Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅವರಪ್ಪನ ಕೈನಿಂದಲೂ ಆರ್ ಎಸ್ ಎಸ್‌ಗೆ ಬುದ್ದಿ ಕಲಿಸಲು ಆಗಲ್ಲ: ಈಶ್ವರಪ್ಪ ಕಟು ಉತ್ತರ

October 4, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಹೇಡಿಗಳಂತೆ ಗೋಡೆಗಳ ಮೇಲೆ, ರಸ್ತೆ ಮೇಲೆ ಮರುಜನ್ಮ ತಗೊಂಡು ಬರುತ್ತೇವೆ. ಚಡ್ಡಿಗಳಿಗೆ ಬುದ್ದಿ ಕಲಿಸುತ್ತೇವೆ ಅಂತಾ ಬರೆದಿದ್ದಾರೆ. ಅವರಪ್ಪನ ಕೈನಿಂದಲೂ ಆರ್ ಎಸ್ ಎಸ್‌ಗೆ ಬುದ್ದಿ ಕಲಿಸಲು ಆಗಲ್ಲ. ವಿಧ್ವಂಸಕ ಚಟುವಟಿಕೆ ಮಾಡುವವರಿಗೆ ಬಿಗಿ ಕ್ರಮ ಕೈಗೊಳ್ಳಬೇಕು ಎಂಬುದೇ ಆರ್ ಎಸ್ ಎಸ್ ಉದ್ದೇಶ ಎಂದು ಶಾಸಕ ಈಶ್ವರಪ್ಪ ಕಟುವಾಗಿ ಉತ್ತರ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ವಿರುದ್ಧ ರಸ್ತೆ ಮೇಲೆ ಬರೆದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದರು.
ಕೊಲೆ ಸುಲಿಗೆ ಮಾಡುತ್ತಿರುವ ಪಿಎಫ್‌ಐಗೆ ವಿದೇಶಿ ಹಣ ಬರುತ್ತಿದೆ. ಪಿಎಫ್‌ಐ ನಿಷೇಧ ಮಾಡಿದ ನಂತರವಾದರೂ ಅವರ ತಂದೆ ತಾಯಿಯರು ಹುಷಾರಾಗಿರಬೇಕಿತ್ತು. ತಪ್ಪೊಪ್ಪಿಗೆ ಒಪ್ಪಿಕೊಂಡು ರಾಷ್ಟ್ರವಾದಿಗಳ ಜೊತೆ ಇರಬೇಕಿತ್ತು. ಭಾರತದ ಮುಸಲ್ಮಾನ ಯುವಕರನ್ನು ದಾರಿ ತಪ್ಪಿಸುವ ಕೆಲಸ ಆಗುತ್ತಿದೆ. ಭಯೋತ್ಪಾದಕ ಚಟುವಟಿಕೆಯಲ್ಲಿ ಭಾಗಿಯಾಗಲು ಪ್ರೇರೇಪಿಸುತ್ತಿರುವ ಪಿಎಫ್‌ಐ ಒಂದು ರಾಷ್ಟ್ರದ್ರೋಹಿ ಸಂಘಟನೆಯಾಗಿದ್ದು, ಇದೆಲ್ಲಾ ಗಮನಿಸಿಯೇ ಪಿಎಫ್‌ಐ ನಿಷೇಧಿಸಲಾಗಿದೆ ಎಂದು ಶಾಸಕ ಈಶ್ವರಪ್ಪ ಹೇಳಿದರು.

Also read: ಭಾರಿ ಮಳೆಯಿಂದ ತೊಟ್ಟಿಲು ಸೇತುವೆಗೆ ಹಾನಿ: ಸ್ಥಳಕ್ಕೆ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಭೇಟಿ

ಮುಸ್ಲಿಂ ಯುವಕರು ಅನೇಕರು ರಾಷ್ಟ್ರ ಭಕ್ತರಿದ್ದಾರೆ. ಪಿಎಫ್‌ಐ ಕುಮ್ಮಕ್ಕಿನಿಂದ ಯುವಕರು ಹಾಳಾಗಿದ್ದಾರೆ. ರಾಷ್ಟ್ರದ್ರೋಹಿ ಚಟುವಟಿಕೆಯಲ್ಲಿ ಭಾಗವಹಿಸಿ, ಜೈಲಿಗೆ ಹೋಗಿ ಇಡೀ ಜೀವನ ಕಳೆದುಕೊಳ್ಳುತ್ತಾರೆ. ದಾರಿ ತಪ್ಪಿರುವ ಮುಸ್ಲಿಂ ಗೂಂಡಾಗಳಿಗೆ ಅವರ ಹಿರಿಯರು ಬುದ್ದಿ ಹೇಳಬೇಕು ಎಂದರು.
ಕಿಡಿಗೇಡಿಗಳ ಗೂಂಡಾಗಿರಿ ಹೇಳಿಕೆಗೆ ಯಾವ ಆರ್‌ಎಸ್‌ಎಸ್‌ನವರು ಹೆದರುವುದಿಲ್ಲ. ಕತ್ತಲೆಯಲ್ಲಿ ಹೇಡಿಗಳ ರೂಪದಲ್ಲಿ ರಸ್ತೆಯಲ್ಲಿ ಬರೆದು ಹೋಗಿದ್ದಾರೆ. ಇದರ ಬಗ್ಗೆ ಒಬ್ಬನೇ ಒಬ್ಬ ಕಾಂಗ್ರೆಸ್ಸಿಗನು ಮಾತನಾಡಿಲ್ಲ. ಕಾಂಗ್ರೆಸ್ಸಿಗರ ಕುಮ್ಮಕ್ಕಿನಿಂದಲೇ ಇಲ್ಲಿಯವರೆಗೆ ರಾಷ್ಟ್ರದ್ರೋಹಿಗಳಾಗಿ ಮುಂದುವರಿದಿದ್ದಾರೆ. ಕಾಂಗ್ರೆಸ್ ನವರು ನಮ್ಮ ಜೊತೆ ಇದ್ದಾರೆ ಎಂಬ ಧೈರ್ಯದಿಂದಲೇ ಪಿಎಫ್‌ಐ ನವರು ರಾಷ್ಟ್ರದ್ರೋಹಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಯಾವುದೇ ಬೇರೆ ಹೆಸರಿನಲ್ಲಿ ಪಿಎಫ್ ಐ ಬಂದರೂ ಅವರ ಸೊಂಟ ಮುರಿಯುವ ಕೆಲಸವನ್ನು ಮೋದಿ ಹಾಗೂ ಅಮಿತ್ ಶಾ ಮಾಡುತ್ತಾರೆ ಎಂದು ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಿದರು.

ಆರ್‌ಎಸ್‌ಎಸ್ ರಾಷ್ಟ್ರ ಪ್ರೇಮ ಜಾಗೃತಿ ಮಾಡುತ್ತಿದೆ. ರಾಷ್ಟ್ರದ್ರೋಹಕ್ಕೆ ಬೆಂಬಲ ಕೊಡ್ತಿರೋದು ಪಿಎಫ್‌ಐ. ಪಿಎಫ್‌ಐಗೆ ಸಾಥ್ ಕೊಡುತ್ತಿರುವುದು ಕಾಂಗ್ರೆಸ್. ನಿಮ್ಮ ಮಕ್ಕಳಿಗೆ ಇಂತಹ ಪರಿಸ್ಥಿತಿ ಬಂದಿದ್ರೆ ಕಾಂಗ್ರೆಸ್‌ನವರು ಏನು ಮಾಡುತ್ತಿದ್ರಿ? ಕಾಂಗ್ರೆಸ್‌ನವರು ಪಿಎಫ್‌ಐ ಅವರಿಗೆ ಬುದ್ದಿ ಹೇಳಬೇಕು ಎಂದು ಹೇಳಿದರು.
ಪರೇಶ್ ಮೆಸ್ತಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ ಅವರು, ಪರೇಶ್ ಮೆಸ್ತಾ ಪ್ರಕರಣವನ್ನು ಮರು ತನಿಖೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಅವರ ತಂದೆ ತಾಯಿ, ಹಿಂದು ಯುವಕರು ಹೇಳುತ್ತಿದ್ದಾರೆ, ಸಿದ್ದರಾಮಯ್ಯ ಅವರ ಕಾಲದಲ್ಲಿ ಸರಿಯಾಗಿ ತನಿಖೆ ಆಗಲಿಲ್ಲ. ಬಹಳಷ್ಟು ದಾಖಲಾತಿ ಮುಚ್ಚಿ ಹಾಕಿದ್ದಾರೆ. ಮುಚ್ಚಿ ಹಾಕಿರೋದಕ್ಕೆ ಸರಿಯಾದ ತನಿಖೆಯ ಸರಿಯಾದ ವರದಿ ಬಂದಿಲ್ಲ. ಮರು ತನಿಖೆ ಮಾಡುವಂತೆ ಅವರ ತಂದೆ ತಾಯಿ ಹಾಗೂ ಹಿಂದು ಯುವಕರು ಆಗ್ರಹಿಸಿದ್ದಾರೆ. ತಾವೂ ಸಹ ಮರು ತನಿಖೆಗೆ ಒತ್ತಾಯಿಸುತ್ತೇನೆ ಎಂದರು.

ಅ.30ರಂದು ಬಿಜೆಪಿ ಓಬಿಸಿ ಸಮಾವೇಶ:
ಅ.30ರಂದು ಗುಲ್ಬರ್ಗಾದಲ್ಲಿ ರಾಜ್ಯದ ಹಿಂದುಳಿದ ವರ್ಗದ ದೊಡ್ಡ ಸಮಾವೇಶ ನಡೆಯುತ್ತಿದೆ. ೫ ಲಕ್ಷಕ್ಕೂ ಹೆಚ್ಚು ಹಿಂದುಳಿದವರು ಈ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ. ಐದು ತಂಡಗಳಲ್ಲಿ ಈಗಾಗಲೇ ಪ್ರವಾಸ ಮಾಡಲು ಯೋಜನೆ ರೂಪಿಸಲಾಗಿದ್ದು, ನಿರೀಕ್ಷೆಗೂ ಮೀರಿ ಬೆಂಬಲ ಸಿಗುತ್ತಿದೆ. ಹಿಂದುಳಿದವರ ವರ್ಗದ ಸಮಾಜ ಬಿಜೆಪಿ ಜೊತೆ ಇದೆ ಎಂಬುದು ಈ ಸಮಾವೇಶದಿಂದ ತಿಳಿಯುತ್ತದೆ ಎಂದರು.
ರಾಜ್ಯದಲ್ಲಿ ಇದೇ ರೀತಿ ದಲಿತ ಮೋರ್ಚಾದಿಂದ ದೊಡ್ಡ ಸಮಾವೇಶ ನಡೆಯುತ್ತದೆ. ಯುವ ಮೋರ್ಚಾ, ಮಹಿಳಾ ಸಮಾವೇಶ ಸಹ ಚುನಾವಣೆಗೂ ಮೊದಲೇ ನಡೆಯಲಿದೆ. ಇಡೀ ಸಮಾಜ ಬಿಜೆಪಿ ಜೊತೆ ಇದೆ ಎಂಬುದನ್ನು ತೋರಿಸೋದು ಈ ಸಮಾವೇಶದ ಉದ್ದೇಶ ಎಂದು ತಿಳಿಸಿದರು.

ಮಹಾರಾಷ್ಟ್ರ, ಉತ್ತರಪ್ರದೇಶ, ನಮ್ಮ ರಾಜ್ಯದಲ್ಲೂ ಸಹ ಗುಲಾಮಗಿರಿಯ ಸಂಕೇತವನ್ನು ತೆಗೆದು ಹಾಕುವ ಪ್ರಯತ್ನ ನಡೆಯುತ್ತಿದೆ. ಹಲೋ ಎನ್ನುವ ಬದಲು ವಂದೇ ಮಾತರಂ ಎನ್ನಬೇಕು ಎಂಬ ಪ್ರಯತ್ನ ನಡೆಯುತ್ತಿದೆ. ರಾಷ್ಟ್ರಭಕ್ತರಿಗೆ ಸ್ಫೂರ್ತಿ ಕೊಡುವ ಕಾರ್ಯಕ್ರಮ ಆಗುತ್ತಿದ್ದು, ಅನೇಕ ಕಡೆ ಬ್ರಿಟಿಷರ ಪ್ರತಿಮೆ ತೆಗೆದು ಹಾಕಲಾಗುತ್ತಿದೆ. ಅನೇಕ ಕಡೆ ರಸ್ತೆಗಳಿಗೆ ರಾಷ್ಟ್ರ ಭಕ್ತರ ಹೆಸರಿಡುವ ಪ್ರಯತ್ನ ನಡೆಯುತ್ತಿದೆ. ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ಈ ಕೆಲಸ ಮಾಡಬೇಕಿತ್ತು. ಕಾಂಗ್ರೆಸ್ ಮಾಡೋದು ವಿಳಂಬ ಆಗಿರುವುದರಿಂದ ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯದಲ್ಲಿ ಈ ಕಾರ್ಯ ಭರದಿಂದ ಸಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಭಾರಿ ಮಳೆಯಿಂದ ತೊಟ್ಟಿಲು ಸೇತುವೆಗೆ ಹಾನಿ: ಸ್ಥಳಕ್ಕೆ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಭೇಟಿ

Next Post

ಪಶ್ವಿಮ ಘಟ್ಟದ ಜೀವ ವೈವಿಧ್ಯತೆ ಕಾಪಾಡಿಕೊಳ್ಳಬೇಕು: ಡಾ. ಬಿ.ಎಂ.ಕೆ. ರೆಡ್ಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪಶ್ವಿಮ ಘಟ್ಟದ ಜೀವ ವೈವಿಧ್ಯತೆ ಕಾಪಾಡಿಕೊಳ್ಳಬೇಕು: ಡಾ. ಬಿ.ಎಂ.ಕೆ. ರೆಡ್ಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!