No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದ್ಯುತ್ ದರ ಏರಿಕೆ ಬಗ್ಗೆ ಸೂಕ್ತ ನಿಲುವು ಅಗತ್ಯ: ಹೆಚ್. ರವಿಕುಮಾರ್

kalpa News by kalpa News
June 12, 2021
in ಶಿವಮೊಗ್ಗ
0
ಮಾಸ್ಕ್‌ ಧರಿಸದಿದ್ದರೆ ಫೈನ್: ದಂಡ ಮೊತ್ತ ಇಳಿಕೆ ಮಾಡಲು ಎಎಪಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೋವಿಡ್ ಸಂಕಷ್ಟದಿಂದ ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬೆಲೆ ಏರಿಕೆಯ ಬರೆ ಎಳೆಯಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಹೆಚ್. ರವಿಕುಮಾರ್ ಖಂಡಿಸಿದ್ದಾರೆ

2020ರ ನವೆಂಬರ್ 1ರ ನಂತರ ಪ್ರತೀ ಯೂನಿಟ್‌ಗೆ 40 ಪೈಸೆ (ಶೇ. ೬ರಷ್ಟು) ಏರಿಕೆಯಾಗಿದ್ದ ವಿದ್ಯುತ್ ಬೆಲೆಗೆ ಸರಕಾರ ಪ್ರತೀ ಯೂನಿಟ್‌ಗೆ 30 ಪೈಸೆ (ಶೇ. 4ರಷ್ಟು) ಏರಿಸಿದೆ. ಈಗಾಗಲೇ ಕೋವಿಡ್ ಲಾಕ್‌ಡೌನ್‌ಗಳ ಪರಿಣಾಮ ಆರ್ಥಿಕ ಸಂಕಷ್ಟದಲ್ಲಿ ಇರುವ ಜನತೆಯ ಮೇಲೆ ಸರಕಾರ ದೊಡ್ಡ ಹೊರೆಯನ್ನು ಹಾಕಿದೆ. ಜನಸಾಮಾನ್ಯ ಬಳಸುವ ತಿಂಗಳ 200 ಯೂನಿಟ್ ವಿದ್ಯುತ್‌ಗೆ 1,260 ರೂ. ಪಾವತಿ ಮಾಡಬೇಕು, ವರ್ಷಕ್ಕೆ 15,000 ರೂಪಾಯಿ ಪಾವತಿ ಮಾಡಬೇಕಾಗುತ್ತದೆ ಎಂದು ವಿವರಿಸಿದ್ಧಾರೆ.

ದೆಹಲಿಯ ವಿದ್ಯುತ್ ದರದ ಜೊತೆಗೆ ತುಲನೆ:
ದೆಹಲಿಯ ಜನತೆ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ಬಳಸುತ್ತಾರೆ. ದೆಹಲಿಯ ಶೇ.70ರಷ್ಟು ಜನ ವಿದ್ಯುತ್ ಬಿಲ್ ಪಾವತಿಸುವುದೇ ಇಲ್ಲ. ಕಳೆದ ಆರು ವರ್ಷಗಳಲ್ಲಿ ವಿದ್ಯುತ್ ಬೆಲೆ ಏರಿಕೆಯಾಗಿಯೇ ಇಲ್ಲ. ರಾಜ್ಯದಲ್ಲಿ ಲಭ್ಯವಿರುವ ಎಲ್ಲಾ ನೈಸರ್ಗಿಕ ಮೂಲಗಳನ್ನು ಅಂದರೆ ನೀರು, ಗಾಳಿ ಮತ್ತು ಸೌರ ಶಕ್ತಿಯನ್ನು ಬಳಸಿ ವಿದ್ಯುತ್ ಉತ್ಪಾದಿಸುತ್ತದೆ. ಹೀಗಿದ್ದೂ ಸರಕಾರ ವಿದ್ಯುತ್ ಬೆಲೆ ಏರಿಸಿ ಜನತೆಯನ್ನು ಯಾಕೆ ಹಿಂಸಿಸುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ವಿದ್ಯುತ್ ನಿರ್ವಹಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆಯೇ? ಕಳೆದ ಎರಡು ವರ್ಷಗಳಿಂದ ಕರ್ನಾಟಕ ಸರ್ಕಾರ ಅದಾನಿ ಗ್ರೂಪ್ ನಿಂದ ಖರೀದಿ ಮಾಡುತ್ತಿರುವ ವಿದ್ಯುತ್‌ನ ಬೆಲೆ ಸತತವಾಗಿ ಏರುತ್ತಿದೆ. ಬೆಸ್ಕಾಂ ಅದಾನಿಯಿಂದ ಖರೀದಿಸುವ ವಿದ್ಯುತ್ ಬೆಲೆ ಪ್ರತೀ ಕೆಡಬ್ಲ್ಯೂಹೆಚ್‌ಗೆ 4.78ರೂ.ನಿಂದ 6.80 ರೂಪಾಯಿಗೆ ಏರಿದೆ. ಒಟ್ಟಾರೆ 2.02 ರೂಪಾಯಿ (ಶೇ.42ರಷ್ಟ) ಏರಿಕೆಯಾಗಿದೆ ಎಂದು ಹೇಳಿದ್ದಾರೆ.

ಇಂದು ರಾಜ್ಯ ಬಹುತೇಕ ಉದ್ದಿಮೆಗಳು ನಷ್ಟದಲ್ಲಿ ಇರುವಾಗ ಅದಾನಿ ಪವರ್‌ಗೆ ಶೇ.50ರಷ್ಟು ಲಾಭವನ್ನು ತಂದು ಕೊಟ್ಟಿದೆ. ಅಂದರೆ 2021ರ ಆರ್ಥಿಕ ವರ್ಷದಲ್ಲಿ 3,500 ಕೋಟಿ ರೂ. ಲಾಭ ಗಳಿಸಿದೆ. ಇದನ್ನು ಸ್ವತಃ ಕಂಪನಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಕಳೆದ ವರ್ಷ ಕಲ್ಲಿದ್ದಿಲಿನ ಬೆಲೆ ಇಳಿದಿದ್ದರೂ ಅದಾನಿ ಪವರ್ ರಾಜ್ಯ ಸರಕಾರಕ್ಕೆ ಅಧಿಕ ಬೆಲೆಗೆ ಕಲ್ಲಿದ್ದಲನ್ನು ಮಾರಾಟ ಮಾಡಿತ್ತು. ಆ ಸಂದರ್ಭದಲ್ಲಿ ಸ್ವತಃ ಮುಖ್ಯಮಂತ್ರಿಗಳೇ ವಿದ್ಯುತ್ ಖಾತೆಯನ್ನು ಹೊಂದಿದ್ದರು. ಸ್ವತಃ ರಾಜ್ಯ ಆರ್ಥಿಕ ಮುಗ್ಗಟ್ಟಿನಲ್ಲಿ ಬಳಲಿ ಹೋಗಿರುವಾಗ ಅದಾನಿ ಪವರ್‌ನ ಜೇಬು ತುಂಬಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಗ ಕರ್ನಾಟಕ ಸರ್ಕಾರ ವಿದ್ಯುತ್ ಬೆಲೆಯ ಬಗ್ಗೆ ಸೂಕ್ತ ನಿಲುವು ತೆಗೆದುಕೊಳ್ಳಬೇಕು. ದೆಹಲಿ ಸರ್ಕಾರದ ಹಾಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಿ ಜನತೆಯನ್ನು ಆರ್ಥಿಕ ಸಂಕಷ್ಟದಿಂದ ಪಾರುಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಆಮ್ ಆದ್ಮಿ ಪಾರ್ಟಿಯ ಆಗ್ರಹಗಳು:
ಸರಕಾರ ಈಗ ಜಾರಿಯಲ್ಲಿ ಇರುವ ಬೆಲೆ ಏರಿಕೆಯನ್ನು ಸ್ಥಗಿತಗೊಳಿಸಿ ಕರ್ನಾಟಕದ ಜನತೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಬೇಕು. ಅದಾನಿ ಪವರ್ ಗೆ ಕಳೆದ ವರ್ಷ ಸರಕಾರ ಪಾವತಿಸಿರುವ ಏರಿಕೆಯ ಬೆಲೆಯನ್ನು ಹಿಂಪಡೆಯಬೇಕು. ಕಡಿಮೆ ಬೆಲೆಯ ಕೋಲ್ ಅನ್ನು ಹೆಚ್ಚಿನ ಬೆಲೆಗೆ ಸರಕಾರಕ್ಕೆ ಮಾರಿ ಪಡೆದ ಲಾಭವನ್ನು ಸರ್ಕಾರ ಮರುಪಡೆಯಬೇಕು. ಅದಾನಿ ಪವರ್ ಜೊತೆಗೆ ವಿದ್ಯುತ್ ಬೆಲೆ ಕುರಿತು ಸಮರ್ಪಕ ಮಾತುಕತೆ ನಡೆಸದೇ ರಾಜ್ಯಕ್ಕೆ ನಷ್ಟ ಉಂಟು ಮಾಡಿರುವ ಸಚಿವರು ಹಾಗೂ ಅಧಿಕಾರಿಗಳನ್ನು ವಜಾಗೊಳಿಸಿ.
ಕೋವಿಡ್ ಸೋಂಕಿನ ಮಧ್ಯೆ ಜನತೆ ಆರ್ಥಿಕ ಸಂಕಷ್ಟದಿಂದ ನರಳುತ್ತಿರುವ ಸಂದರ್ಭದಲ್ಲಿ ವಿದ್ಯುತ್ ಬೆಲೆ ಏರಿಸಿ ಲೂಟಿ ಮಾಡುತ್ತಿರುವುದು ಯಾಕೆ? ಅದಾನಿ ಪವರ್ ಗೆ ಯಾಕೆ ಹೆಚ್ಚಿನ ಬೆಲೆಯನ್ನು ಪಾವತಿಸುತ್ತಿದೆ? ಈ ಪ್ರಶ್ನೆಗಳಿಗೆ ಮುಖ್ಯಮಂತ್ರಿಗಳು ಉತ್ತರಿಸಬೇಕು. ಸರ್ಕಾರ ತಕ್ಷಣವೇ 200 ಯೂನಿಟ್ ಉಚಿತ ವಿದ್ಯುತ್ ನೀಡಬೇಕು. ಇದರಿಂದ ಶ್ರೀಮಂತರಿಗೆ ಮಾತ್ರವಲ್ಲ, ಜನ ಸಾಮಾನ್ಯನಿಗೂ ಲಾಭವಿದೆ. ಉಚಿತ ವಿದ್ಯುತ್ ಗಾಗಿ ಆಮ್ ಆದ್ಮಿ ಪಾರ್ಟಿ ಆಂದೋಲನವನ್ನು ನಡೆಸಲಿದೆ ಎಂದು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Aam Aadmi PartyKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಆಮ್ ಆದ್ಮಿ ಪಕ್ಷಮಲೆನಾಡು_ಸುದ್ಧಿವಿದ್ಯುತ್ ದರ ಏರಿಕೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶೀಘ್ರದಲ್ಲೇ ಒಳಚರಂಡಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ‌

Next Post

ಕಲಬುರುಗಿ: ಚೈಲ್ಡ್ ಲೈನ್‌ಗೆ ಬಂದ ಅನಾಮಿಕ ಕರೆ ಆಧಾರಿಸಿ ಐದು ಬಾಲ್ಯ ವಿವಾಹಕ್ಕೆ ತಡೆ

kalpa News

kalpa News

Next Post
ಕಲಬುರುಗಿ: ಚೈಲ್ಡ್ ಲೈನ್‌ಗೆ ಬಂದ ಅನಾಮಿಕ ಕರೆ ಆಧಾರಿಸಿ ಐದು ಬಾಲ್ಯ ವಿವಾಹಕ್ಕೆ ತಡೆ

ಕಲಬುರುಗಿ: ಚೈಲ್ಡ್ ಲೈನ್‌ಗೆ ಬಂದ ಅನಾಮಿಕ ಕರೆ ಆಧಾರಿಸಿ ಐದು ಬಾಲ್ಯ ವಿವಾಹಕ್ಕೆ ತಡೆ

Leave a Reply Cancel reply

Your email address will not be published. Required fields are marked *

No Result
View All Result
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth
English Articles

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

by kalpa News
July 2, 2026
0

Kalpa Media House  |  Mumbai | Q1 FY27 sales in the domestic & international markets stood at 1,08,488 units, compared...

Read moreDetails
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
India marks the beginning of the Physical Intelligence era

MEIL-Analog Pact Ushers in AI-Driven Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL