ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ 2024ರ ಪರೀಕ್ಷೆಯಲ್ಲಿ ಆಗಿರುವ ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶಿವಪ್ಪನಾಯಕ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ವೃತ್ತಿಪರ ಕೋರ್ಸ್ಗಳಾದ ಇಂಜಿನಿಯರ್, ಮೆಡಿಕಲ್, ಡೆಂಟಲ್ ಮತ್ತು ಇತರೆ ಸೀಟುಗಳನ್ನು ಸಮರ್ಥವಾಗಿ ಅರ್ಹತೆ ಆಧಾರದಲ್ಲಿ ಹಂಚಿಕೆ ಮಾಡುವ ದೃಷ್ಟಿಯಿಂದ ಸಿಇಟಿ ಆರಂಭವಾಗಿದೆ. ಆದರೆ, ಈಗ ಈ ಸಿಇಟಿ ಪರೀಕ್ಷೆಯಲ್ಲಿ ಅನೇಕ ನ್ಯೂನ್ಯತೆಗಳು ಕಂಡು ಬರುತ್ತಿವೆ. ವಿದ್ಯಾರ್ಥಿಗಳ ಪಾಲಿಗೆ ನಂಬಿಕೆಯನ್ನು ಕಳೆದುಕೊಂಡಿವೆ. ರಾಜ್ಯ ಸರ್ಕಾರಗಳ ನ್ಯೂನ್ಯತೆ ಮತ್ತು ಇಚ್ಛಾಶಕ್ತಿ ಕೊರತೆಯಿಂದ ಮನಬಂದಂತೆ ಪರೀಕ್ಷೆಗಳನ್ನ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಕೆಇಎ ಯಿಂದ ಹತ್ತು ಹಲವಾರು ಪರೀಕ್ಷೆಗಳು ನಡೆಯುತ್ತಿದ್ದವು. ಆದರೆ ಈಗ ಪರೀಕ್ಷೆಗಳಲ್ಲಿ ಅಕ್ರಮದ ಕರಿನೆರಳು ಬಿದ್ದಿದೆ. ಒಂದು ಒಳ್ಳೆಯ ಸಂಸ್ಥೆಯನ್ನೇ ದಿಕ್ಕುತಪ್ಪಿಸುವ ಕೆಲಸ ನಡೆದಿದೆ. ಪ್ರಸ್ತುತ ವರ್ಷದ ಸಿಇಟಿ ಪರೀಕ್ಷೆಯಲ್ಲಿ ಒಂದು ದೊಡ್ಡ ಅವಾಂತರವೇ ಆಗಿದೆ. ಸಿಇಟಿಯಲ್ಲಿ ಪಠ್ಯದಲ್ಲಿ ಇಲ್ಲದ ಭೌತಶಾಸ್ತ್ರದಲ್ಲಿ 10, ಗಣ ತದಲ್ಲಿ 14, ರಸಾಯನ ಶಾಸ್ತçದಲ್ಲಿ 23, ಜೀವಶಾಸ್ತ್ರದಲ್ಲಿ 12 ಪ್ರಶ್ನೆಗಳನ್ನು ಕೇಳಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಅತ್ಯಂತ ಸಮಸ್ಯೆಯಾಗಿದೆ. ಇದನ್ನು ಎಬಿವಿಪಿ ಖಂಡಿಸುತ್ತದೆ ಎಂದು ತಿಳಿಸಿದರು.
Also read: ಶಿಕಾರಿಪುರ: ಬಾಲಕಿ ಅನುಮಾನಾಸ್ಪದ ಸಾವು..!
ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಿರುವುದರಿಂದ ಸುಮಾರು 3 ಲಕ್ಷ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗಿದೆ. ಆದ್ದರಿಂದ ಸಮಸ್ಯೆ ಸೃಷ್ಟಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮತೆಗೆದುಕೊಳ್ಳಬೇಕು. ಸಿಇಟಿ ಗೊಂದಲ ಬಗೆಹರಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಕಾರ್ಯದರ್ಶಿ ಪ್ರವೀಣ್, ರವಿ, ಶರಣ್, ವರುಣ್, ಅಭಿಷೇಕ್, ಪುನೀತ್, ಕಾರ್ತಿಕ್, ಜೀವಿತ್ ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post