ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಹೊಸಮನೆ ಬಡಾವಣೆಯ ವಜ್ರೇಶ್ವರಿ ವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ಕಾರ್ಮಿಕ ಇಲಾಖೆಯ ಸಂಚಾರಿ ಆರೋಗ್ಯ ತಪಾಸಣಾ ಘಟಕಕ್ಕೆ ಪಾಲಿಕೆ ಸದಸ್ಯರು ಹಾಗೂ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ರವರು ಚಾಲನೆ ನೀಡಿದರು
ನಂತರ ಮಾತನಾಡಿದ ಅವರು, ಹೊಸಮನೆ ಬಡಾವಣೆಯಲ್ಲಿ ಸುಮಾರು 1700 ಕುಟುಂಬಗಳು ಕಾರ್ಮಿಕ ಕಾರ್ಡ್ ಗಳನ್ನು ಹೊಂದಿದ್ದು , ನಮ್ಮ ವಾರ್ಡಿನಲ್ಲಿ ಹೆಚ್ಚು ಕೂಲಿ ಕಾರ್ಮಿಕರು ವಾಸವಾಗಿದ್ದಾರೆ. ಆರೋಗ್ಯದ ಸಮಸ್ಯೆ ಇರುವ ಕೂಲಿ ಕಾರ್ಮಿಕರಿಗೆ ಹಾಗೂ ಅವರ ಕುಟುಂಬದವರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡುತ್ತಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಈ ಶಿಬಿರದಲ್ಲಿ ಯುವ ಮುಖಂಡರಾದ ಕೆ. ರಂಗನಾಥ್, ಸಂಚಾರಿ ಆರೋಗ್ಯ ಘಟಕದ ವೈದ್ಯರಾದ ಡಾ. ಪ್ರಗತಿ, ಶುಶ್ರಕಿ ಆಶಾ, ಮೇಲ್ವಿಚಾರಕರಾದ ನವೀನ್, ಬಡಾವಣೆಯ ಪ್ರಮುಖರಾದ ದಿನೇಶ್, ಕೆ.ಸಿ. ವೆಂಕಟೇಶ್, ನರಸಿಂಹ, ರಾಘವೇಂದ್ರ ರಾವ್ , ಕುಮಾರ್ ಹಾಗೂ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post