ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾಲುವೆ ಒತ್ತುವರಿ ತೆರವುಗೊಳಿಸುವಂತೆ ತಾಲ್ಲೂಕಿನ ಮಂಟಘಟ್ಟ ಗ್ರಾಮ ಪಂಚಾಯ್ತಿ ಕಚೇರಿ ಎದುರು ಗ್ರಾಮದ ನಿವಾಸಿ ಉಮೇಶ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಉಮೇಶ್ ಅವರು ಕಳೆದ ನಾಲ್ಕು ವರ್ಷಗಳಿಂದ ರಾಜ ಕಾಲುವೆ ಒತ್ತುವರಿಯಾಗಿರುವುದರಿಂದ ತಮ್ಮ ಮನೆಗೆ ಮಳೆ ನೀರು ನುಗ್ಗುತ್ತಿದೆ. ಇದರಿಂದ ತಮಗೆ ಪ್ರತಿ ವರ್ಷ ಸಂಕಷ್ಟ ಎದುರಾಗುತ್ತಿದೆ. ಈ ಬಗ್ಗೆ 4 ವರ್ಷಗಳಿಂದಲೂ ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಅಧಿಕಾರಿಗಳ ಗಮನ ಸೆಳೆದರೂ ಪ್ರಯೋಜನವಾಗಿಲ್ಲ ಎಂದು ದೂರಿದರು.

ಆದರೆ, ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಬದಲು ಮತ್ತಷ್ಟು ಜಟಿಲಗೊಳಿಸುತ್ತಿದ್ದಾರೆ ಎಂದು ಉಮೇಶ್ ಆರೋಪಿಸಿದರಲ್ಲದೇ, ಸಮಸ್ಯೆಯನ್ನು ಸರಿಪಡಿಸುವವರೆಗೂ ಉಪವಾಸ ಧರಣಿ ಕೈಬಿಡುವುದಿಲ್ಲ ಎಂದು ತಿಳಿಸಿದರು.











Discussion about this post