ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಕೋಟೆ ರಸ್ತೆಯಲ್ಲಿರುವ ಎಂ.ವಿ. ಶಕುಂತಲಾ ಜೋಯ್ಸ್ ರವರ ಸ್ವಗೃಹದಲ್ಲಿ ಸರಸ್ವತಿ ಪೂಜೆಯನ್ನು ಏರ್ಪಡಿಸಲಾಗಿತ್ತು.
ಕಳೆದ 16 ವರ್ಷಗಳಿಂದ ನೂರಾರು ವಿದ್ಯಾರ್ಥಿಗಳಿಗೆ ಭಗವದ್ಗೀತೆ, ಸುಭಾಷಿತ, ಸ್ತೋತ್ರ ಮತ್ತು ಶ್ಲೋಕಗಳನ್ನು ಉಚಿತವಾಗಿ ಹೇಳಿಕೊಡುತ್ತಿದ್ದಾರೆ. ಪ್ರಸಕ್ತ ಅವರ ಬಳಿ 15 ವಿದ್ಯಾರ್ಥಿಗಳು ಭಗವದ್ಗೀತೆಯನ್ನು ಕಲಿಯುತ್ತಿದ್ದಾರೆ.
ಈ ಸಂದರ್ಭದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಕಂಠಪಾಠ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅವರ ಪೋಷಕರ ಸಮ್ಮುಖದಲ್ಲಿ ಬಹುಮಾನ ವಿತರಣೆ ಮಾಡಲಾಯಿತು.
ಉನ್ನತಿ ಹೀಲಿಂಗ್ ಫೌಂಡೇಷನ್, ಬೆಂಗಳೂರು ಹಾಗೂ ಇತರ ಅನೇಕ ಸಂಘ ಸಂಸ್ಥೆಗಳು ಆಯೋಜಿಸಿದ ಭಗವದ್ಗೀತೆ ಸ್ಪರ್ಧೆಯಲ್ಲಿ ಮಕ್ಕಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.
Also read: ಜೆಡಿಎಸ್ ಪಂಚರತ್ನ ರಥಯಾತ್ರೆ ಫೆ.22, 23ರಂದು ಶಿವಮೊಗ್ಗಕ್ಕೆ: ಮಾಜಿ ಶಾಸಕಿ ಶಾರದಾ ಪೂರ್ಯಾ ನಾಯ್ಕ
ಭಗವದ್ಗೀತೆ, ಶ್ಲೋಕ, ಸುಭಾಷಿತಗಳನ್ನುಕಲಿಯಲು ಇಚ್ಛಿಸುವವರು ನಗರದ ಕೋಟೆ ರಸ್ತೆಯ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಎದುರಿನಲ್ಲಿರುವ ಎಂ.ವಿ. ಶಕುಂತಲಾ ಜೋಯ್ಸ್ (ದೂ: 8762395088) ರನ್ನು ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post