ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ #Bengaluru-Talaguppa Train ದರೋಡೆಕೋರನೊಬ್ಬ ತಲ್ವಾರ್ #Robber with Weapon ಹಿಡಿದು ಬೋಗಿಯೊಳಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ನಡೆದಿದೆ.
ಮಂಗಳವಾರ ತಡರಾತ್ರಿ ಶಿವಮೊಗ್ಗದ ವಿದ್ಯಾನಗರದಲ್ಲಿರುವ (ಮಹಾದೇವಿ ಟಾಕೀಸ್) ಹಳೆ ರೈಲು ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದ್ದು, ರಾತ್ರಿ 11 ಗಂಟೆ 50 ನಿಮಿಷಕ್ಕೆ ಶಿವಮೊಗ್ಗದಿಂದ ಹೊರಡಬೇಕಿದ್ದ ರೈಲು ಮಂಗಳವಾರ ತಡವಾಗಿ ಆಗಮಿಸಿತ್ತು. ರೈಲು ವಿದ್ಯಾನಗರದ ಹಳೆ ನಿಲ್ದಾಣಕ್ಕೆ ಬರುತ್ತಿದ್ದಂತೆ ಬೋಗಿಯೊಳಗೆ ನುಗ್ಗಿದ ಆಗಂತುಕ, ಕೈಯಲ್ಲಿ ಮಾರಕಾಸ್ತ್ರ ಹಿಡಿದು ಪ್ರಯಾಣಿಕರನ್ನು ಹೆದರಿಸಿದ್ದಾನೆ. ಈ ವೇಳೆ ತಲ್ವಾರ್ ಬೀಸಿದ್ದರಿಂದ ಕೆಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಈ ಮಧ್ಯೆ ದುಷ್ಕರ್ಮಿ ಓರ್ವರ ಮೊಬೈಲ್ ಹಾಗೂ ದುಡ್ಡನ್ನು ಕಿತ್ತುಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಶಿವಮೊಗ್ಗ ಟೌನ್ ರೈಲು ಸ್ಟೇಷನ್ನಿಂದ ಕೇವಲ 1 ಕಿಲೋಮೀಟರ್ ದೂರದಲ್ಲಿರುವ ಈ ನಿಲ್ದಾಣದಲ್ಲಿ ಘಟನೆ ನಡೆದಿದ್ದು, SMET Halt ನಿಲ್ದಾಣದಲ್ಲಿ, ತಾಳಗುಪ್ಪ-ಮೈಸೂರು ಎಕ್ಸ್ಪ್ರೆಸ್ ರೈಲಿನಲ್ಲಿ ನಡೆದ ದರೋಡೆ ಯತ್ನ ಮತ್ತು ಹಲ್ಲೆ ಪ್ರಕರಣವನ್ನು ರೈಲ್ವೆ ಇಲಾಖೆ ಅಧಿಕೃತವಾಗಿ ದೃಢಪಡಿಸಿದೆ.
ಪ್ರಯಾಣಿಕರೊಬ್ಬರು ರೈಲ್ ಮದದ್ (RailMadad) ಪೋರ್ಟಲ್ನಲ್ಲಿ ನೀಡಿದ ದೂರಿಗೆ ಇಲಾಖೆ ಉತ್ತರ ನೀಡಿದೆ. ಉತ್ತರದಲ್ಲಿ ರೈಲು ಸಂಖ್ಯೆ 16582 (SMET-YPR) ಎಕ್ಸ್ಪ್ರೆಸ್ ರೈಲಿನ ಎಸ್-9 (S-9) ಬೋಗಿಯಲ್ಲಿ ನಡೆದ ಘಟನೆ ಬಗ್ಗೆ ಪ್ರಯಾಣಿಕೊಬ್ಬರು ದೂರು ನೀಡಿದ್ದು, ಅವರ ದೂರಿನಂತೆ ರೈಲ್ವೆ ಬೋಗಿಯೊಳಗೆ ನುಗ್ಗಿದ್ದ ದುಷ್ಕರ್ಮಿ ದೂರುದಾರರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಲು ಯುತ್ನಿಸಿದ. ಅಷ್ಟೆ ಅಲ್ಲದೆ ಅದೇ ಬೋಗಿಯಲ್ಲಿದ್ದ ಇನ್ನೊಬ್ಬ ಪ್ರಯಾಣಿಕರಿಗೆ ಮಾರಕಾಸ್ತ್ರ ತೋರಿಸಿ ಬೆದರಿಸಿ ಅವರ ಬಳಿ ಇದ್ದ ಮೋಟೋರೋಲಾ (Motorola) ಮೊಬೈಲ್ ಫೋನ್ ಅನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ . ಈ ಬಗ್ಗೆ ರೈಲ್ವೆ ಇಲಾಖೆಯು ತಕ್ಷಣವೇ ಕರ್ತವ್ಯದಲ್ಲಿದ್ದ ಶಿವಮೊಗ್ಗ ರೈಲ್ವೆ ಪೊಲೀಸ್ (PC/SMET) ಮತ್ತು ಬೆಂಗಳೂರು ಜಿಆರ್ಪಿ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















