಯಕ್ರಮದ ಆವರಣದೊಳಗೆ ಬರಬೇಕು. ವಾಹನಗಳ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇದ್ದು, ನಿಗದಿಪಡಿಸಿದ ಸ್ಥಳದಲ್ಲಿಯೇ ವಾಹನಗಳನ್ನು ನಿಲ್ಲಿಸಬೇಕು.
ಸೂಚನೆಗಳು:
ಯಾರೂ ಕೂಡ ಕಪ್ಪು ಬಣ್ಣದ ಬಟ್ಟೆ, ಕರ್ಚೀಫ್‍ಗಳನ್ನು ಧರಿಸಿ ಬರುವಂತಿಲ್ಲ. ನೀರಿನ ಬಾಟಲ್, ಹ್ಯಾಂಡ್ ಬ್ಯಾಗ್ ಮತ್ತು ಕಪ್ಪು ಕರ್ಚೀಫ್‍ಗಳನ್ನು ತರುವಂತಿಲ್ಲ. ಮೊಬೈಲ್ ಮತ್ತು ಪರ್ಸ್‍ಗೆ ಮಾತ್ರ ಅವಕಾಶ ಇರುತ್ತದೆ. ಎರಡು ಹಂತದ ತಪಾಸಣೆ ಇರುತ್ತದೆ ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AirportKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaPM Narendra ModiShimogaShivamoggaNewsಪ್ರಧಾನ ಮಂತ್ರಿ ನರೇಂದ್ರ ಮೋದಿಮಲೆನಾಡು_ಸುದ್ಧಿವಿಮಾನ ನಿಲ್ದಾಣಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಕ್ಷನ್ ಪ್ರಿನ್ಸ್ ಧುವ ಸರ್ಜಾ ‘ಮಾರ್ಟಿನ್’ ಟೀಸರ್ ಪ್ಯಾನ್ ಇಂಡಿಯಾದಲ್ಲಿ ಅಬ್ಬರ: ಹಾಲಿವುಡ್ ಲೆವೆಲ್‌ನಲ್ಲಿ ಮೇಕಿಂಗ್

Next Post

ಶಿವಮೊಗ್ಗ ಮಹಾನಗರ ಪಾಲಿಕೆ ಬಜೆಟ್: ವಿರೋಧ ಪಕ್ಷದವರು ಕನ್ನಡಿ ಹಿಡಿದು ಪ್ರತಿಭಟಿಸಿದ್ದೇಕೆ?

kalpa News

kalpa News

Next Post
ಶಿವಮೊಗ್ಗ ಮಹಾನಗರ ಪಾಲಿಕೆ ಬಜೆಟ್: ವಿರೋಧ ಪಕ್ಷದವರು ಕನ್ನಡಿ ಹಿಡಿದು ಪ್ರತಿಭಟಿಸಿದ್ದೇಕೆ?

ಶಿವಮೊಗ್ಗ ಮಹಾನಗರ ಪಾಲಿಕೆ ಬಜೆಟ್: ವಿರೋಧ ಪಕ್ಷದವರು ಕನ್ನಡಿ ಹಿಡಿದು ಪ್ರತಿಭಟಿಸಿದ್ದೇಕೆ?

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL