ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಕ್ಕಳಲ್ಲಿ ಸ್ವಾತಂತ್ರ ಹೋರಾಟ ಸಾಗಿ ಬಂದ ಹಾದಿಯನ್ನು ತಿಳಿಸುವ ಸಲುವಾಗಿ ರಸಪ್ರಶ್ನೆ ಕಾರ್ಯಕ್ರಮಗಳು ಉಪಯುಕ್ತವಾಗಿದ್ದು, ಅನೇಕ ವಿಚಾರಗಳನ್ನು ಮಕ್ಕಳು ತಿಳಿದುಕೊಳ್ಳಲು ಸಹಕಾರಿಯಾಗಿದೆ ಎಂದು ಶಾಸಕ ಚನ್ನಬಸಪ್ಪ MLA Channabasappa ಹೇಳಿದರು.
ಸಾಂದೀಪನಿ ಆಂಗ್ಲ ಶಾಲೆ, ಸಾರಥಿ ಯೂಟ್ಯೂಬ್ ಚಾನಲ್ ಮತ್ತು ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ (ಶಿವಮೊಗ್ಗ ಜಿಲ್ಲಾ ಘಟಕ) ಇವರ ಸಹಯೋಗದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಗೆ ಸಂಬಂಧಿಸಿದಂತೆ ಅಂತರ ಶಾಲಾ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
ನಗರದ ಅನೇಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಸ್ಪರ್ಧೆಯನ್ನು ಕ್ವಿಜ್ ಮಾಸ್ಟರ್ ಹೇಮಂತ್ ಕೇಳ್ಕರ್ ಅವರು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಮತ್ತು ಸಾಂದೀಪನಿ ಆಂಗ್ಲ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಹಾಗೂ ಶ್ರೀರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ತೃತೀಯ ಸ್ಥಾನವನ್ನು ಪಡೆದುಕೊಂಡರು.
Also read: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಹಿನ್ನೆಲೆ: ಇಬ್ಬರ ಬಂಧನ
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ ವರ್ಮ, ಕಾರ್ಯದರ್ಶಿ ಲೋಕೇಶ್, ನಿರ್ದೇಶಕರಾದ ರಾಜಶೇಖರ್, ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ (ಶಿವಮೊಗ್ಗ ಜಿಲ್ಲಾ ಘಟಕ)ದ ಹರೀಶ್ ಪಂಡಿತ್ ಮತ್ತು ನಿರ್ದೇಶಕರುಗಳು, ಸಾರಥಿ ಚಾನಲ್ ನ ಅಜೇಯ ಶ್ರೀನಿವಾಸ್ ಮತ್ತು ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post