ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹಾಲಿ ಸಂಸದ ಬಿ.ವೈ. ರಾಘವೇಂದ್ರ B Y Raghavendra ಅವರು ನಾಲ್ಕನೇ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಲಿ ಎಂದು ಪ್ರಾರ್ಥಿಸಿ ಜಿಲ್ಲಾ ಜಂಗಮ ಮಹಿಳಾ ಸಮಾಜದ ವತಿಯಿಂದ ವಿಶೇಷ ರುದ್ರಾಭಿಷೇಕ, ಪೂಜೆ ನೆರವೇರಿಸಲಾಯಿತು.
ವಿನೋಬನಗರದಲ್ಲಿರುವ ಶಿವಾಲಯದಲ್ಲಿ ಜಿಲ್ಲಾ ಜಂಗಮ ಮಹಿಳಾ ಸಮಾಜದಿಂದ ವಿಶೇಷ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಲಾಯಿತು.
ಪೂಜೆಯಲ್ಲಿ ಸಂಸದ ರಾಘವೇಂದ್ರ ಅವರು ದಂಪತಿ ಸಹಿತ ಪಾಲ್ಗೊಂಡು, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
Also read: ಬ್ರಹ್ಮ ಬಂದು ಬೇಡ ಎಂದರೂ ಚುನಾವಣೆಗೆ ಸ್ಪರ್ಧಿಸುವುದು ಖಚಿತ: ಈಶ್ವರಪ್ಪ ಸ್ಪಷ್ಟನೆ
ಜಿಲ್ಲಾ ಜಂಗಮ ಸಮಾಜದ ಅಧ್ಯಕ್ಷೆ ಸುಜಯ್ಯ ಪ್ರಸಾದ್, ಕಾರ್ಯದರ್ಶಿ ಶೈಲಜಾ, ನಗರ ಜಂಗಮ ಸಮಾಜದ ಅಧ್ಯಕ್ಷೆ ಗಿರಿಜಮ್ಮ, ಕಾರ್ಯದರ್ಶಿ ಸುಷ್ಮಾ, ಪ್ರಮುಖರಾದ ಮಹೇಶ್ ಮೂರ್ತಿ, ರಾಜಶೇಖರ್, ಮುರುಗೇಶ್ ಅವರು ಸೇರಿದಂತೆ ಇನ್ನೂ ಅನೇಕ ಪ್ರಮುಖರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post