No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Wednesday, June 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅರಣ್ಯ ಇಲಾಖೆ ಅಧಿಕಾರಿ ಹುದ್ದೆಗಳಿಗೆ ಅರಣ್ಯಶಾಸ್ತ್ರ ಪದವಿ ಕನಿಷ್ಟ ವಿದ್ಯಾರ್ಹತೆಯಾಗಿ ಪರಿಗಣಿಸಲು ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 13, 2025
in ಶಿವಮೊಗ್ಗ
0
ಅರಣ್ಯ ಇಲಾಖೆ ಅಧಿಕಾರಿ ಹುದ್ದೆಗಳಿಗೆ ಅರಣ್ಯಶಾಸ್ತ್ರ ಪದವಿ ಕನಿಷ್ಟ ವಿದ್ಯಾರ್ಹತೆಯಾಗಿ ಪರಿಗಣಿಸಲು ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಬಿ.ಎಸ್ಸಿ. ಅರಣ್ಯ ಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವ ಕುರಿತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಚಿವ ಮಧು ಬಂಗಾರಪ್ಪ #Minister Madhu Bangarappa ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ #MLA Beluru Gopalakrishna ಅವರಿಗೆ ಕರ್ನಾಟಕ ಅರಣ್ಯ ವಿದ್ಯಾರ್ಥಿಗಳ ಪದವೀಧರರ ಸಂಘದಿಂದ ಮನವಿ ಸಲ್ಲಿಸಲಾಯಿತು.

ವೃತ್ತಿಪರ(ಅರಣ್ಯಶಾಸ್ತ್ರ) ಪದವೀಧರರ ಸಾಮಥ್ರ್ಯ ಮತ್ತು ಅಗತ್ಯವನ್ನು ಅರಿತುಕೊಂಡ ಕರ್ನಾಟಕ ಸರ್ಕಾರವು 2003 ರಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ವಲಯ ಅರಣ್ಯಾಧಿಕಾರಿ ಹುದ್ದೆಗೆ ಶೇಕಡ 50 ರಷ್ಟು ಮೀಸಲಾತಿಯನ್ನು ಒದಗಿಸಿದ ನಂತರ 2012 ರಲ್ಲಿ ವಲಯ ಅರಣ್ಯಾಧಿಕಾರಿ ಹುದ್ದೆಗೆ ಶೇಕಡ 75 ರಷ್ಟು ಹೆಚ್ಚಿಸಲಾಯಿತು ಎಂದು ತಿಳಿಸಿದ್ದಾರೆ.
“ಅರಣ್ಯ ಇಲಾಖೆಯಲ್ಲಿ #Forest Department ವಿವಿಧ ಹುದ್ದೆಗಳಾದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಬಿ.ಎಸ್ಸಿ ಅರಣ್ಯಶಾಸ್ತ್ರ ಪದವೀಧರರನ್ನೇ ನೇರ ನೇಮಕಾತಿ ಮಾಡುವುದರ ಮೂಲಕ ಅರಣ್ಯಶಾಸ್ತ್ರದಲ್ಲಿ ವಿಷೇಶ ಪರಿಣಿತಿಹೊಂದಿರುವ ಪದವೀಧರರ ಜ್ಞಾನ ಮತ್ತು ಅನುಭವವನ್ನು ರಚನಾತ್ಮಕವಾಗಿ ಬಳಸಿಕೊಳ್ಳಲು ಆಗ್ರಹಿಸಿದರು.

ಅರಣ್ಯಶಾಸ್ತ್ರ ಸೇರುವವರು ಪಿಯುಸಿಯಲ್ಲಿ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಂಡು, ಕರ್ನಾಟಕ ಪರೀಕ್ಷಾ ಪ್ರಾಧೀಕಾರ ನಡೆಸುವ ಸಿ.ಇ.ಟಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿ ಬಂದಿರುತ್ತಾರೆ. ವರ್ಷದಿಂದ ವರ್ಷಕ್ಕೆ ಈ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿ ಪಡೆದ ವಿದ್ಯಾರ್ಥಿಗಳು ಬಿ.ಎಸ್ಸಿ (ಅರಣ್ಯಶಾಸ್ತ್ರ) ಪದವಿಯನ್ನೇ ಬೇರೆ ವಿಷಯಗಳಿಗಿಂತ ಹೆಚ್ಚು ಆಸಕ್ತಿಯಿಂದ ಆಯ್ಕೆ ಮಾಡಿಕೊಳ್ಳುತ್ತಿರುವುದು, ಪ್ರತಿಭಾವಂತ ವಿದ್ಯಾರ್ಥಿಗಳೇ ಈ ಕ್ಷೇತ್ರಕ್ಕೆ ಬರುತ್ತಿರುವುದು ಈ ಪದವಿಯ ವ್ಯಾಸಂಗದ ಮಹತ್ವವನ್ನು ಸೂಚಿಸುತ್ತದೆ. ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಸದರಿ ಬಿ.ಎಸ್ಸಿ (ಅರಣ್ಯಶಾಸ್ತ್ರ) ಪದವೀಧರರಿಗೆ ಮೊದಲು ನೀಡಿದ್ದ ಶೇ.75 ರಷ್ಟು ಮೀಸಲಾತಿಯನ್ನು ಶೇ.50ಕ್ಕೆ ಕಡಿತಗೊಳಿಸಿರುವುದು ಅನ್ಯಾಯದ ಸಂಗತಿ ಹಾಗೂ ಇದರಿಂದ ಅರಣ್ಯ ನಿರ್ವಹಣೆಗೆ ಬೇಕಾದ ತಾಂತ್ರಿಕ ಪರಿಣಿತಿ ಕ್ಷೀಣಗೊಳ್ಳಲಿದೆ ಎಂದರು.
ಅರಣ್ಯಶಾಸ್ತ್ರವು ಒಂದು ವಿಶೇಷ ಕ್ಷೇತ್ರವಾಗಿದ್ದು, ಅರಣ್ಯ ಪರಿಸರಶಾಸ್ತ್ರ, ಜೀವವೈವಿಧ್ಯ ಸಂರಕ್ಷಣೆ, ವೃಕ್ಷಶಾಸ್ತ್ರ ವಿಧಾನಗಳು, ವನ್ಯಜೀವಿ ನಿರ್ವಹಣೆ, ಹವಾಮಾನ ಬದಲಾವಣೆ ತಡೆಗೆ ಅರಣ್ಯ ನಿರ್ವಹಣೆ, ಅರಣ್ಯ ಸಂಪತ್ತು ಬಳಕೆ ಹಾಗೂ ಸಾಮಾಜಿಕ ಅರಣ್ಯ ನಿರ್ವಹಣೆ ಮುಂತಾದ ವಿವಿಧ ಕರ್ತವ್ಯಗಳನ್ನು ಒಳಗೊಂಡಿರುತ್ತದೆ. ಈ ವಿಭಾಗದ ಜಟಿಲತೆಯನ್ನು ಸಮರ್ಥವಾಗಿ ನಿರ್ವಹಿಸಲು ನಿರ್ದಿಷ್ಟ ಅರಣ್ಯ ಶಿಕ್ಷಣ ಮತ್ತು ತರಬೇತಿ ಹೊಂದಿರುವ ಅಭ್ಯರ್ಥಿಗಳೇ ಅಗತ್ಯ ಹಾಗೂ ರಾಷ್ಟ್ರೀಯ ಅರಣ್ಯ ನೀತಿ (1988) ಕೂಡ ಇದನ್ನು ಶಿಫಾರಸ್ಸು ಮಾಡುತ್ತದೆ ಎಂದರು.

