No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Friday, May 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿಎಚ್ ರಸ್ತೆಯಲ್ಲಿ ಹಂಪ್ಸ್ ತೆರವು, ಹೊಸ ಸರ್ಕಲ್ ನಿರ್ಮಾಣ, ಒನ್ ವೇನಲ್ಲಿ ಸಿಬ್ಬಂದಿ: ಎಸ್’ಪಿ ಹೇಳಿದ್ದೇನು?

ರೇಡಿಯೋ ಶಿವಮೊಗ್ಗದ ಫೋನ್ ಇನ್ ಕಾರ್ಯಕ್ರಮಕ್ಕೆ ಭರ್ಜರಿ ರೆಸ್ಪಾನ್ಸ್ | ಜಿಲ್ಲಾ ರಕ್ಷಣಾಧಿಕಾರಿಗಳು ಏನೆಲ್ಲಾ ಹೇಳಿದರು.

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 18, 2022
in ಶಿವಮೊಗ್ಗ
0
ಬಿಎಚ್ ರಸ್ತೆಯಲ್ಲಿ ಹಂಪ್ಸ್ ತೆರವು, ಹೊಸ ಸರ್ಕಲ್ ನಿರ್ಮಾಣ, ಒನ್ ವೇನಲ್ಲಿ ಸಿಬ್ಬಂದಿ: ಎಸ್’ಪಿ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಅಪರಾಧ ಪ್ರಕರಣಗಳು ನಡೆದಾಗ ಇದು ಎಲ್ಲಡೆಯೂ ಮಹತ್ವದ ಸುದ್ಧಿಯಾದಷ್ಟು, ಅದನ್ನು ಛೇದಿಸಿದ್ದು ಸುದ್ದಿಯಾಗುವುದಿಲ್ಲ. ಜನಕ್ಕೆ ಅನುಕೂಲಕರವಾದ ಅನೇಕ ಕ್ರಮಗಳನ್ನು ಪೊಲೀಸ್ ಇಲಾಖೆಯ ವತಿಯಿಂದ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ SP Mithun Kumar ಹೇಳಿದರು.

ರೇಡಿಯೋ ಶಿವಮೊಗ್ಗ 90.8 ಎಫ್’ಎಂ Shivamogga 90.8FM ಸಮುದಾಯ ಬಾನುಲಿಯಲ್ಲಿ ಇಂದು ನಡೆದ ಸಾರ್ವಜನಿಕರೊಂದಿಗೆ ನೇರ ಸಂವಾದ ಫೋನ್ ಇನ್’ನಲ್ಲಿ ಭಾಗವಹಿಸಿ ಕರೆ ಮಾಡಿದವರಿಗೆ ಕ್ರಮಕೈಗೊಳ್ಳುವ ಭರವಸೆಯನ್ನಿತ್ತರು.

