ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸರ್ಕಾರಿ ವಸತಿ ನಿಲಯದ 125ಕ್ಕು ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿನ್ನೆಲೆ ಶಿವಮೊಗ್ಗ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಇಂದು ಆಸ್ಪತ್ರೆಗೆ ಭೇಟಿ ನೀಡಿ ವಿಧ್ಯಾರ್ಥಿಗಳ ಆರೋಗ್ಯವನ್ನು ವಿಚಾರಿಸಿದರು.
ಘಟನೆ ಬಗ್ಗೆ ಹಾಸ್ಟೆಲ್ ಗಳ ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಶಿವಮೊಗ್ಗ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ. ಲೋಕೇಶ್, ಯುವ ಕಾಂಗ್ರೆಸ್ನ ಪ್ರಮುಖರಾದ ಸಿಎಂ ಚಿನ್ಮಯ್, ಅಬ್ದುಲ್ ಅಹದ್, ದುಷ್ಯಂತ್ ಇತರರು ಇದ್ದರು.
Also read: ಬೇಲೇಕೇರಿ ಗ್ರಾಪಂ ವ್ಯಾಪ್ತಿಯ ಬೀಚ್ ರಸ್ತೆ ಕಾಮಗಾರಿಗೆ ಶಾಸಕಿ ರೂಪಾಲಿ ನಾಯಕ್ ಚಾಲನೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















