No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Saturday, June 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭಿತ್ತಿಚಿತ್ರಗಳ ಲೇಪನದಿಂದ ಕಲಾಮಯವಾದ ರಂಗಾಯಣದ ಆವರಣ…

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 19, 2021
in ಶಿವಮೊಗ್ಗ
0
ಭಿತ್ತಿಚಿತ್ರಗಳ ಲೇಪನದಿಂದ ಕಲಾಮಯವಾದ ರಂಗಾಯಣದ ಆವರಣ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಗರದ ಸುವರ್ಣ ಸಾಂಸ್ಕೃತಿಕ ಭವನವು ಸದಾ ನಾಟಕ ಇತರೆ ಸಾಂಸ್ಕೃತಿಕ ಚಟುವಟಿಕೆಗಳಿಂದ ರಂಗ ಮತ್ತು ಸಾಹಿತ್ಯಾಸಕ್ತರನ್ನು ಸೆಳೆಯುತ್ತಿದ್ದು, ಇದೀಗ ಭಿತ್ತಿಚಿತ್ರಗಳು ಮತ್ತು ಹಸೆ ಚಿತ್ತಾರಗಳಿಂದ ಲೇಪಿತವಾಗಿದ್ದು ಮಕ್ಕಳಾದಿಯಾಗಿ ಎಲ್ಲರನ್ನು ತನ್ನೆಡೆ ಆಕರ್ಷಿಸುತ್ತಿದೆ.

ಶಿವಮೊಗ್ಗ ರಂಗಾಯಣದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಸ್ಮಾರ್ಟ್ ಸಿಟಿ ಮತ್ತು ಚಿತ್ರಕಲಾ ಪರಿಷತ್, ಬೆಂಗಳೂರು ಇವರ ಸಹಯೋಗದೊಂದಿಗೆ ಭಿತ್ತಿಚಿತ್ರಗಳ(ಮ್ಯುರಲ್)ಗ್ಯಾಲರಿಯನ್ನು ಸುಂದರವಾಗಿ ನಿರ್ಮಿಸಲಾಗಿದೆ. ಭವನದ ನೆಲ ಮತ್ತು ಒಂದನೇ ಮಹಡಿಯ ಬಲ ಮತ್ತು ಎಡ ಭಾಗದ ವಿಶಾಲವಾದ ಗೋಡೆಗಳಿಗೆ ವಿವಿಧ ಭಿತ್ತಿಚಿತ್ರಗಳನ್ನು ಲೇಪಿಸಲಾಗಿದ್ದು, ಇಡೀ ಆವರಣ ಕಲಾಮಯವಾಗಿದೆ.

ಒಟ್ಟು 40 ಕ್ಕೂ ಹೆಚ್ಚು ಭಿತಿಚಿತ್ರ ಕಲಾಕೃತಿಗಳನ್ನು ರಂಗಾಣದ ಆವರಣದಲ್ಲಿ ಅನಾವರಣಗೊಳಿಸಲಾಗಿದೆ. ಕನ್ನಡದ ಪ್ರಸಿಕದ್ದ ನಾಟಕಗಳಾದ ಚಾಣಕ್ಯ ಪ್ರಪಂಚ, ಸಾಹೇಬ್ರು ಬರುತ್ತಾರೆ, ಸಾಮ್ರಾಟ್ ಅಶೋಕ, ಇದಕ್ಕೆ ಕೊನೆ ಎಂದು? ಸೂತ್ರದ ಗೊಂಬೆಯಾಟದ ದೃಶ್ಯಾವಳಿಗಳು ಹಾಗೂ ಹಸೆ ಚಿತ್ತಾರ(ವರ್ಲಿ ಆರ್ಟ್) ಭಿತ್ತಿಚಿತ್ರಗಳು ಸೇರಿದಂತೆ ಇತರೆ ಅಮೂಲ್ಯ ಮತ್ತು ಆಕರ್ಷಕ ಕಲಾಕೃತಿಗಳನ್ನು ಪೇಪಿಸಿ ಅತ್ಯದ್ಭುತ ಗ್ಯಾಲರಿಯನ್ನು ನಿರ್ಮಿಸಲಾಗಿದೆ. ಸ್ಮಾರ್ಟ್‍ಸಿಟಿ ಮತ್ತು ಬೆಂಗಳೂರಿನ ಚಿತ್ರಕಲಾ ಪರಿಷತ್ ಸಹಯೋಗದಲ್ಲಿ ಸುಮಾರು ರೂ.20 ಲಕ್ಷ ವೆಚ್ಚದಲ್ಲಿ 30 ಕ್ಕೂ ಅಧಿಕ ಕಲಾವಿಧರಿಂದ ರಚಿತವಾದ ಈ ಭಿತ್ತಿಚಿತ್ರಗಳನ್ನು ಸುವರ್ಣ ಸಾಂಸ್ಕøತಿಕ ಭವನದ ನೆಲ ಮತ್ತು ಮೊದಲನೇ ಮಹಡಿ ಗೋಡೆಗಳಿಗೆ ಲೇಪಿಸಲಾಗಿದೆ. ಬಹಳ ಅಪರೂಪವಾದ ಈ ಕಲಾಕೃತಿಗಳ ವೀಕ್ಷಣೆಗೆ ಸಾರ್ವಜನಿಕರಿಗೆ ಉಚಿತವಾಗಿ ನಿತ್ಯ ಅವಕಾಶ ಮಾಡಿಕೊಡಲಾಗಿದೆ.

 -ಸಂದೇಶ್ ಜವಳಿ, ನಿರ್ದೇಶಕರು, ರಂಗಾಯಣ


ಭಿತ್ತಿಚಿತ್ರಗಳು ಗೋಡೆ ಅಥವಾ ಛಾವಣಿ ಮೇಲ್ಮೈಗಳ ಮೇಲೆ ನೇರವಾಗಿ ಬಿಡಿಸಿದ ಅಥವಾ ಲೇಪಿಸಿದ ಒಂದು ಬಗೆಯ ಕಲಾಕೃತಿ. ಭಿತ್ತಿಚಿತ್ರಕಲೆಯ ಒಂದು ವಿಶಿಷ್ಟ ಲಕ್ಷಣವೆಂದರೆ ನಿರ್ದಿಷ್ಟ ಸ್ಥಳದ ವಾಸ್ತುಶಾಸ್ತ್ರೀಯ ಘಟಕವನ್ನು ಚಿತ್ರದಲ್ಲಿ ಸಮರಸವಾಗಿ ಒಳಗೊಳ್ಳುತ್ತದೆ. ಕೆಲವು ಭಿತ್ತಿ ವರ್ಣಚಿತ್ರಗಳನ್ನು ಭಾರೀ ತಟ್ಟುಗಳ ಮೇಲೆ ಬಿಡಿಸಿ ನಂತರ ಗೋಡೆಗೆ ಲಗತ್ತಿಸಲಾಗುತ್ತದೆ. ಈ ತಂತ್ರವು 19 ನೇ ಶತಮಾನದ ಕೊನೆಯ ವರ್ಷಗಳಿಂದ ಸಾಮಾನ್ಯ ಬಳಕೆಯಲ್ಲಿದೆ.


ಕ್ರಿಸ್ತಪೂರ್ವ 30 ಸಾವಿರ ಇಸವಿಯಿಂದಲೂ ಭಿತ್ತಿಚಿತ್ರಗಳನ್ನು ಕಾಣಬಹುದಾಗಿದ್ದು, ಅತ್ಯಂತ ವಿಶಾಲ ಜಾಗ, ಸಮಯ ಮತ್ತು ಪರಿಣಿತಿ ಬೇಡುವ ಈ ಕಲೆ ಈಜಿಪ್ಟ್, ಪಾಂಪೇಯಿ, ಫ್ರಾನ್ಸ್‍ನಲ್ಲಿ ಹೆಚ್ಚಾಗಿ ಬಳಕೆಯಲ್ಲಿತ್ತು. ಪ್ರಸ್ತುತ ವಿಶ್ವದಾದ್ಯಂತ ಈ ಕಲೆಯನ್ನು ಇಷ್ಟಪಡಲಾಗುತ್ತಿದೆ. ವಿವಿಧ ಸಾಹಿತ್ಯ, ಕಲೆ, ಸಂಸ್ಕøತಿಯನ್ನು ಸಮಕಾಲೀನ ಜನತೆಗೆ ತಲುಪಿಸುವ ಮಹತ್ವದ ಕಾರ್ಯ ಮಾಡುತ್ತಿದೆ.

ಭಿತ್ತಿಚಿತ್ರಗಳಲ್ಲಿ ಅನೇಕ ಶೈಲಿಗಳಿವೆ. ಇತ್ತೀಚೆಗೆ ಪಿಓಪಿ ಜೇಡಿಮಣ್ಣು ಅಥವಾ ನೀರಿನಲ್ಲಿ ಕರಗುವ ಬಣ್ಣ ಮತ್ತು ಸುಣ್ಣದ ತಿಳಿಯನ್ನು, ತೈಲಚಿತ್ರವನ್ನು ಹೆಚ್ಚಾಗಿ ಬಳಸಲಾಗುತ್ತಿದೆ. ಭಿತ್ತಿಚಿತ್ರಗಳು ದೊಡ್ಡದಾಗಿರುವುದರಿಂದ ಹೆಚ್ಚಿನ ಸಮಯ ಮತ್ತು ಪರಿಣಿತಿ ಅವಶ್ಯಕವಾಗಿದ್ದು ವಿಭಿನ್ನ ಚಿತ್ರಕಾರರು ತಮ್ಮ ಆಯ್ದ ಮಾಧ್ಯಮ ಹಾಗೂ ಅನ್ವಯದಲ್ಲಿ ನಿಪುಣರಾಗುವ ಸಾಧ್ಯತೆಯಿರುತ್ತದೆ. ಇವುಗಳಲ್ಲಿ ಕುಂಚ, ಉರುಳೆ ಅಥವಾ ಗಾಳಿ ಕುಂಚ/ವಾಯುದ್ರವಗಳಿಂದ ಲೇಪಿಸಿದ ತೈಲವರ್ಣಗಳು ಇಮಲ್ಶನ್ ಅಥವಾ ಅಕ್ರಿಲಿಕ್ ವರ್ಣಗಳು ಸೇರಿವೆ. ಇಂತಹ ಸುಮಾರು 40 ಭಿತ್ತಿಚಿತ್ರಗಳನ್ನು ರಂಗಾಯಣದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಆವರಣದಲ್ಲಿ ಕಾಣಬಹುದು.

ಪ್ರವೇಶ ಅಂಕಣದ ಎರಡು ಸ್ತಂಭಗಳ ಮೇಲೆ ಹಸೆ ಚಿತ್ತಾರ(ವರ್ಲಿ ಆರ್ಟ್) ಮತ್ತು ಮೊದಲನೇ ಅಂಕಣಕ್ಕೆ ಪ್ರವೇಶಿಸುವ ಎರಡು ಬದಿಯ ಸ್ಟೇರ್ ಕೇಸ್ ಗೋಡೆಗಳ ಮೇಲೆ ಸುಂದರವಾದ ಹಸೆ ಚಿತ್ತಾರದ ಭಿತ್ತಿಚಿತ್ರಗಳು ಕಣ್ಮನ ಸೆಳೆಯುತ್ತವೆ. ಹಸೆ ಒಂದು ಬುಡಕಟ್ಟು ಕಲೆಯಾಗಿದ್ದು ಕೆಂಪು ಮಣ್ಣಿನ ಕುಟೀರದ ಗೋಡೆಯ ಮೇಲೆ ಜಾನಪದ ಜನ ಜೀವನದ ಚಿತ್ರಗಳನ್ನು ಕಾಣಬಹುದು.

ಭವನದ ಕಟ್ಟಡ ಮುಂಭಾಗದಲ್ಲಿನ ಸರಸ್ವತಿ, ವೀಣೆಯ ಭಿತ್ತಿಚಿತ್ರಿಗಳು ಹಾಗೂ ವಿವಿಧ ರೀತಿಯ ವಿವಿಧ ಆಕಾರ ಮತ್ತು ಬಣ್ಣಗಳ ಮುಖವಾಡಗಳು ಕಲಾವಿದರ ಕೈಯಲ್ಲಿ ರೂಪ ತಾಳಿದ್ದು ಮುಖ್ಯ ಆಕರ್ಷಣೆಗಳಾಗಿವೆ. ಒಟ್ಟಾರೆ ಕಲೆಯನ್ನೇ ಬಿಂಬಿಸುವಂತಿರುವ, ಕಲಾ ಮತ್ತು ಜಾನಪದ ಲೋಕಕ್ಕೆ ಕರೆದೊಯ್ಯುವ ರಂಗಾಯಣದ ಸುವರ್ಣ ಸಾಂಸ್ಕೃತಿಕ ಭವನಕ್ಕೆ ನೀವು ಒಮ್ಮೆ ಭೇಟಿ ನೀಡಿ.


ಭಾಗ್ಯ ಎಂ.ಟಿ., ವಾರ್ತಾ ಸಹಾಯಕರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada New WebsiteKannada NewsKannada News LiveKannada News OnlineKannada WebiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsShivamogga RangayanaSuvarna Samskruthika Bhavanaಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ರಂಗಾಯಣಶಿವಮೊಗ್ಗ_ನ್ಯೂಸ್ಸುವರ್ಣ ಸಾಂಸ್ಕೃತಿಕ ಭವನ
Share216Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ತೀರ್ಥಹಳ್ಳಿಯ ಕಾವ್ಯಗೆ 5ನೇ ಸ್ಥಾನ

Next Post

ಸಕಾಲದಲ್ಲಿ ಅನುದಾನ ಸದ್ಬಳಕೆ ಮಾಡಿಕೊಂಡು ನಿರೀಕ್ಷಿತ ಪ್ರಗತಿ ಸಾಧಿಸಿ: ಸೆಲ್ವಕುಮಾರ್ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಕಾಲದಲ್ಲಿ ಅನುದಾನ ಸದ್ಬಳಕೆ ಮಾಡಿಕೊಂಡು ನಿರೀಕ್ಷಿತ ಪ್ರಗತಿ ಸಾಧಿಸಿ: ಸೆಲ್ವಕುಮಾರ್ ಸೂಚನೆ

ಸಕಾಲದಲ್ಲಿ ಅನುದಾನ ಸದ್ಬಳಕೆ ಮಾಡಿಕೊಂಡು ನಿರೀಕ್ಷಿತ ಪ್ರಗತಿ ಸಾಧಿಸಿ: ಸೆಲ್ವಕುಮಾರ್ ಸೂಚನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Cymatic Carnatic

Cymatic Carnatic-see the sound of music, a program with a novel vision

June 20, 2026
ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

June 20, 2026
Mysore - Shivamogga - Talguppa Train

Big Good News for Mysuru–Madar Junction Train Passengers

June 20, 2026
ಸಮಾಜದಲ್ಲಿ ಗೋಡೆ ಬದಲಿಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ: ನ್ಯಾಯಮೂರ್ತಿ ಶ್ರೀಶಾನಂದ ಕರೆ

ಸಮಾಜದಲ್ಲಿ ಗೋಡೆ ಬದಲಿಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ: ನ್ಯಾಯಮೂರ್ತಿ ಶ್ರೀಶಾನಂದ ಕರೆ

June 20, 2026
ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?

ಇನ್ಮುಂದೆ ಈ ಕಾರ್ಡ್ ಇದ್ದರೆ ಮಾತ್ರ ಬಸ್’ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

June 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL