ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಇಂದು ಎಸಿಬಿ ಡಿವೈಎಸ್ಪಿಗಳಾದ ಜಯಪ್ರಕಾಶ್, ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲಿಸಿದರು.
ಪಾಲಿಕೆಯ ಕಂದಾಯ ವಿಭಾಗದಲ್ಲಿ ಅನೇಕ ಅವ್ಯವಹಾರಗಳು ನಡೆಯುತ್ತಿವೆ ಎಂಬ ದೂರಿನ ಹಿನ್ನಲೆಯಲ್ಲಿ ಇನ್ಸ್ಪೆಕ್ಟರ್ ವಸಂತಕುಮಾರ್ ಸೇರಿದಂತೆ ೬ ಜನ ಇನ್ಸ್ ಪೆಕ್ಟರ್ಗಳು ಮತ್ತು ೨೦ ಮಂದಿ ಸಿಬ್ಬಂದಿಗಳು ವ್ಯವಸ್ಥಿತವಾಗಿ ದಾಳಿ ನಡೆಸಿದ್ದಾರೆ.
ಎಸಿಬಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಜೊತೆಗೆ, ಸ್ಥಳದಲ್ಲಿದ್ದ ಮಧ್ಯವರ್ತಿಗಳ ವಿಚಾರಣೆ ನಡೆಸಿದ್ದು, ಅವರ ಮೊಬೈಲ್ ನಂಬರ್ ದಾಖಲಿಸಿಕೊಂಡಿದ್ದಾರೆ.
ಈ ಅನಿರೀಕ್ಷಿತ ದಾಳಿಯಿಂದಾಗಿ ಕಂದಾಯ ವಿಭಾಗದಲ್ಲಿ ಮಿಂಚಿನ ಸಂಚಲನ ಉಂಟಾಗಿದ್ದು, ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಅನೇಕ ಅಕ್ರಮ ಕಂಡು ಬಂದಿದೆ ಎನ್ನಲಾಗಿದೆ. ಪರಿಶೀಲನೆ ಮುಂದುವರೆಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post