No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

‘ಶಾಖಾಹಾರಿ’ ಸಿನಿಮಾಗೆ ಪ್ರತಿಷ್ಠಿತ ಫಿಲ್ಮ್‌ಫೇರ್ ಅವಾರ್ಡ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 3, 2026
in ಶಿವಮೊಗ್ಗ
0
‘ಶಾಖಾಹಾರಿ’ ಸಿನಿಮಾಗೆ ಪ್ರತಿಷ್ಠಿತ ಫಿಲ್ಮ್‌ಫೇರ್ ಅವಾರ್ಡ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ  |

ಶಿವಮೊಗ್ಗ ಜಿಲ್ಲೆ ಹೆಮ್ಮೆ ಪಡಬಹುದಾದ ಮತ್ತೊಂದು ಸುದ್ದಿ ಶಿವಮೊಗ್ಗದ ಕೀಳಂಬಿ ಮೀಡಿಯ ಕಂಪನಿ ನಿರ್ಮಾಣದ ಸಿನಿಮಾ “ಶಾಖಾಹಾರಿ”ಗೆ #Shaakahaari ಪ್ರತಿಷ್ಠಿತ ಫಿಲ್ಮ್‌ಫೇರ್ ಅವಾರ್ಡ್ #Filmfare ಲಭಿಸಿದೆ.

ದಕ್ಷಿಣ ಭಾರತದ ಭಾಷಾ ಚಿತ್ರಗಳಲ್ಲಿ ಕನ್ನಡ ವಿಭಾಗದಲ್ಲಿ ”ಕಪ್ಪುವನಿತೆ” ಪುರಸ್ಕಾರ ಶಾಖಾಹಾರಿ ಚಲನಚಿತ್ರಕ್ಕೆ ಸಿಕ್ಕಿದೆ. ಕೊಚ್ಚಿಯಲ್ಲಿ ನಡೆದ 70ನೇ ಫಿಲ್ಮ್‌ಫೇರ್ ಪುರಸ್ಕಾರ ವಿತರಣಾ ಸಮಾರಂಭದಲ್ಲಿ ನಿರ್ಮಾಪಕ ರಾಜೇಶ್ ಕೀಳಂಬಿ ಈ ಪ್ರಶಸ್ತಿ ಸ್ವೀಕರಿಸಿದರು.
ವೈಶಷ್ಟ್ಯವೆಂದರೆ ಕತೆ ಶಿವಮೊಗ್ಗದ ಗಿರೀಶ್, ನಿರ್ದೆಶನ ಶಿವಮೊಗ್ಗದ ಸಂದೀಪ್ ಸುಂಕದ್, ಸಂಪೂರ್ಣ ಶಿವಮೊಗ್ಗ ಜಿಲ್ಲೆಯ ನಿಸರ್ಗದಲ್ಲಿಯೇ ಚಿತ್ರೀಕರಣಗೊಂಡ ಹೆಮ್ಮೆ ಈ ಚಿತ್ರದ್ದಾಗಿದೆ. ಯುವ ನಿರ್ದೇಶಕ ಸಂದೀಪ್ ಸುಂಕದ್ ಅವರೂ ಕೂಡ ಈ ವರ್ಣಮಯ ಸಮಾರಂಭದಲ್ಲಿ ಭಾಗವಹಿಸಿ ಪ್ರತಿಷ್ಠಿತ ಫಿಲ್ಮ್‌ಫೇರ್ ಪುರಸ್ಕಾರದ ಆನಂದ ಅನುಭವಿಸಿದರು.

ಕನ್ನಡದಲ್ಲಿ ಚಿತ್ರಮಾಡಲು ಕತೆಗಳೇ ಇಲ್ಲವೆಂದಿಲ್ಲ. ಇರುವ ಕತೆಯನ್ನೇ ಮತ್ತಷ್ಟೂ ಸಿನಿಮಾ ಮಾಧ್ಯದಲ್ಲಿ ನಿರೂಪಿಸುವ ಕಲೆಗಾರಿಕೆ ಈಗ ಮುಖ್ಯ. ಅಂತಹ ಕೌಶವಲನ್ನ ಯುವ ನಿರ್ದೇಶಕ ಸಂದೀಪ್ ಸುಂಕದ್ ತೋರಿಸಿದ್ದಾರೆ. ಕತೆ ನಡೆಯುತ್ತಲೇ ಪ್ರೇಕ್ಷಕನನ್ನ ಫ್ರೇಮಿಂದ ಫ್ರೇಮಿಗೆ ತುದಿಗಾಲಲ್ಲಿ ನಿಲ್ಲಿಸುತ್ತದೆ.ಅಂತಹ ಕುತೂಹಲ ಕಾಯ್ದುಕೊಳ್ಳುವ ಚಿತ್ರಕತೆ ಸೊಗಸಾಗಿ ಹೆಣೆಯಲಾಗಿದೆ.

ಹಿರಿಯ ನಟ ರಂಗಾಯಣ ರಘು, #Rangayana Raghu ತಮ್ಮ ಎಂದಿನ ಪಾತ್ರಗಳ ಅಚ್ಚಿನಿಂದ ಹೊರಬಂದು, ಭಾವನಾತ್ಮಕ ಪಾತ್ರದಲ್ಲಿ ಜೀವಂತಿಕೆ ತುಂಬಿ ನಟಿಸಿದ್ದಾರೆ. ಅವರ ಸಿನಿರಂಗದ ಪಯಣದಲ್ಲಿ “ಶಾಖಾಹಾರಿ” ಒಂದು ಅನನ್ಯ ಸಾಧನೆಯ ಮೈಲುಗಲ್ಲೆಂದೇ ನಿಸ್ಸಂದೇಹ ಭಾವಿಸಬಹುದು. ಛಾಯಾಗ್ರಹಣದಲ್ಲಿ ವಿಶ್ವಜಿತ್ ರಾವ್ ಚಾಕಚಕ್ಯತೆ ಕಾಣಬಹುದು. ಗ್ರಾಮೀಣ ಕ್ಯಾಂಟೀನ್ ಸಿನಿಮಾದ ಹೃದಯ ಭಾಗ. ಈ ಸೆಟಿಂಗ್ ಮತ್ತು ಚಿತ್ರಕತೆಯ ಓಟಕ್ಕೆ ಅವರ ಕ್ಯಾಮರಾ ಹಿಂಬಾಲಿಸಿದೆ. ಇದಕ್ಕೆ ಚಿತ್ರಕಥೆಯೇ ನಾಯಕ.ಅದಕ್ಕೆ ಪೋಷಕವಾಗಿ ಅಭಿನಯನೀಡಿ ರಂಗಾಯಣ ರಘು ಅಪೂರ್ವ ನಟನಾ ಸಾಮರ್ಥ್ಯ ಮೆರೆದಿದ್ದಾರೆ. ರಾಜ್ಯದ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಂದರ್ಭ ಬೇರೆನೂ ಮ್ಯಾಜಿಕ್ ನಡೆಯದಿದ್ದರೆ ಉತ್ತಮ ನಟ ಪ್ರಶಸ್ತಿ ರಂಗಾಯಣ ರಘು ಅವರ ಪಾಲಿಗೆ ಕಟ್ಟಿಟ್ಟ ಬುತ್ತಿ. ಸಬ್ ಇನ್ಸ್ ಪೆಕ್ಟರ್ ಪಾತ್ರದಲ್ಲಿ ಸಹಜ ನಟ ಗೋಪಾಲ ಕೃಷ್ಣ ದೇಶಪಾಂಡೆ ಪ್ರಬುದ್ಧ ಅಭಿನಯ. ಕತೆಯನ್ನ, ಕುತೂಹಲವನ್ನು ನಟನೆಯೊಂದಿಗೆ ಸಲೀಸಾಗಿ ಎಳೆದೊಯ್ಯುವ ಪ್ರಯತ್ನ ಫಲಿಸಿದೆ.
ಮಿಕ್ಕಂತೆ ಸಣ್ಣಪುಟ್ಟ ಪಾತ್ರಗಳಲ್ಲಿ ಬಿಡಿಬಿಡಿಯಾಗಿ ನಟಿಸಿರುವ ಕಲಾವಿದರೂ ತಮಗೆ ನೀಡಿದ ಅವಕಾಶ ಸಾರ್ಥಕಪಡಿಸಿಕೊಂಡಿದ್ದಾರೆ. ಹಾಡುಗಳಂತೂ ಇಂಪಾಗಿವೆ. ಸಂಗೀತ ನಿರ್ದೇಶನದಲ್ಲೂ ಶಾಖಾಹಾರಿ ರಸಿಕರು ಕಿವಿಗೊಟ್ಟು ಆಲಿಸುವಂತೆ ಮಾಡಿದೆ. ಎಲ್ಲೋ ಸುರಿದಾ ಮಳೆ.” ನಿನ್ನನಗಲಿ ಇರಲಾರೆನೊ’ ಮುಂತಾದ ಹಾಡುಗಳು ಗುನುಗುವಂತೆ ಮಾಡುತ್ತವೆ. ಸಂಗೀತ ನೀಡಿದ ಮಯೂರ್ ಅಂಬೇಕಲ್ ಭರವಸೆ ಮೂಡಿಸಿದ್ದಾರೆ. ಸ್ವತಃ ಅವರೇ ಹಾಡಿರುವ ಹಾಡು ಭವಿಷ್ಯದ ಹಿನ್ನೆಲೆ ಗಾಯಕ ಅವರ ಮೂಲಕ ಆವಿರ್ಭವಿಸುವ ಸೂಚನೆಗಳಿವೆ. ಕೀಳಂಬಿ ಮೀಡಿಯ ಶಿವಮೊಗ್ಗೆಯ ಕೂಸು.

ಈಗಾಗಲೇ “ಶಾಖಾಹಾರಿ” ಸಿನಿಮಾದ ಚೊಚ್ಚಲ ನಿರ್ಮಾಪಕರಿಗೆ ನೀಡುವ ಡಾ.ಪುನೀತ್ ರಾಜ್‍ಕುಮಾರ್ ಪ್ರಶಸ್ತಿಯನ್ನ. ನಿರ್ಮಾಪಕ ರಾಜೇಶ್ ಕೀಳಂಬಿ ಮುಡಿಗೇರಿಸಿದ್ದಾರೆ. ಅಂಬೆಗಾಲಿಡುವಾಗಲೇ ಮಾಧ್ಯಮದ ಹೆಜ್ಜೆಗುರುತು ಮೂಡಿಸಿದೆ. ಸಿನಿಮಾ ಜಗತ್ತಿನ ಚಟುವಟಿಕೆಗಳಿಗೆ ಮಲೆನಾಡಿನ ಶಿವಮೊಗ್ಗವನ್ನು ಕೇಂದ್ರವಾಗಿಸಲಿ ಎಂಬುದೇ ಎಲ್ಲರ ಹಾರೈಕೆಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ``ಶಾಖಾಹಾರಿ''FilmfareKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaRangayana RaghuShaakahaariShimogaShivamoggaNewsಫಿಲ್ಮ್‌ಫೇರ್ ಅವಾರ್ಡ್ಮಲೆನಾಡು_ಸುದ್ಧಿರಂಗಾಯಣ ರಘುಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಪುತ್ತೂರಿನ ಆಗಸದ ಕೆಳ ಎತ್ತರದಲ್ಲಿ ಹಾರಾಡಿದ ಸಣ್ಣ ವಿಮಾನ | ಭಯ ಪಡುವ ಅಗತ್ಯವಿಲ್ಲ

Next Post

ಮಾ.7ರಿಂದ 10 ಸಹ್ಯಾದ್ರಿ ನಾಟಕೋತ್ಸವ | ಜೋಕುಮಾರಸ್ವಾಮಿ ಪ್ರದರ್ಶನದೊಂದಿಗೆ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾ.7ರಿಂದ 10 ಸಹ್ಯಾದ್ರಿ ನಾಟಕೋತ್ಸವ | ಜೋಕುಮಾರಸ್ವಾಮಿ ಪ್ರದರ್ಶನದೊಂದಿಗೆ ಚಾಲನೆ

ಮಾ.7ರಿಂದ 10 ಸಹ್ಯಾದ್ರಿ ನಾಟಕೋತ್ಸವ | ಜೋಕುಮಾರಸ್ವಾಮಿ ಪ್ರದರ್ಶನದೊಂದಿಗೆ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೇಕರಿ ಪದಾರ್ಥ ತಂದವ ಜೈಲುಪಾಲು! ಆಗಿದ್ದೇನು?

April 15, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಅಶೋಕಪುರಂ – ಕೆಎಸ್ಆರ್ ಬೆಂಗಳೂರು ಮೆಮು ಸೇವೆ ಎರಡು ದಿನ ರದ್ದು

April 15, 2026
ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

April 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL