No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Thursday, August 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂವಹನ ಮಾಧ್ಯಮದ ಗುಣಮಟ್ಟ ಸುಧಾರಣೆಗೆ 2 ಸಾವಿರ ಕೋಟಿ ರೂ. ವೆಚ್ಚ: ಕೇಂದ್ರ ಸಚಿವ ಮುರುಗನ್

ಭದ್ರಾವತಿ ಆಕಾಶವಾಣಿಗೆ ನೂತನವಾಗಿ ಅಳವಡಿಸಲಾದ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕದ ಉದ್ಘಾಟನೆ

kalpa News by kalpa News
February 27, 2026
in ಶಿವಮೊಗ್ಗ
0
ಸಂವಹನ ಮಾಧ್ಯಮದ ಗುಣಮಟ್ಟ ಸುಧಾರಣೆಗೆ 2 ಸಾವಿರ ಕೋಟಿ ರೂ. ವೆಚ್ಚ: ಕೇಂದ್ರ ಸಚಿವ ಮುರುಗನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರೇಡಿಯೋ #Radio ವಿಶ್ವಾಸಾರ್ಹ ಮತ್ತು ಪರಿಣಾಮಕಾರಿ ಸಂವಹನ ಮಾಧ್ಯಮವಾಗಿದ್ದು ನೂತನವಾಗಿ ಭದ್ರಾವತಿ ಆಕಾಶವಾಣಿಗೆ ಎಫ್.ಎಂ #Bhadravati All India Radio FM ಅಳವಡಿಸುವ ಮೂಲಕ ಕಡೆಯ ವ್ಯಕ್ತಿಯನ್ನು ತಲುಪುವ ದೃಢ ಹೆಜ್ಜೆಯನ್ನು ಇಡಲಾಗಿದೆ ಎಂದು ಕೇಂದ್ರದ ಮಾಹಿತಿ ಹಾಗೂ ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ಖಾತೆಯ ರಾಜ್ಯ ಸಚಿವ ಎಲ್. ಮುರುಗನ್ ತಿಳಿಸಿದರು.

ವಿದ್ಯಾನಗರದಲ್ಲಿ ಗುರುವಾರ ಭದ್ರಾವತಿ ಆಕಾಶವಾಣಿಗೆ ನೂತನವಾಗಿ ಅಳವಡಿಸಲಾದ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ. ಪ್ರೇಷಕದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಭದ್ರಾವತಿ ಆಕಾಶವಾಣಿಗೆ ಇದೊಂದು ಉಡುಗೊರೆಯಾಗಿದ್ದು, ಜಿಲ್ಲೆಯ ಮೂಲೆ ಮೂಲೆ ಸೇರಿದಂತೆ 8 ಜಿಲ್ಲೆಗಳನ್ನು ತಲುಪಲಿದೆ. ರೇಡಿಯೋ ಒಂದು ಶಕ್ತಿಯುತವಾದ ಸಂವಹನ ಮಾಧ್ಯವಾಗಿದ್ದು ಕೇಂದ್ರ ಸರ್ಕಾರವು ಡಿಜಿಟಲ್ ಮತ್ತು ಸಂವಹನ ಮಾಧ್ಯಮಗಳ ಮೂಲಭೂತ ಸೌಕರ್ಯಗಳ ಅಭಿವೃದ್ದಿ ಮತ್ತು ಗುಣಮಟ್ಟ ವೃದ್ದಿಗಾಗಿ ರೂ.2000 ಕೋಟಿ ಖರ್ಚು ಮಾಡುತ್ತಿದೆ.

