ಶಿವಮೊಗ್ಗ ನಗರದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೋಟ್ಯಂತರ ರೂ. ಅನುದಾನ ನೀಡಿದ್ದು, ಇಲ್ಲಿನ ಸಂಚಾರ ವ್ಯವಸ್ಥೆ ಗಮನಿಸಿ ಸುಗಮ ಸಂಚಾರಕ್ಕಾಗಿ ಐದು ರೈಲ್ವೆ ಮೇಲ್ಸೇತುವೆ ಹಾಗೂ ಎರಡು ರೈಲ್ವೆ ಅಂಡರ್ಪಾಸ್ಗಳನ್ನು ಸುಮಾರು 140ಕೋಟಿ ವೆಚ್ಚದಲ್ಲಿ ಮಾಡಲಾಗುತ್ತಿದ್ದು, ಅಂತಿಮ ಹಂತದಲ್ಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದ್ದಾರೆ.
ಅವರು ಇಂದು ಸವಳಂಗ ರಸ್ತೆಯ ಎಲ್ಸಿ-49, 39 ಕೋಟಿ ವೆಚ್ಚದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಕೆಲವು ಕಡೆ ಅಡ್ಡರಸ್ತೆ ಕಾಮಗಾರಿಗಳು ಹೆಚ್ಚುವರಿಯಾಗಿ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಹೆಚ್ಚುವರಿಯಾಗಿ ಎರಡು ಸಣ್ಣ ಸೇತುವೆಗಳನ್ನು ಕೂಡ ಮಾಡಲಾಗುತ್ತಿದೆ ಎಂದರು.
Also read: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ರಾಜ್ಯ ಬಿಜೆಪಿ ಸಾರಥ್ಯ?
ಈ ಸಂದರ್ಭದಲ್ಲಿ ರೈಲ್ವೆ ಇಂಜಿನಿಯರ್ ರಾಜ್ಕುಮಾರ್, ಸ್ಮಾರ್ಟ್ ಸಿಟಿ ಕಾರ್ಯಪಾಲಕ ಇಂಜಿನಿಯರ್ ವಿಜಯಕುಮಾರ್, ಕರ್ನಾಟಕ ಜಲಮಂಡಳಿ ಕಾರ್ಯಪಾಲಕ ಅಭಿಯಂತರ ಸಿದ್ದಪ್ಪ, ಸ್ಥಳೀಯ ಕಾರ್ಪೊರೇಟರ್ ಇ. ವಿಶ್ವಾಸ್, ಬಿಜೆಪಿ ನಗರಾಧ್ಯಕ್ಷ ಜಗದೀಶ್, ಪ್ರಮುಖರಾದ ಜ್ಯೋತಿಪ್ರಕಾಶ್, ಮಾಲತೇಶ್, ದಿವಾಕರ ಶೆಟ್ಟಿ, ರಾಜೇಶ್ ಕಾಮತ್ ಮತ್ತಿತರರಿದ್ದರು.
ಕಾನೂನಿನ ಚೌಕಟ್ಟಿನೊಳಗೆ ಯಾರೂ ಕೂಡ ದೊಡ್ಡವರಲ್ಲ
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ DCM DKShivakumar ಮೇಲಿನ ಇಡಿ ಕೇಸ್ಗೆ ಇದ್ದ ತಡೆಯನ್ನು ಹೈಕೋರ್ಟ್ ತೆರವುಗೊಳಿಸಿದ್ದು, ತನಿಖೆ ಮುಂದುವರಿಯಲು ಸೂಚಿಸಿರುವುದು ಡಿಕೆಶಿಗೆ ಹಿನ್ನಡೆಯಾಗಿದೆ ಎಂಬ ಪ್ರಶ್ನೆಗೆ ಕಾನೂನಿನ ಚೌಕಟ್ಟಿನೊಳಗೆ ಯಾರೂ ಕೂಡ ದೊಡ್ಡವರಲ್ಲ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post