No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

kalpa News by kalpa News
April 17, 2026
in ಶಿವಮೊಗ್ಗ
0
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇನ್ನು ಕ್ಷಮೆ ಇಲ್ಲ. ನಾಗರಿಕರು ನಮ್ಮ ಗಮನಕ್ಕೆ ತಂದ ಸಮಸ್ಯೆಗಳನ್ನು ಮಳೆಗಾಲ ಆರಂಭವಾಗುವುದರೊಳಗೆ ಸರಿಪಡಿಸಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ MLA Channabasappa ಅಧಿಕಾರಿಗಳಿಗೆ ತಾಕೀತು ಮಾಡಿದರು.

ಅವರು ಇಂದು ತಮ್ಮ ಕಛೇರಿಯಲ್ಲಿ ನಾಗರಿಕ ಹಿತರಕ್ಷಣಾ ವೇದಿಕೆಯ ಒಕ್ಕೂಟವು ತಮ್ಮೆದುರಿಟ್ಟ ಸಮಸ್ಯೆಗಳ ಕುರಿತು ಮಹಾನಗರಪಾಲಿಕೆ, ಮೆಸ್ಕಾಂ, ಸ್ಮಾರ್ಟ್‍ಸಿಟಿ, ಪಿಡಬ್ಲ್ಯೂಡಿ, ಒಳಚರಂಡಿ, ಕುಡಿಯುವ ನೀರಿನ ಸರಬರಾಜು ಮೊದಲಾದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡುತ್ತಿದ್ದರು.
ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ Smart City Project ಯುಜಿ ಕೇಬಲ್ ಕಾಮಗಾರಿಗೆ ಸಂಬಂಧಿಸಿದ ಇನ್ನೂ 849 ವಿದ್ಯುತ್ ಕಂಬಗಳನ್ನು ತೆಗೆಯುವುದು ಬಾಕಿಯಿದ್ದು, ಇನ್ನು ನಾಲ್ಕು ತಿಂಗಳಲ್ಲಿ ಕಾಮಗಾರಿ ಮುಗಿಸಲಾಗುವುದು. ಈ ಕುರಿತಂತೆ ಎಸ್ಟಿಮೇಟ್ ಆಗಿದೆ. ಭೂಮಿ ಅಗೆದರೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗುತ್ತದೆ. ಈ ಹಿನ್ನಲೆಯಲ್ಲಿ ಆ ಕಾಮಗಾರಿ ವಿಳಂಬವಾಗುತ್ತಿದೆ ಎಂದು ಸ್ಮಾರ್ಟ್‍ಸಿಟಿ ಮತ್ತು ಮೆಸ್ಕಾಂ ಅಧಿಕಾರಿಗಳು ಸಮಜಾಯಿಷಿ ನೀಡಿದಾಗ ನಾವು ಇನ್ನೂ ಸಮಯ ಕೊಡಲಾಗುವುದಿಲ್ಲ. ಗುತ್ತಿಗೆದಾರರನ್ನು ಜವಾಬ್ದಾರರನ್ನಾಗಿ ಮಾಡಿ. ಮಳೆಗಾಲ ಆರಂಭವಾಗುತ್ತಿದೆ ಅಷ್ಟರೊಳಗೆ ಕಾಮಗಾರಿ ಮುಗಿಸಿ ಎಂದು ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ವಿ. ವಸಂತ್‍ಕುಮಾರ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಆರು ಹೊಸ ಬಡಾವಣೆಗಳಲ್ಲಿ ಐದು ಕೋಟಿ ರೂಪಾಯಿ ವೆಚ್ಚದಲ್ಲಿ ಯು.ಜಿ. ಕೇಬಲ್ ಅಳವಡಿಸಬೇಕಾಗಿತ್ತು. ಆದರೆ ಅದು ಅಪೂರ್ಣವಾಗಿದೆ. ಬಸವನಗುಡಿಯಲ್ಲಿ ವಿದ್ಯುತ್ ಕಂಬ, ದೀಪ ಇದೆ ಆದರೆ ದೀಪ ಹತ್ತುತ್ತಿಲ್ಲ. ತಿಲಕ್‍ನಗರದಲ್ಲಿ ಮರಕ್ಕೆ ಲೈನ್ ಎಳೆದಿದ್ದೀರಿ ಅಲ್ಲಿಯೂ ಕಾಮಗಾರಿ ಅಪೂರ್ಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಶಾಸಕರು ಇ-ಟಾಯ್‍ಲೆಟ್ ನಿರ್ಮಾಣವಾಗಿ ಮೂರ್ನಾಲ್ಕು ವರ್ಷಗಳು ಕಳೆದರೂ ಇನ್ನೂ ಬಳಕೆಗೆ ತೆರೆದುಕೊಂಡಿಲ್ಲ. ಆಗಲೇ ಅವು ದುರಸ್ತಿ ಹಂತಕ್ಕೆ ಬಂದಿದ್ದು ವಿಷಾದನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದಾಗ, ಈಗಾಗಲೇ 18 ಇ-ಟಾಯ್‍ಲೆಟ್‍ಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ 14 ಉಪಯೋಗವಾಗುತ್ತಿವೆ. ಇನ್ನುಳಿದ ನಾಲ್ಕು ಸಂಪೂರ್ಣ ಖಂಡಂ ಆಗಿವೆ. ಆ 14 ಇ-ಟಾಯ್‍ಲೆಟ್‍ಗಳನ್ನು ಇನ್ನೇರೆಡು ತಿಂಗಳಲ್ಲಿ ಮಹಿಳಾ ಸ್ನೇಹಿ ಟಾಯ್‍ಲೆಟ್‍ಗಳನ್ನಾಗಿ ಪರಿವರ್ತಿಸಲಾಗುವುದು ಎಂದು ಪೌರಾಯುಕ್ತ ಕೆ.ಮಾಯಣ್ಣ ಗೌಡ ಹೇಳಿದರು. ಕೇವಲ ಮಹಿಳೆಯರಿಗಷ್ಟೇ ಅಲ್ಲ ಪುರುಷರಿಗೂ ಉಚಿತ ಟಾಯ್‍ಲೆಟ್ ವ್ಯವಸ್ಥೆಯಾಗಬೇಕು ಎಂದು ಒಕ್ಕೂಟದ ಪದಾಧಿಕಾರಿಗಳು ಆಗ್ರಹಿಸಿದರು.
ಸ್ಮಾರ್ಟ್‍ಸಿಟಿಯಿಂದ ನಿರ್ಮಾಣವಾದ ಫುಟ್‍ಪಾತ್ ಮತ್ತು ರೇಲಿಂಗ್ಸ್ ದುರಸ್ತಿ ಬಗ್ಗೆ ಯಾವ ಬಾಬತ್ತಿನಿಂದ ಹಣ ವೆಚ್ಚ ಮಾಡಬೇಕು ಎಂಬುದರ ಬಗ್ಗೆ ಸರ್ಕಾರದಿಂದ ಇನ್ನೂ ಸ್ಪಷ್ಟತೆ ಬಂದಿಲ್ಲ ಎಂದು ಪೌರಾಯುಕ್ತರು ಸಭೆಯ ಗಮನಕ್ಕೆ ತಂದರು. ಲಕ್ಷ್ಮೀಟಾಕೀಸ್‍ನಿಂದ ಉಷಾ ನರ್ಸಿಂಗ್ ಹೋಂ ರಸ್ತೆಯಲ್ಲಿ ಬಲಗಡೆಯ ಫುಟ್‍ಪಾತ್ ಸಂಪೂರ್ಣ ಅವೈಜ್ಞಾನಿಕವಾಗಿದ್ದು ಪಾದಚಾರಿಗಳಿಗೆ ಓಡಾಡದ ಸ್ಥಿತಿಯಾಗಿದೆ. ಗುತ್ತಿಗೆದಾರರಿಗೆ ನೋಟೀಸ್ ನೀಡಿ ಅದನ್ನು ಸರಿಪಡಿಸಬೇಕು. ಅಲ್ಲದೆ ಉಷಾನಸಿಂಗ್ ಹೋಂ ವೃತ್ತದಲ್ಲಿ ಫುಟ್‍ಪಾತ್ ಇಲ್ಲದೆ ಹೊಸ ರಸ್ತೆ ನಿರ್ಮಾಣವಾಗಿದ್ದು, ನಾಲ್ಕೂ ಕಡೆ ಫುಟ್‍ಪಾತ್ ನಿರ್ಮಿಸಬೇಕೆಂದು ಆಗ್ರಹಿಸಲಾಯಿತು.

ಮಹಾವೀರ ವೃತ್ತದಿಂದ ಕೆಇಬಿ ವೃತ್ತದವರೆಗೆ ನಿರ್ಮಾಣವಾದ ಮೆಸ್ಕಾಂನ ಅವೈಜ್ಞಾನಿಕ ಯುಜಿ ಕೇಬಲ ಪಥ, ಸೋಮಿನಕೊಪ್ಪ ಫ್ಲೈಓವರ್ ಸಮೀಪ ಇರುವ ರಾಜಾ ಕಾಲುವೆಯ ಅವ್ಯವಸ್ಥೆ, ಖಾಸಗಿ ಬಸ್ ನಿಲ್ದಾಣದಲ್ಲಿರುವ ಬೆಡ್‍ಹಾಲ್‍ನಲ್ಲಿ ನಡೆಯುತ್ತಿರುವ ಅನೈತಿಕ ಚಟುವಟಿಕೆ, ಅವ್ಯವಹಾರಗಳಿಗೆ ಕಡಿವಾಣ ಹಾಕಬೇಕು. ಅಲ್ಲಿ ನಗರ-1 ವ್ಯವಸ್ಥೆಯನ್ನು ತರುವ ಉದ್ದೇಶ ಹೊಂದಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಎಐ ಬಳಕೆ, ಎನ್‍ಎಬಿ ಪ್ರಯೋಗಾಲಯ ಸಹಾಯ ತೆಗೆದುಕೊಳ್ಳಬೇಕು. ವಿದ್ಯಾನಗರ ಬೈಪಾಸ್, ನವುಲೆಯ ಮಲ್ನಾಡ್‍ಕೌಂಟಿ ಬಡಾವಣೆಗಳಲ್ಲಿ ವಿದ್ಯುದ್ದೀಪ ಅಳವಡಿಕೆಗೆ ತಕ್ಷಣ ಕ್ರಮ ಕೈಗೊಳ್ಳುವುದು ಸೇರಿದಂತೆ ಇನ್ನುಳಿದ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ನಾಗರೀಕರು ಆಗ್ರಹಿಸಿದರು.
ಇ-ಖಾತೆಗೆ ಸಂಬಂಧಿಸಿದಂತೆ, ಎಸ್‍ಐಆರ್, ಗಣತಿ ಕೆಲಸಗಳಿಗೆ ಕಂದಾಯ ನಿರೀಕ್ಷಕರು ತೆರಳಿರುವುದರಿಂದ ಇ-ಖಾತಾ ನೀಡುವುದು ವಿಳಂಬವಾಗುತ್ತಿದೆ. 1.25ಲಕ್ಷ ಖಾತಾಗಳಿಗೆ ಅರ್ಜಿ ಸ್ವೀಕರಿಸಲಾಗಿದೆ. ಇಲ್ಲಿಯವರೆಗೆ 30 ಸಾವಿರ ಖಾತಾಗಳನ್ನು ನೀಡಲಾಗಿದೆ. ಈ ಕುರಿತಂತೆ ಆಯುಕ್ತರ ಸಪ್ತಾಹಿಕ ಖಾತಾ ಅದಾಲತ್ ಬಳಸಿಕೊಳ್ಳಬೇಕು ಎಂದು ಆಯುಕ್ತ ಮಾಯಣ್ಣಗೌಡ ವಿನಂತಿಸಿದರು.

ಬಿ.ಹೆಚ್.ರಸ್ತೆಯಲ್ಲಿರುವ ತುಂಗಾನದಿಯ ಹಳೆಯ ಸೇತುವೆ ಇರುವ ಜಾಗದಲ್ಲಿ ಹೊಸಸೇತುವೆ ನಿರ್ಮಾಣಕ್ಕೆ ಈಗಾಗಲೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಜೊತೆ ಚರ್ಚಿಸಿದ್ದು, ಪ್ರಸ್ತಾವನೆ ಸಲ್ಲಿಸುವಂತೆ ಅವರು ತಿಳಿಸಿದ್ದಾರೆ. ಸಧ್ಯದಲ್ಲಿಯೇ ಹಳೆಸೇತುವೆಯ ಜಾಗದಲ್ಲಿ ಹೊಸಸೇತುವೆ ತಲೆ ಎತ್ತಲಿದೆ ಎಂದು ಶಾಸಕರು ತಿಳಿಸಿದರು.

ಈ ಸಂದರ್ಭದಲ್ಲಿ ಪೌರಾಯುಕ್ತ ಕೆ.ಮಾಯಣ್ಣಗೌಡ, ಮೆಸ್ಕಾಂನ ವೀರೇಂದ್ರ, ಇಲೆಕ್ಟ್ರಿಕ್ ಎಇ ತೇಜಪ್ರಸಾದ್, ಅಧಿಕಾರಿಗಳಾದ ಪುಷ್ಪಾವತಿ, ಜೀವನ್, ನಾಗರಿಕ ಹಿತರಕ್ಷಣಾ ವೇದಿಕೆಯ ಒಕ್ಕೂಟದ ಡಾ.ಸತೀಶ್‍ಕುಮಾರ್ ಶೆಟ್ಟಿ, ಡಾ.ಬಾಲಕೃಷ್ಣ ಹೆಗಡೆ, ನಾರಾಯಣಮೂರ್ತಿ, ಜನಮೇಜಿರಾವ್, ಚನ್ನವೀರ ಗಾಮನಗಟ್ಟಿ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews in KannadaNews KannadaShimogaShivamoggaNewsSmart City Projectಮಲೆನಾಡು_ಸುದ್ಧಿಶಾಸಕ ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್ಸ್ಮಾರ್ಟ್‍ಸಿಟಿ ಯೋಜನೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

Next Post

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

kalpa News

kalpa News

Next Post
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL