No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಾರ್ವಜನಿಕರೇ, ತುಂಗಾ ನದಿ ಉಳಿವಿಗೆ ಸರ್ಕಾರವನ್ನು ದೂಷಿಸದೇ ನೀವೇ ಕೈಜೋಡಿಸಿ: ವಿವೇಕ್ ತ್ಯಾಗಿ ಕರೆ

kalpa News by kalpa News
November 11, 2024
in ಶಿವಮೊಗ್ಗ
0
ಸಾರ್ವಜನಿಕರೇ, ತುಂಗಾ ನದಿ ಉಳಿವಿಗೆ ಸರ್ಕಾರವನ್ನು ದೂಷಿಸದೇ ನೀವೇ ಕೈಜೋಡಿಸಿ: ವಿವೇಕ್ ತ್ಯಾಗಿ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತುಂಗಭದ್ರಾ ಅಭಿಯಾನವು #Tunga Bhadra Abhiyana ಪಕ್ಷಾತೀತವಾಗಿ ಆಗಬೇಕು. ಹಾಗಾಗಿ ಎಲ್ಲರೂ ಮಲಿನ ತಡೆಯುವ ಕೆಲಸ ಮಾಡಬೇಕು ಎಂದು ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನದ ಕಾರ್ಯಕಾರಿ ಸಮಿತಿ ಸದಸ್ಯ ವಿವೇಕ್ ತ್ಯಾಗಿ ಹೇಳಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ನವದೆಹಲಿಯ ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನ, ಶಿವಮೊಗ್ಗ ಪರ್ಯಾವರಣ ಟ್ರಸ್ಟ್ನಿಂದ ನಿರ್ಮಲ ತುಂಗಭದ್ರಾ ಅಭಿಯಾನದ ಬೃಹತ್ ಜಲಜಾಗೃತಿ-ಜನಜಾಗೃತಿ ಪಾದಯಾತ್ರೆ ಅಂಗವಾಗಿ ಆಯೋಜಿಸಿದ್ದ ಪ್ರಬುದ್ಧರ ಸಭೆಯಲ್ಲಿ ಮಾತನಾಡಿದರು.

ದೇಶದಲ್ಲಿ ಹಲವು ನದಿಗಳು ಮಲಿನಗೊಂಡಿವೆ. ಅದನ್ನು ತಡೆಯುವ ಅದನ್ನು ತಡೆಯುವ ಕೆಲಸ ತುರ್ತಾಗಿ ಆಗಬೇಕಿದೆ. ದೇಶಾದ್ಯಂತ ನರ್ಮದಾ, ಯಮುನಾ ಮತ್ತು ಗಂಗಾ ನದಿಗಳ ಉಳಿವಿಗಾಗಿ ದೊಡ್ಡಮಟ್ಟದಲ್ಲಿ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ. ನದಿಗಳು ನಿರೀಕ್ಷೆ ಮೀರಿ ಮಲಿನವಾಗಿದ್ದು. ನಾವೆಲ್ಲರೂ ಎಚ್ಚೆತ್ತುಕೊಳ್ಳುವುದು ಅಗತ್ಯ ಎಂದರು.
ದೇಶದಲ್ಲಿ ನದಿಗಳ ಉಳಿವಿಗಾಗಿ ಹೋರಾಟಗಳು ನಡೆಯುತ್ತಿದೆ. ಅನೇಕರು ಈ ಒಂದು ಕಾರ್ಯಕ್ಕೆ ಕೈಜೋಡಿಸಿದ್ದಾರೆ. ಮುಖ್ಯವಾಗಿ ಗಂಗಾ ನದಿಗಾಗಿ ಒಂದು ಹೋರಾಟ ಆರಂಭಿಸಿದ್ದೆವು. ಪ್ರತಿಭಟನೆ, ಹೋರಾಟದ ಮೂಲಕ ಜಾಗೃತಿ ಮಾಡದೆ ಜನರ ಜತೆ ಚೆರ್ಚೆ ಮಾಡಿ ಅರಿವು ಮೂಡಿಸಿದ್ದೆವು. ನಮ್ಮ ಹೋರಾಟಕ್ಕೆ ಅನೇಕ ಯುವಕರು ಬಂದಿದ್ದರು. ಗಂಗಾ ನದಿ ನಮ್ಮದೆನ್ನುವುದೇ ಜನರಿಗೆ ಗೊತ್ತಿರಲಿಲ್ಲ. ಯಮುನಾ ನದಿಗೆ ಕೂಡ ಚರಂಡಿ ನೀರು ಬಂದು ಸೇರುತ್ತಿದ್ದು, ನದಿ ಪರಿಸ್ಥಿತಿ ತುಂಬ ಕೆಟ್ಟದಾಗಿದೆ. ಅದನ್ನು ಕೂಡ ಸ್ವಚ್ಛಗೊಳಿಸುವ ಕಾರ್ಯ ನಡೆಯಬೇಕಿದೆ ಎಂದರು.

ತುಂಗಾ ನದಿ ಎಲ್ಲರಿಗಾಗಿ ಇದೆ. ನದಿಗಳ ಉಳಿವಿಗಾಗಿ ಕೇವಲ ಸರ್ಕಾರವನ್ನು ದೂಷಿಸುವುದು ಸರಿಯಲ್ಲ. ಸಾರ್ವಜನಿಕರ ಪಾತ್ರವೂ ಮಹತ್ವದ್ದಾಗಿದೆ. ನಾವು ಅಭಿಯಾನದ ಮೂಲಕ ಜಾಗೃತಿ ಮೂಡಿಸುತ್ತಿದ್ದೇವೆ. ಶೃಂಗೇರಿ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಚಾಲನೆ ನೀಡಿರುವುದು ಅಭಿಯಾನಕ್ಕೆ ಮತ್ತಷ್ಟು ಬಲ ಸಿಕ್ಕಿದೆ ಎಂದರು.

Also read: ಹಿಂದೂಗಳಿಗೆ ಏರ್ ಇಂಡಿಯಾ ಬಿಗ್ ನ್ಯೂಸ್ | ಹಲಾಲ್ ಆಹಾರ ಕುರಿತಾಗಿ ಮಹತ್ವದ ಘೋಷಣೆ

ತುಂಗಭದ್ರಾ ನದಿಗಾಗಿ ಮಾತ್ರ ಹೋರಾಟ ಮಾಡುತ್ತಿದ್ದು ಅಭಿಯಾನ ಇಷ್ಟೊಂದು ಯಶ್ವಸಿಯಾಗುತ್ತದೆಂದು ಭಾವಿಸಿರಲಿಲ್ಲ. ನದಿಗಳ ಉಳಿವಿಗಾಗಿ ಅಭಿಯಾನವನ್ನು, ಮತ್ತಷ್ಟು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಇದೀಗ ತುಂಗಭದ್ರ ನದಿ ಉಳಿಗಾಗಿ ಅನೇಕರು ಕೈಜೋಡಿಸುತ್ತಿರುವುದು ನಿಜಕ್ಕೂ ಸಂತೋಷದ ಸಂಗತಿ. ತುಂಗಭದ್ರಾ ಪಾದಯಾತ್ರೆಯಲ್ಲಿ ಉತ್ಸಾಹದಿಂದ ಜನರು ಭಾಗವಹಿಸುತ್ತಿರುವುದು ಶುಭದ ಸಂಕೇತ. ನಮ್ಮ ಹೋರಾಟ ಜನರಿಗೆ ತಲುಪಿಸಬೇಕು. ಅವರಿಗೆ ಅರಿವು ಮೂಡಿಸಬೇಕು ಎಂದರು.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ತುಂಗಭದ್ರಾ ನದಿ ಶುದ್ದೀಕರಣವು ರಾಷ್ಟ್ರೀಯ ಮಹತ್ವದ ಯೋಜನೆ ಆಗಬೇಕು ಎಂಬುದು ಹಲವರ ಅಪೇಕ್ಷೆ. ಅದಕ್ಕೆ ಪೂರಕವಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ಸೇತುವೆಯಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ರಾಷ್ಟ್ರೀಯ ಆಂದೋಲನಗಳಲ್ಲಿ ತುಂಗಭದ್ರಾ ಪಾದಯಾತ್ರೆ ಕೂಡ ಒಂದಾಗಲಿದೆ. ನದಿಗಳ ಶುದ್ದೀಕರಣದಲ್ಲಿ ಎಸ್ ಟಿಪಿ (ಒಳಚರಂಡಿ ಸಂಸ್ಕರಣಾ ಘಟಕ)ಗಳ ಪಾತ್ರ ಮಹತ್ವದ್ದಾಗಿದ್ದು, ಈ ಘಟಕ ಸ್ಥಾಪನೆಗೆ ಸಾವಿರಾರು ಕೋಟಿ ರೂ. ಬೇಕಾಗುತ್ತದೆ. ರಾಜ್ಯ ಸರ್ಕಾರದ ಆಶ್ರಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಎಲ್ಲ ನಗರಗಳಲ್ಲೂ ಎಸ್ ಟಿಪಿ ಸ್ಥಾಪಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಅಭಿಯಾನ ಜನರ ಕಣ್ಣು ತೆರೆಸುವ ಕೆಲಸ ಮಾಡುತ್ತಿದೆ ಎಂದರು.

ಅಭಿಯಾನದ ಸ್ವಾಗತ ಸಮಿತಿ ಅಧ್ಯಕ್ಷ, ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ನದಿಗಳನ್ನು ಉಳಿಸುವ ನಿಟ್ಟಿನಲ್ಲಿ 600 ಕಿ.ಮೀ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ತುಂಗಾ ನದಿಯನ್ನು ಮಲಿನ ಮಾಡಿದ್ದೇವೆ. ನದಿ ಸ್ವಚ್ಛ ಆಗಬೇಕಾದರೆ ಇನ್ಮುಂದೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಅಭಿಯಾನದ ಪ್ರಮುಖ ಎಂ. ಶಂಕರ್, ಪಾದಯಾತ್ರೆ ಮಾಡಿದರೆ ನದಿ ಶುದ್ಧವಾಗುವುದಿಲ್ಲ. ಇದು ಚಳವಳಿ, ಹೋರಾಟವಲ್ಲ. ಪಾದಯಾತ್ರೆ ಮೂಲಕ ನಾಗರಿಕ ಸಮಾಜ, ಸರ್ಕಾರವನ್ನು ಎಚ್ಚರಿಸುವ ಕೆಲಸ. ಚರಿತ್ರಾರ್ಹ ಪಾದಯಾತ್ರೆಯಿಂದ ಮುಂದಿನ ಮೂರು ವರ್ಷದಲ್ಲಿ ಶಿವಮೊಗ್ಗದ ಒಂದು ಹನಿ ಅಶುದ್ಧ ನೀರು ಕೂಡ ನದಿ ಸೇರುವುದಿಲ್ಲ. ಇದು ಇಡೀ ರಾಜ್ಯಕ್ಕೆ ಮಾದರಿಯಾಗಲಿದೆ ಎಂದು ಹೇಳಿದರು.

ಎಂಎಲ್‌ಸಿ ಡಾ.ಧನಂಜಯ ಸರ್ಜಿ, ಶಿವಮೊಗ್ಗ ಪರ್ಯಾವರಣ ಟ್ರಸ್ಟ್ ಅಧ್ಯಕ್ಷ ಪ್ರೊ. ಬಿ.ಎಂ. ಕುಮಾರಸ್ವಾಮಿ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ. ಗೋಪಿನಾಥ್, ಐಎಂಎ ಶಿವಮೊಗ್ಗ ಜಿಲ್ಲಾಧ್ಯಕ್ಷ ಡಾ. ಎಸ್. ಶ್ರಿಧರ್, ಪ್ರಮುಖರಾದ ಗಿರೀಶ್ ಪಟೇಲ್, ಧಾರವಾಡ ಐಟಿಟಿ ಪ್ರಾಧ್ಯಾಪಕ ಪ್ರೊ. ಎಲ್.ಕೆ. ಶ್ರೀಪತಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsTunga Bhadra Abhiyanaತುಂಗಭದ್ರಾ ಅಭಿಯಾನಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿಂದೂಗಳಿಗೆ ಏರ್ ಇಂಡಿಯಾ ಬಿಗ್ ನ್ಯೂಸ್ | ಹಲಾಲ್ ಆಹಾರ ಕುರಿತಾಗಿ ಮಹತ್ವದ ಘೋಷಣೆ

Next Post

`ಕರಿಯ ಕುಮಾರಸ್ವಾಮಿ’ ನಿನ್ನ ರೇಟ್ ಹೇಳು, ಮುಸಲ್ಮಾನರು ಖರೀದಿಸುತ್ತಾರೆ: ಜಮೀರ್ ಜನಾಂಗೀಯ ನಿಂದನೆ

kalpa News

kalpa News

Next Post
`ಕರಿಯ ಕುಮಾರಸ್ವಾಮಿ’ ನಿನ್ನ ರೇಟ್ ಹೇಳು, ಮುಸಲ್ಮಾನರು ಖರೀದಿಸುತ್ತಾರೆ: ಜಮೀರ್ ಜನಾಂಗೀಯ ನಿಂದನೆ

`ಕರಿಯ ಕುಮಾರಸ್ವಾಮಿ' ನಿನ್ನ ರೇಟ್ ಹೇಳು, ಮುಸಲ್ಮಾನರು ಖರೀದಿಸುತ್ತಾರೆ: ಜಮೀರ್ ಜನಾಂಗೀಯ ನಿಂದನೆ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL