ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಾಸಕ ಹೆಚ್. ಹಾಲಪ್ಪ MLA Halappa ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರ ನೇತೃತ್ವದಲ್ಲಿ ಮಲೆನಾಡು ಭಾಗದ ಜನಪ್ರತಿನಿಧಿಗಳ ನಿಯೋಗದೊಂದಿಗೆ ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿಯಾಗಿ, ಮಲೆನಾಡಿನ ರೈತರ ಪಾಲಿಗೆ ತೂಗುಗತ್ತಿಯಾಗಿರುವ “ಕಸ್ತೂರಿ ರಂಗನ್” ವರದಿಯನ್ನು Kasturi Rangan Report ಅನುಷ್ಠಾನ ಮಾಡದಂತೆ ಹಾಗೂ ಸದರಿ ವರದಿಯನ್ನು ಪರಿಗಣಿಸುವ ಮೊದಲು ಪಶ್ಚಿಮ ಘಟ್ಟಗಳಲ್ಲಿ ವಾಸವಾಗಿರುವ ಹಾಗೂ ಕೃಷಿ ಚಟುವಟಿಕೆಗಳನ್ನು ನಡೆಸುತ್ತಿರುವ ರೈತರ ಕೋರಿಕೆಯಂತೆ, ಬೌತಿಕ ಸರ್ವೇ (physical Landscaping) ನಡೆಸುವಂತೆ ಚರ್ಚಿಸಿದರು.
ಮನವಿಗೆ ಸ್ಪಂದಿಸಿದ ಸಚಿವರು, ಕೇಂದ್ರ ಅರಣ್ಯ ಸಚಿವಾಲಯದಿಂದ 5 ಜನರನ್ನೊಳಗೊಂಡ ತಂಡವನ್ನು ರಚಿಸಿ, ರೈತರ ಹಿತ ಕಾಯುವ ವರದಿಯನ್ನು ಮುಂದಿನ ಒಂದು ವರ್ಷದ ಒಳಗಾಗಿ ಸಚಿವಾಲಯಕ್ಕೆ ಸಲ್ಲಿಸುವಂತೆ ಆದೇಶ ಹೊರಡಿಸಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, Miniater Shobha Karndlaje ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, Minister Govinda Karajola ಗೃಹ ಸಚಿವ ಆರಗ ಜ್ಞಾನೇಂದ್ರ, Home Minister Araga Gnanendra ಬಿಜೆಪಿ ರಾಷ್ಟ್ರಿಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದ ಬಿ.ವೈ. ರಾಘವೇಂದ್ರ, MP Raghavendra ಪ್ರತಾಪ್ ಸಿಂಹ, ಡಿ.ಎನ್ ಜೀವರಾಜ್ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post