ಪ್ರೇಮ್ ಕುಮಾರ್ ಅವರು ಕರೆ ಮಾಡಿ, ಶಿವಮೊಗ್ಗ ನಗರದಲ್ಲಿ ಫ್ಲೈಓವರ್ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ರವೀಂದ್ರನಗರದಲ್ಲಿ ಒನ್ ವೇಗೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲು ಕೋರಿದರು. ಚಂದ್ರಗುತ್ತಿಯಿಂದ ರವೀಂದ್ರ ಮಾತನಾಡಿ ಪ್ರಸಿದ್ದ ರೇಣುಕಾ ದೇವಸ್ಥಾನಕ್ಕೆ ಬರುವವರ ಬಗ್ಗೆ ಸಮಗ್ರ ಮಾಹಿತಿ ತೆಗೆದುಕೊಳ್ಳುವ ವ್ಯವಸ್ಥೆ ಮಾಡಬೇಕು ಜಾತ್ರೆ, ವಿಶೇಷ ದಿನಕ್ಕೆ ಹೆಚ್ಚಿನ ಸಿಬ್ಬಂದಿ ಬೇಕು, ಸಿಸಿ ಟಿವಿ ಬೇಕು ಎಂದರು.
ಶಿವಮೊಗ್ಗದ ಯಶವಂತ್ ಕರೆ ಮಾಡಿ, ಶಿವಮೊಗ್ಗ ನಗರದಲ್ಲಿ ಅನಧಿಕೃತ ಇಸ್ಪೀಟ್ ಕ್ಲಬ್ ಆರಂಭಕ್ಕೆ ಯತ್ನ ಮಾಡುತ್ತಿದ್ದಾರೆ. ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಮಾದಕ ವಸ್ತುಗಳ ಮಾರಾಟವಾಗುತ್ತಿದ್ದು, ಇದರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ಎಸ್’ಪಿ ಮಿಥುನ್ ಕುಮಾರ್, ರವೀಂದ್ರ ನಗರದಲ್ಲಿ ಹೆಚ್ಚಿನ ಟ್ರಾಫಿಕ್ ಪೊಲೀಸ್ ನಿಯೋಜಿಸಲಾಗುವುದು. ಚಂದ್ರಗುತ್ತಿಯಲ್ಲಿ ದೇವಸ್ಥಾನದ ವತಿಯಿಂದ ಸಿಸಿ ಟಿವಿ ಹಾಕಿಸಲು ಕ್ರಮವಹಿಸಲಾಗುವುದು. ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗುವುದು. ಇಸ್ಪೀಟ್ ಕ್ಲಬ್ ಪ್ರಯತ್ನದ ವಿರುದ್ಧ ಅಗತ್ಯ ಕ್ರಮ ವಹಿಸಲಾಗುವುದು. ಶಾಲೆಗಳ ಸುತ್ತಮುತ್ತ ರೇಡ್ ಮಾಡಿಸಲಾಗಿದೆ ಎಂದರು.

ತೀರ್ಥಹಳ್ಳಿ ಕೀರ್ತಿ ಮಾತನಾಡಿ ಪತಿ ಕಾಲವಾಗಿದ್ದು, ಮಗ ಇದ್ದಾನೆ. ಕೆಲಸಕ್ಕಾಗಿ ಅವಕಾಶ ದೊರಕಿಸಿಕೊಡುವಂತೆ ಕೇಳಿಕೊಂಡರು. ಇದಕ್ಕೆ ಎಸ್’ಪಿ ಸ್ಪಂದಿಸಿದ್ದು ಶಿವಮೊಗ್ಗದ ತಮ್ಮ ಕಚೇರಿಗೆ ಬಂದು ಭೇಟಿಯಾದರೆ, ಕೆಲಸದ ಪ್ರಯತ್ನ ಮಾಡಲಾಗುತ್ತದೆ ಎಂದರು.

Also read: ಆತ್ಮಸಾಕ್ಷಿಯಾಗಿ ವಿಚಾರ ಮಾಡಿದರೆ ನೈಜ ಸುಖ: ಸಿಎಂ ಬೊಮ್ಮಾಯಿ ಅಭಿಪ್ರಾಯ

ಸೊರಬದ ದಿಶಾನ್ ಕರೆ ಮಾಡಿ ತಮ್ಮ ಕಿರಿಯ ಸಹೋದರಿಗೆ ಅವರ ಪತಿಯ ಮನೆಯವರು ವಿಷಪ್ರಾಶನ ಮಾಡಿದ್ದು, ಎಫ್’ಐಆರ್ ದಾಖಲಾಗಿದ್ದರೂ ಆರೋಪಿಗಳ ಬಂಧನವಾಗಿಲ್ಲ ಎಂದು ದೂರಿದರು. ಇದಕ್ಕೆ ಪ್ರತ್ಯುತ್ತರಿಸಿದ ಎಸ್’ಪಿಯವರು ಅಲ್ಲಿನ ಠಾಣಾಧಿಕಾರಿಗೆ ಮಾತನಾಡಲಾಗುವುದು ಎಂದು ತಿಳಿಸಿದ ಅವರು ನೇರಪ್ರಸಾರದಲ್ಲೇ ಎಫ್’ಐಆರ್ ನಂಬರ್ ಪಡೆದುಕೊಂಡು, ಬಂಧನವಾಗಿಸುವ ಭರವಸೆಯನ್ನಿತ್ತರು.
ಸಾಗರದಿಂದ ಡಾ. ಗಂಗಾಧರ ಆತ್ರೇಯ ಕರೆ ಮಾಡಿ, ಮೊಬೈಲ್ ಕಳುವು ಆದರೆ ಏನು ಮಾಡಬೇಕು ಹಾಗೂ ಬಿಎಚ್ ರಸ್ತೆಯ ವೇಗ ನಿಯಂತ್ರಕಗಳು, ಶಿವಮೊಗ್ಗ ನಗರದಲ್ಲಿ ಹೊಸ ವೃತ್ತಗಳ ಅಗತ್ಯ ಎಂಬ ಬಗ್ಗೆ ಪ್ರಸ್ತಾಪ ಮಾಡಿದರು.

ವಿಶ್ರಾಂತ ಉಪನ್ಯಾಸಕ ರಾಮಸುಬ್ಬರಾಯ ಮಾತನಾಡಿ, ಹಿರಿಯ ನಾಗರಿಕರಿಗೆ ಬೈಕ್’ಗಳ ಕರ್ಕಶ ಧ್ವನಿಯ ಬಗ್ಗೆ ಪ್ರಸ್ತಾಪಿದರು. ಇದಕ್ಕೆ ಉತ್ತರಿಸಿದ ಎಸ್’ಪಿ ಅವರು, ಮೊಬೈಲ್ ಕಳುವಾದರೆ ಆ್ಯಪ್ ಮುಖಾಂತರ ದೂರು ಮಾಡಲು ಹೇಳಿದರು. ಬಿಎಚ್ ರಸ್ತೆ ಹಂಪ್ಸ್ ಬಗ್ಗೆ ಹೆದ್ದಾರಿ ಪ್ರಾಧಿಕಾರದ ಜೊತೆಗ ಮಾತುಕತೆ ನಡೆಸಲಾಗುವುದು. ಶಿವಮೊಗ್ಗದಲ್ಲಿ ಹೊಸ ಸರ್ಕಲ್ ಗಳ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು. 61 ಬೈಕ್ ಸೀಜ್ ಮಾಡಿ, ಸೈಲೆನ್ಸರ್ ಅಳವಡಿಕೆ ಮಾಡುವವರ ಬಗ್ಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ಸಾರ್ವಜನಿಕರು ಸುಸಜ್ಜನರು ಇದ್ದಾರೆ. ಕಿಡಿಗೇಡಿಗಳ ಸಮಸ್ಯೆ ದೊಡ್ಡದಾಗಿ ಮಾಡಕ್ಕಿಂತ ಗಮನಕ್ಕೆ ತನ್ನಿ. ಫೋಕಸ್ ಆಗಿ ಕೆಲಸ ಮಾಡ್ತಿದೀವಿ. ಇಲಾಖೆಯ ಬಗ್ಗೆ ಭರವಸೆ ಇರಲಿ. ಎಲ್ಲರೂ ನಿಮ್ಮ ಸುರಕ್ಷತೆಗೆ 24×7 ಕಾರ್ಯನಿರ್ವಹಣೆ ಮಾಡುತ್ತಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ.
ಮಿಥುನ್ ಕುಮಾರ್, ಜಿಲ್ಲಾ ರಕ್ಷಣಾಧಿಕಾರಿ, ಶಿವಮೊಗ್ಗ

ಶಿವಾನಂದಪ್ಪ ವಿಠುಗೊಂಡನಕೊಪ್ಪ ಕರೆ ಮಾಡಿ ಹಂಪ್’ಗೆ ಸ್ಟಿಕ್ಕರ್ ಬೇಕು, ಪಾದಚಾರಿ ಮಾರ್ಗ ತೆರವು, ಕೆಲವು ಗ್ರಾಮಗಳಲ್ಲಿ ರೈಲ್ವೇ ಸ್ಟೇಷನ್ ಹತ್ತಿರ ದರೋಡೆ ಯತ್ನ ನಡಿತಾ ಇದೆ ಎಂದರು. ಇದಕ್ಕೆ ಉತ್ತರಿಸಿದ ಎಸ್’ಪಿ ಅವರು, ಅಂತಹ ಪ್ರಕರಣಗಳ ನಡೆಯುತ್ತಿರುವ ಊರುಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಗಿರೀಶ್ ಆಚಾರ್ ಮರುಳು ಗಣಿಗಾರಿಕೆಯ ಬಗ್ಗೆ ಪ್ರಸ್ತಾಪ ಮಾಡಿದಾಗ, ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಾರ್ವಜನಿಕರು ಇಂತಹ ಪ್ರಕರಣಗಳಿದ್ದರೆ ತಿಳಿಸುವಂತೆ ಹೇಳಿದರು.
ರಾಘವೇಂದ್ರ ಅವರು ನಂಬರ್ ಪ್ಲೇಟ್, ಇಂಡಿಕೇಟರ್ ಬಗ್ಗೆ ಮಾತನಾಡಿದರು. ಶೋಭಾ ವಿನೋಬನಗರದವರು ಮಾತನಾಡಿ ಆಗಂತುಕ ಕರೆಗಳ ಬಗ್ಗೆ ಕೇಳಿದರು. ಇದಕ್ಕೆ ಸ್ಪಂದಿಸಿದ ಎಸ್’ಪಿ ಇಂತಹ ಕರೆಗಳು ಬಂದಾಗ ಪೊಲೀಸ್ ಠಾಣೆಗೆ ತಿಳಿಸಿ, ಗೌಪ್ಯತೆ ಕಾಪಾಡಲಾಗುವುದು ಎಂದರು.

ದಿನೇಶ್ ಹೊಸನಗರ ಮಾತನಾಡಿ, ಮಕ್ಕಳ ಕಳ್ಳರ ಬಗ್ಗೆ ಕೇಳಿದರು. ಇದೊಂದು ಶುದ್ಧ ವದಂತಿಯಾಗಿದೆ. ಇದಕ್ಕೆ ಯಾರೂ ಕಿವಿಗೊಡದಿರಿ, ಇದನ್ನು ಪ್ರಚಾರ ಮಾಡದರಿ. ಅನುಮಾನಾಸ್ಪದ ವ್ಯಕ್ತಿಗಳು ಬಂದರೆ ಪೊಲೀಸರಿಗೆ ಮಾಹಿತಿ ನೀಡಿ ಎಂದರು.

ವಾಹನ ಕಳ್ಳತನಗಳನ್ನು ನಿಯಂತ್ರಿಸಲು ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ, ಇದು ನಿಯಮವೂ ಹೌದು. ಕಾಲೇಜು ವ್ಯಾಪ್ತಿಯಲ್ಲಿ ಡ್ರಗ್ಸ್ ಪ್ರಕರಣಗಳು ಹೆಚ್ಚಾಗಿದೆ ಎಂಬ ಆರೋಪಕ್ಕೆ ಉತ್ತರಿಸಿದ ಅವರು 15 ದಿನದಲ್ಲಿ 41 ಪ್ರಕರಣಗಳನ್ನು ಬೇಧಿಸಲಾಗಿದೆ. ಇಂತಹ ಪ್ರಕರಣಗಳು ಕಂಡು ಬಂದರೆ ತಿಳಿಸಿ ಎಂದರು.
ಚಂದ್ರು ಮಾತನಾಡಿ, ಆಟೋ ಅನಧಿಕೃತ ಪಾರ್ಕಿಂಗ್ ಬಗ್ಗೆ ಕೇಳಿದರು. ಸೂಕ್ತ ಆಟೋ ನಿಲ್ದಾಣ ಇಲ್ಲ, ಸ್ಮಾರ್ಟ್ ಸಿಟಿಯಿಂದ ನಿಲ್ದಾಣ ಮಾಡಲಾಗುತ್ತಿದೆ. ಆಟೋ ಡ್ರೆÊವರ್ ಸಮಗ್ರ ಮಾಹಿತಿಯುಳ್ಳ ಡಿಸ್ ಪ್ಲೇ ಕಾರ್ಡ್ನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದರು. ಓಸಿ ನಿಯಂತ್ರಣಕ್ಕೆ ಕ್ರಮವಹಿಸಲಾಗಿದೆ ಎಂದರು. ಅಕ್ಬರ್ ಸಾಗರ ಕರೆ ಮಾಡಿ ಅಲ್ಲಿನ ಟ್ರಾಫಿಕ್ ಸಮಸ್ಯೆ ಬಗ್ಗೆ ತಿಳಿಸಿದರು. ಇದರ ಬಗ್ಗೆ ಕ್ರಮದ ಭರವಸೆಯನ್ನಿತ್ತರು.

ಆರ್’ಜೆ ಅರ್ಪಿತಾ ಕಾರ್ಯಕ್ರಮ ನಡೆಸಿದರು. ನಿಲಯ ನಿರ್ದೇಶಕರಾದ ಜಿ.ಎಲ್. ಜನಾರ್ಧನ್ ಉಪಸ್ಥಿತರಿದ್ದು, ಸೂಕ್ತ ಮಾರ್ಗದರ್ಶನ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga 90.8FMShivamogga NewsSP Mithun Kumarಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ 90.8 ಎಫ್'ಎಂಶಿವಮೊಗ್ಗ_ನ್ಯೂಸ್
Share199Tweet123Send
Previous Post

ಆತ್ಮಸಾಕ್ಷಿಯಾಗಿ ವಿಚಾರ ಮಾಡಿದರೆ ನೈಜ ಸುಖ: ಸಿಎಂ ಬೊಮ್ಮಾಯಿ ಅಭಿಪ್ರಾಯ

Next Post

ಅಸಮರ್ಪಕ ಇ-ತ್ಯಾಜ್ಯ ವಿಲೇವಾರಿ ಪ್ರಕೃತಿಗೆ ಮಾರಕ: ಡಾ. ಧನಂಜಯ ಸರ್ಜಿ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಸಮರ್ಪಕ ಇ-ತ್ಯಾಜ್ಯ ವಿಲೇವಾರಿ ಪ್ರಕೃತಿಗೆ ಮಾರಕ: ಡಾ. ಧನಂಜಯ ಸರ್ಜಿ ಅಭಿಪ್ರಾಯ

ಅಸಮರ್ಪಕ ಇ-ತ್ಯಾಜ್ಯ ವಿಲೇವಾರಿ ಪ್ರಕೃತಿಗೆ ಮಾರಕ: ಡಾ. ಧನಂಜಯ ಸರ್ಜಿ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

May 8, 2026
ಮಗನಿಗೆ ರಾಜಕೀಯ ಬಳುವಳಿ ನೀಡಲು ಬಿಎಸ್‍ವೈ ಅಭಿಮಾನೋತ್ಸವ ಆಯೋಜನೆ: ಮಧು ಬಂಗಾರಪ್ಪ ವಾಗ್ದಾಳಿ

ಮಗನಿಗೆ ರಾಜಕೀಯ ಬಳುವಳಿ ನೀಡಲು ಬಿಎಸ್‍ವೈ ಅಭಿಮಾನೋತ್ಸವ ಆಯೋಜನೆ: ಮಧು ಬಂಗಾರಪ್ಪ ವಾಗ್ದಾಳಿ

May 8, 2026
ನಿರಾಣಿ ಸಮೂಹ ಸಂಸ್ಥೆಯ ವಿಜಯ ಸೌಹಾರ್ದ ಬ್ಯಾಂಕ್‌ ಶಾಖೆ ಶಿವಮೊಗ್ಗದಲ್ಲಿ ಆರಂಭ: ಮುರುಗೇಶ್ ನಿರಾಣಿ

ನಿರಾಣಿ ಸಮೂಹ ಸಂಸ್ಥೆಯ ವಿಜಯ ಸೌಹಾರ್ದ ಬ್ಯಾಂಕ್‌ ಶಾಖೆ ಶಿವಮೊಗ್ಗದಲ್ಲಿ ಆರಂಭ: ಮುರುಗೇಶ್ ನಿರಾಣಿ

May 8, 2026
ಮೇ 9-10ರಂದು ಹೊಸಹಳ್ಳಿ ಕೆ.ವೆಂಕಟರಾಮ್ ಅವರಿಗೆ ನಾಗರಿಕ ಸನ್ಮಾನ ಸಮಾರಂಭ

ಮೇ 9-10ರಂದು ಹೊಸಹಳ್ಳಿ ಕೆ.ವೆಂಕಟರಾಮ್ ಅವರಿಗೆ ನಾಗರಿಕ ಸನ್ಮಾನ ಸಮಾರಂಭ

May 8, 2026
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

May 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL