ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಇಲಾಖೆಯ ಸಿಬ್ಬಂದಿ ಹಾಗೂ ಕೋವಿಡ್ ಗೊಸ್ಕರ್ ಕಾರ್ಯ ನಿರ್ವಹಿಸುತ್ತಿರುವವರನ್ನು ಫ್ರಂಟ್ ಲೈನ್ ವಾರಿಯರ್ಸ್ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಪರಿಸ್ಥಿತಿ ಅವಲೊಕಿಸಲು ಮತ್ತು ಸೊಂಕು ನಿಯಂತ್ರಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ರಾಜ್ಯದ ಮೈಸೂರು ಮತ್ತು ಬೆಂಗಳೂರು ಕಂದಾಯ ವಿಭಾಗಗಳ ಒಟ್ಟು 3000 ಗ್ರಾಮ ಪಂಚಾಯತ್ ಅಧ್ಯಕ್ಷರುಗಳ ಮತ್ತು ಪಿಡಿಓ ಹಾಗೂ ಇಓ ಮತ್ತು ಸಿ.ಇ.ಓ ಅಧಿಕಾರಿಗಳೊಂದಿಗೆ ಸಚಿವರು ನೇರವಾಗಿ ಸಂವಾದ ನಡೆಸಿ, ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಹಲವಾರು ಅಧಿಕಾರಿಗಳು, ನಮ್ಮ ಇಲಾಖೆಯ ಸಿಬ್ಬಂದಿ ಕೋವಿಡ್ಗೋಸ್ಕರ್ ಕಾರ್ಯ ನಿರ್ವಹಿಸುತ್ತಿರುವವರನ್ನು ಫ್ರಂಟ್ ಲೈನ್ ವಾರಿಯರ್ಸ್ ಪಟ್ಟಿಯಲ್ಲಿ ಸೇರಿಸುವ ಕುರಿತು ವಿಚಾರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈಗಾಗಲೇ ನಮ್ಮ ಇಲಾಖೆಯಿಂದ ಈ ಸಂಬಂಧ ಒಂದು ಆದೇಶ ಹೊರಡಿಸಲಾಗಿದೆ. ಇನ್ನೂ ಅದರ ಬಗ್ಗೆ ಗೊಂದಲ ಇದ್ದರೆ ಅದನ್ನು ಕೂಡ ಬಗೆಹರಿಸಲಾಗುವುದು ಮತ್ತು ಉಳಿದ ಇಲಾಖೆಗಳಲ್ಲಿ ನೀಡುವಂತಹ ಎಲ್ಲ ವಿಶೇಷ ಸೌಲಭ್ಯಗಳನ್ನು ನಮ್ಮ ಇಲಾಖೆಯಿಂದ ಕೈಗೊಳ್ಳಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post