ರೇಡಿಯೋ ಆಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಂಡು ಅತಿ ಹೆಚ್ಚು ಜನರನ್ನು ತಲುಪುತ್ತಿದ್ದು ಶೇ.92 ಭಾಗವನ್ನು ತಲುಪುತ್ತಿರುವ ಬಹುದೊಡ್ಡ ಪ್ರಸಾರ ಮಾಧ್ಯಮವಾಗಿದೆ. ಕೇಂದ್ರವು ಕಲೆ, ಸಂಸ್ಕೃತಿ, ವಿನ್ಯಾಸ, ಚಲನಚಿತ್ರ, ಸಂಗೀತ, ಸಾಫ್ಟ್ವೇರ್ ಮತ್ತು ಗೇಮಿಂಗ್‌ನಂತಹ ಸೃಜನಶೀಲ ಉದ್ಯಮಗಳನ್ನು ಒಳಗೊಂಡಿರುವ ಆರ್ಥಿಕ ವ್ಯವಸ್ಥೆ ‘ಆರೆಂಜ್ ಎಕಾನಮಿಗೆ ಹೆಚ್ಚಿನ ಒತ್ತು ನೀಡುತ್ತಿದೆ. 25 ಸಾವಿರ ಶಾಲೆಗಳಿಗೆ ಕ್ರಿಯೇಟಿವ್ ಲ್ಯಾಬ್‌ನ್ನು ನೀಡುತ್ತಿದೆ ಎಂದರು.

ರೇಡಿಯೋ ಒಂದು ಶಕ್ತಿಯುತ ಮತ್ತು ಪರಿಣಾಮಕಾರಿ ಸಂವಹನ ಮಾಧ್ಯಮ ಮಾತ್ರವಲ್ಲದೇ ನೈಜ, ಸತ್ಯ ಮತ್ತು ಸಮರ್ಪಕವಾದ ಸುದ್ದಿ, ವಿಷಯಗಳನ್ನು ನೀಡುವ ಮೂಲಕ ಜನರ ನಂಬಿಕೆ ಉಳಿಸಿಕೊಂಡಿದೆ. ಜೊತೆಗೆ ಸ್ಥಳೀಯ ಕಲಾವಿದರನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸಲು ಒಂದು ವೇದಿಕೆ ನಿರ್ಮಾಣ ಮಾಡಿದೆ. ಹೊಸತನಕ್ಕೆ ಸ್ಪೂರ್ತಿಯಾಗಿದೆ.
ರೇಡಿಯೋ 23 ಭಾಷೆಗಳು ಮತ್ತು 182 ಉಪಭಾಷೆಗಳಲ್ಲಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಾ, ಗಡಿನಾಡು, ಗುಡ್ಡಗಾಡು, ಮತ್ತು ದೂರದ ಪ್ರದೇಶಗಳನ್ನು ತಲುಪುತ್ತಿದೆ. ಎಲ್ಲ ವರ್ಗ ಮತ್ತು ವಯೋಮಾನ ಹಾಗೂ ಎಲ್ಲ ಕ್ಷೇತ್ರಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳು ಬಿತ್ತರವಾಗುತ್ತವೆ. ಆಕಾಶವಾಣಿ ಪಾಡ್‌ಕಾಸ್ಟ್ ಸಹ ಶುರುವಾಗಿದ್ದು ಕಮ್ಯುನಿಟಿ ರೇಡಿಯೋ ಸಹ ಬಹು ದೊಡ್ಡ ಪಾತ್ರ ವಹಿಸುತ್ತಿದೆ. 550 ಕಮ್ಯುನಿಟಿ ರೇಡಿಯೋ ಕೆಲಸ ಮಾಡುತ್ತಿದೆ. ಭದ್ರಾವತಿ ಆಕಾಶವಾಣಿ ಎಫ್ ಎಂ 25ನೇ ಪ್ರೇಷಕವಾಗಿದ್ದು 3500 ಚ ಕಿ.ಮೀ ನ್ನು ಕವರ್ ಮಾಡುತ್ತದೆ ಎಂದರು.

ಸಂಸದರು, ಶಾಸಕರು ಮನವಿ ಮಾಡಿದಂತೆ ನಗರದ ಪಾರ್ಕುಗಳಲ್ಲಿ ಬಾನುಲಿ ಕೇಳುವಂತಹ ವ್ಯವಸ್ಥೆ ಮಾಡಲು ಇಲ್ಲಿ ಪೈಲಟ್ ಯೋಜನೆಯಾಗಿ ಅನುಷ್ಟಾನಗೊಳಿಸಲಾಗುವುದು ಎಂದು ಇದೇ ವೇಳೆ ಭರವಸೆ ನೀಡಿದರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಎಫ್.ಎಂ ಪ್ರೇಷಕ ಅಳವಡಿಕೆಗೆ 2024 ರ ಜನವರಿಯಲ್ಲಿ ಅಡಿಗಲ್ಲು ಹಾಕಲಾಗಿತ್ತು. ಇದೀಗ ಅದು ಸಾಕಾರಗೊಂಡಿದ್ದು ಆಕಾಶವಾಣಿ ಭದ್ರಾವತಿ ಕೇಂದ್ರ 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ 101.4 ತರಂಗಾಂತರ ಎಫ್ ಎಂ ಪ್ರೇಷಕದ ಅಳವಡಿಕೆಯಿಂದಾಗಿ ಶಿವಮೊಗ್ಗದ ಸುತ್ತಲಿನ ಎಂಟು ಜಿಲ್ಲೆಗಳಿಗೆ ಪ್ರಸಾರ ವ್ಯಾಪ್ತಿ ಹೆಚ್ಚಿಸಿಕೊಳ್ಳುತ್ತಿದೆ. ಸುಮಾರು 1 ಕೋಟಿ ಜನರಿಗೆ ಈ ಸೇವೆ ಲಭ್ಯವಾಗುತ್ತಿದ್ದು ಭದ್ರಾವತಿ ಆಕಾಶವಾಣಿಯ ವಜ್ರ ಮಹೋತ್ಸವದ ಉಡುಗೊರೆ ಇದಾಗಿದೆ.

ಆಕಾಶವಾಣಿಯು ಆರಂಭಿಕ ಹಂತದಿಂದ ಹಂತ ಹಂತವಾಗಿ ಬೆಳೆಯುತ್ತಾ ಬಂದಿದೆ. ಡಿಜಿಟಲ್ ಮತ್ತು ಸಂವಹನ ಕ್ರಾಂತಿಗೆ ಕೇಂದ್ರ ಸರ್ಕಾರ ಒತ್ತು ನೀಡಿದ್ದು, ಸಂಪೂರ್ಣ ಕನ್ನಡಿಗರನ್ನು ತಲುಪುವ ಏಕೈಕ ಕೇಂದ್ರವಾಗಿ ಭದ್ರಾವತಿ ಆಕಾಶವಾಣಿ ಹೊರಹೊಮ್ಮಿದೆ. ವಿದ್ಯಾನಗರದ 150 ಮೀಟರ್ ದೂರದರ್ಶನ ಟವರ್ ನ್ನು ಬಳಕೆ ಮಾಡಿಕೊಂಡು 10 ಕಿಲೋ ವ್ಯಾಟ್ ಸಾಮರ್ಥ್ಯದ ಎಫ್.ಎಂ ಪ್ರೇಷಕ ಅಳವಡಿಸಲಾಗಿದೆ ಎಂದರು.

ಇನ್ನು ಮುಂದೆ ನಗರದ ಎಲ್ಲ ಪಾರ್ಕುಗಳಲ್ಲಿ ರೇಡಿಯೋ ಸ್ಟೇಷನ್‌ಗಳನ್ನು ಅಳವಡಿಸಲು ಕೇಂದ್ರ ಸಚಿವರು ಇದೇ ಸಂದರ್ಭದಲ್ಲಿ ಒಪ್ಪಿಗೆ ನೀಡಿರುವುದು ಅಭಿನಂದನೀಯ ಎಂದರು.
ಶಾಸಕರಾದ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಎಫ್.ಎಂ ಪ್ರಸಾರಕ್ಕಾಗಿ ಶಿವಮೊಗ್ಗದ ಜನತೆ ಬಹಳ ವರ್ಷಗಳಿಂದ ಕಾಯುತ್ತಿದ್ದರು. ಇದೀಗ ಎಫ್.ಎಂ. ಪ್ರೇಷಕದ ಅಳವಡಿಕೆಯು ಜನರಲ್ಲಿ ಸಂತೋಷ ತಂದಿದೆ. ನಿಗದಿತ ಸಮಯಕ್ಕೆ ಆರಂಭವಾಗುವ ಆಕಾಶವಾಣಿ ಕಾರ್ಯಕ್ರಮಗಳು ಎಲ್ಲರ ಮನೆ ಮಾತಾಗಿವೆ. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವರು ಭದ್ರಾವತಿ ಆಕಾಶವಾಣಿಗೆ ಎಫ್.ಎಂ ತರಲು ಸಹಕರಿಸಿದ್ದು ಅವರಿಗೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ನಗರದ ಎಲ್ಲ ಪಾರ್ಕ್ಗಳಲ್ಲಿ ಜನರಿಗೆ ಬಾನುಲಿ ಪ್ರಸಾರ ಮಾಡುವ ಬಗ್ಗೆ ಚಿಂತಿಸಲಾಗುತ್ತಿದ್ದು, ಕೇಂದ್ರದ ಸಚಿವರು ಈ ಕುರಿತು ಸಹಕಾರ ನೀಡಬೇಕು ಎಂದರು.

ಆಕಾಶವಾಣಿ ಮಹಾ ನಿರ್ದೇಶಕರಾದ ರಾಜೇಂದ್ರ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಆಕಾಶವಾಣಿ ಇದೀಗ ತಲುಪಲಾರದ ಪ್ರದೇಶಗಳನ್ನು ತಲುಪುವ ಪ್ರಯತ್ನ ಮಾಡುತ್ತಿದೆ. ಹಾಗೂ ಎಲ್ಲೆಡೆ ಮಾಹಿತಿ, ಶಿಕ್ಷಣ ಮತ್ತು ರಂಜನೆಯನ್ನು ಒದಗಿಸುತ್ತಾ ಬಂದಿದ್ದು, ರಾಷ್ಟ್ರೀಯ ಐಕ್ಯತೆಯ ಪ್ರತೀಕವಾಗಿದೆ ಮತ್ತು ವಿಶ್ವಾಸಾರ್ಹ ಧ್ವನಿಯಾಗಿ ಹೊರಹೊಮ್ಮಿದೆ ಎಂದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ, ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೌರವ್ ದ್ವಿವೇದಿ, ಮಾಜಿ ಶಾಸಕರಾದ ಕುಮಾರಸ್ವಾಮಿ, ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ದಕ್ಷಿಣ ವಲಯ(ಬ್ರಾಡ್‌ಕಾಸ್ಟ್ ಆಪರೇಷನ್ಸ್)ದ ಅಪರ ಮಹಾ ನಿರ್ದೇಶಕಿ ಗೀತಾ ರಾಣಿ, ಆಕಾಶವಾಣಿ ಭದ್ರಾವತಿಯ ಮುಖ್ಯಸ್ಥರಾದ ಎಸ್. ಆರ್ ಭಟ್, ಚೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷರಾದ ಗೋಪಿನಾಥ್, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

   

Tags: Bhadravati All India Radio FMKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaRadioShimogaShivamoggaNewsಭದ್ರಾವತಿ ಆಕಾಶವಾಣಿಗೆ ಎಫ್.ಎಂಮಲೆನಾಡು_ಸುದ್ಧಿರೇಡಿಯೋಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ತುಮಕೂರು – ದಾವಣಗೆರೆ ನೇರ ರೈಲು ಮಾರ್ಗ ಪೂರ್ಣ | ಯಾವಾಗ ಸಂಚಾರ ಆರಂಭ?

Next Post

ದೆಹಲಿ ಅಬಕಾರಿ ನೀತಿ ಪ್ರಕರಣ | ಅರಂವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಖುಲಾಸೆ

kalpa News

kalpa News

Next Post
ದೆಹಲಿ ಅಬಕಾರಿ ನೀತಿ ಪ್ರಕರಣ | ಅರಂವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಖುಲಾಸೆ

ದೆಹಲಿ ಅಬಕಾರಿ ನೀತಿ ಪ್ರಕರಣ | ಅರಂವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಖುಲಾಸೆ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL