ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರೆಸ್ ಟ್ರಸ್ಟ್’ನಲ್ಲಿ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಆದರ್ಶ(30) ನಿನ್ನೆ ತಡರಾತ್ರಿ ಅಕಾಲಿಕ ಮರಣಕ್ಕೆ ತುತ್ತಾಗಿದ್ದಾರೆ.
ಪ್ರೆಸ್ ಟ್ರಸ್ಟ್’ನಲ್ಲಿ ಉತ್ಸಾಹದಿಂದ ಕಾರ್ಯ ನಿರ್ವಹಿಸುತ್ತಿದ್ದ ಆದರ್ಶ, ಎಲ್ಲರೊಂದಿಗೂ ನಗುಮೊಗದಿಂದಲೇ ಉತ್ತಮ ಬಾಂಧವ್ಯ ಹೊಂದಿದ್ದ ವ್ಯಕ್ತಿ. ಕೆಲವೇ ತಿಂಗಳುಗಳ ಹಿಂದೆ ವಿವಾಹ ಜೀವನಕ್ಕೆ ಕಾಲಿಟ್ಟಿದ್ದ ಇವರು ಅಕಾಲಿಕ ಮರಣಕ್ಕೆ ತುತ್ತಾಗಿರುವುದು ನಿಜಕ್ಕೂ ದುಃಖಕರ ಸಂಗತಿ.
ಆದರ್ಶ ನಿಧನಕ್ಕೆ ಕಲ್ಪ ಮೀಡಿಯಾ ಹೌಸ್ ಸಂತಾಪ ಸೂಚಿಸಿ, ಇವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸುತ್ತದೆ.
Also Read: ಕಲಾ ತಪಸ್ವಿ, ಹಿರಿಯ ನಟ ರಾಜೇಶ್ ವಿಧಿವಶ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂತಾಪ
ಆದರ್ಶ ಅವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.
ಸಂಘದೊಂದಿಗೆ ಲಾಗಾಯ್ತಿನಿಂದ ಒಡನಾಡಿಯಾಗಿ, ಎಲ್ಲ ಕಾರ್ಯಗಳಲ್ಲಿ ಭಾಗಿಯಾಗಿದ್ದ ಆದರ್ಶ ಅಕಾಲಿಕವಾಗಿ ಮರಣ ಹೊಂದಿರುವುದು ಸಂಘಟನೆಗೆ ತುಂಬಲಾರದ ನಷ್ಟ. ನಿಗರ್ವಿ, ಮೆದುಮಾತಿನ ಆದರ್ಶ ಎಲ್ಲರ ಪ್ರೀತಿಗೂ ಪಾತ್ರವಾಗಿದ್ದರು. ಇವರ ನಿಧನಕ್ಕೆ ಸಂಘದ ಅಧ್ಯಕ್ಷ ಕೆ.ವಿ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವೈದ್ಯ, ರಾಜ್ಯ ಸಮಿತಿ ನಿರ್ದೇಶಕ ಎನ್. ರವಿಕುಮಾರ್, ನಗರ ಕಾರ್ಯದರ್ಶಿ ವಿ.ಟಿ. ಅರುಣ್ ಹಾಗೂ ಸಮಸ್ತ ಪತ್ರಕರ್ತರ ಬಳಗ ಸಂತಾಪ ಸೂಚಿಸಿ, ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ, ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಕುಟುಂಬಕ್ಕೆ ಸಿಗಲಿ ಎಂದು ಸಂಘ ಪ್ರಾರ್ಥಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post