ಕರ್ನಾಟಕ ಸರ್ಕಾರ ಕೃಷಿ ವಿಶ್ವವಿದ್ಯಾಲಯಗಳ ಕೃಷಿ ಮತ್ತು ಸಂಬಂಧಿತ ವಿಜ್ಞಾನಗಳಿಂದ ಪದವಿ ಪಡೆದವರಿಗೆ ಅವರ ಶೈಕ್ಷಣಿಕ ಅರ್ಹತೆಗೆ ನೇರವಾಗಿ ಸಂಬಂಧಿಸಿದ ಇಲಾಖೆಗಳಲ್ಲಿ ನೇರ ನೇಮಕಾತಿಯಲ್ಲಿ ಶೇ. 100 ರಷ್ಟು ಮೀಸಲಾತಿಯನ್ನು ಆಯಾ ಇಲಾಖೆಗಳಲ್ಲಿ ವೃತ್ತಿಪರತೆಯನ್ನು ಹೆಚ್ಚಿಸಲು ಒದಗಿಸಿದೆ. ಉದಾಹರಣೆಗೆ ಸಹಾಯ ಕೃಷಿ ಅಧಿಕಾರಿ (ಬಿ.ಎಸ್ಸ್ಸಿ. ಕೃಷಿ), ಸಹಾಯಕ ತೋಟಗಾರಿಕಾ ಅಧಿಕಾರಿ (ಬಿ.ಎಸ್ಸ್ಸಿ. ತೋಟಗಾರಿಕೆ), ಪಶುವೈದ್ಯ ಅಧಿಕಾರಿ (ಬಿ.ವಿ.ಎಸ್ಸ್ಸಿ) ಹಾಗೂ ಸಹಾಯ ರೇಷ್ಮೆ ಅಧಿಕಾರಿ (ಬಿ.ಎಸ್ಸ್ಸಿ. ರೇಷ್ಮೆ) ಇದೇ ನಿಟ್ಟಿನಲ್ಲಿ ಅರಣ್ಯ ಪದವೀಧರರ ಅವಶ್ಯಕತೆ ಮತ್ತು ಉಪಯುಕ್ತತೆಯನ್ನು ಗುರುತಿಸಿ ತಮಿಳುನಾಡು, ತೆಲಂಗಾಣ, ಕೇರಳ, ಒರಿಸ್ಸಾ, ಜಮ್ಮು ಮತ್ತು ಕಾಶ್ಮೀರ ಹಾಗೂ ಜಾರ್ಕಂಡ್ ನಂತಹ ಇತರೆ ರಾಜ್ಯಗಳು ಸಹ ತಮ್ಮ ಅರಣ್ಯ ಇಲಾಖೆಗಳಲ್ಲಿ ಮೀಸಲಾತಿಯನ್ನು ಒದಗಿಸಿದೆ ಎಂದರು.
ಈ ಎಲ್ಲಾ ಕಾರಣಗಳ ಹಿನ್ನೆಲೆಯಲ್ಲಿ, ಸದರಿ ಅರಣ್ಯ ಪದವೀಧರ ವಿದ್ಯಾರ್ಥಿಗಳ ವೃತ್ತಿ ಜೀವನದ ಹಿತದೃಷ್ಟಿಯಿಂದ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಗಳಲ್ಲಿ ಬಿ.ಎಸ್ಸಿ (ಅರಣ್ಯಶಾಸ್ತ್ರ)ವನ್ನು ಕನಿಷ್ಟ ವಿದ್ಯಾರ್ಹತೆಯನ್ನಾಗಿ ಮಾಡಿ ಬಿ.ಎಸ್ಸಿ (ಅರಣ್ಯಶಾಸ್ತ್ರ) ಪದವೀಧರರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆಯಲ್ಲಿ ಆನಂದಪುರ ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಪ್ರವೀಣ, ನಾಡಕಛೇರಿ ಉಪತಹಶೀಲ್ದಾರ್, ಮನವಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಅರಣ್ಯ ವಿದ್ಯಾರ್ಥಿಗಳ ಪದವೀಧರರ ಸಂಘದ ಇಂಚರ, ಮಂಜುನಾಥ್, ಸನ್ನಿಭಾ, ಸಂತೋಷ್, ಮಾರುತಿ ಸಿ.ಎನ್., ಅಮರನಾಥ್, ಲಕ್ಷ್ಮೀ, ಹರ್ಷಿತಾ, ಅನು, ಚೌವ್ಹಾಣ್, ಸಂತೋಷ್ ವಿ. ಸೇರಿದಂತೆ ಸುಮಾರು 140ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Forest DepartmentKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMinister Madhu BangarappaMLA Beluru GopalakrishnaNews in KannadaNews KannadaShimogaShivamoggaNewsಅರಣ್ಯ ಇಲಾಖೆಮಲೆನಾಡು_ಸುದ್ಧಿಶಾಸಕ ಬೇಳೂರು ಗೋಪಾಲಕೃಷ್ಣಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಮಧು ಬಂಗಾರಪ್ಪ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉಡುಪಿ ಕೃಷ್ಣ ಮಠಕ್ಕೆ ನಟ ಧ್ರುವ ಸರ್ಜಾ ಭೇಟಿ | ಲೇಖನ ಯಜ್ಞ ದೀಕ್ಷೆ ಸ್ವೀಕಾರ

Next Post

ಗುಣಮುಖರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ | ಆಸ್ಪತ್ರೆಯಿಂದ ಡಿಸ್ಚಾರ್ಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗುಣಮುಖರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ | ಆಸ್ಪತ್ರೆಯಿಂದ ಡಿಸ್ಚಾರ್ಜ್

ಗುಣಮುಖರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ | ಆಸ್ಪತ್ರೆಯಿಂದ ಡಿಸ್ಚಾರ್ಜ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
NES renovated building Inauguration

ಮಕ್ಕಳಿಗೆ ಶಿಕ್ಚಣದ ಜೊತೆಗೆ ಸಂಸ್ಕಾರ ಅತ್ಯಗತ್ಯ: ನಾರಾಯಣ ರಾವ್

June 17, 2026
ಜುಲೈ 17ಕ್ಕೆ ‘ದಿ ಒಡಿಸ್ಸಿ’ ಅಬ್ಬರ: ಮುಂಬೈಗೆ ಬರ್ತಿದ್ದಾರೆ ಕ್ರಿಸ್ಟೋಫರ್ ನೋಲನ್!

ಜುಲೈ 17ಕ್ಕೆ ‘ದಿ ಒಡಿಸ್ಸಿ’ ಅಬ್ಬರ: ಮುಂಬೈಗೆ ಬರ್ತಿದ್ದಾರೆ ಕ್ರಿಸ್ಟೋಫರ್ ನೋಲನ್!

June 17, 2026
ಕಿಡ್ನಿ ಕ್ಯಾನ್ಸರ್ | ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ ಕಾಯಿಲೆ

ಕಿಡ್ನಿ ಕ್ಯಾನ್ಸರ್ | ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ ಕಾಯಿಲೆ

June 17, 2026
Maharajas Trophy T20 cricket tournament - Shivamogga Yodhas Jersey

ಶಿವಮೊಗ್ಗ ಯೋಧಾಸ್ ಜರ್ಸಿ ಅನಾವರಣ | ಜೂನ್ 20ರಿಂದ ಮಹಾರಾಜ ಟ್ರೋಫಿ ಟಿ20 ಆರಂಭ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL